ನಟಿ ಸಂಜನಾ ಗುಲ್ರಾನಿ 
ರಾಜ್ಯ

ಏಕಾಏಕಿ ದಾಳಿ ಮಾಡಿದ್ದೀರಿ, ನಾನು ಬರೋದಿಲ್ಲ: ವಶಕ್ಕೆ ಪಡೆಯಲು ತೆರಳಿದ ಅಧಿಕಾರಿಗಳ ಮೇಲೆ ಎಗರಾಡಿದ ನಟಿ ಸಂಜನಾ

ನಾನೇಕೆ ನಿಮ್ಮೊಂದಿಗೆ ಬರಬೇಕು, ನೀವು ನನಗೆ ನೋಟಿಸ್ ನೀಡಿಲ್ಲ, ಏಕಾಏಕಿ ದಾಳಿ ನಡೆಸಿದ್ದೀರಿ? ನೇನೇನು ಆರೋಪಿನಾ? ನಾನು ಬರುವುದಿಲ್ಲ ಎಂದು ಡ್ರಗ್ಸ್ ದಂಧೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಶಕ್ಕೆ ಪಡೆಯಲು ಮುಂದಾದ ಸಿಸಿಬಿ ಪೊಲೀಸರ ಮೇಲೆ ನಟಿ ಸಂಜನಾ ಗುಲ್ರಾನಿಯವರು ಕೂಗಾಡಿ ರಂಪಾಟ ಮಾಡಿದ್ದಾರೆಂದು ವರದಿಗಳಿಂದ ತಿಳಿದುಬಂದಿದೆ. 

ಬೆಂಗಳೂರು: ನಾನೇಕೆ ನಿಮ್ಮೊಂದಿಗೆ ಬರಬೇಕು, ನೀವು ನನಗೆ ನೋಟಿಸ್ ನೀಡಿಲ್ಲ, ಏಕಾಏಕಿ ದಾಳಿ ನಡೆಸಿದ್ದೀರಿ? ನೇನೇನು ಆರೋಪಿನಾ? ನಾನು ಬರುವುದಿಲ್ಲ ಎಂದು ಡ್ರಗ್ಸ್ ದಂಧೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಶಕ್ಕೆ ಪಡೆಯಲು ಮುಂದಾದ ಸಿಸಿಬಿ ಪೊಲೀಸರ ಮೇಲೆ ನಟಿ ಸಂಜನಾ ಗುಲ್ರಾನಿಯವರು ಕೂಗಾಡಿ ರಂಪಾಟ ಮಾಡಿದ್ದಾರೆಂದು ವರದಿಗಳಿಂದ ತಿಳಿದುಬಂದಿದೆ. 

ಇಂದು ಬೆಳಿಗ್ಗೆಯಷ್ಟೇ ಇಂದಿರಾನಗರದಲ್ಲಿರುವ ಸಂಜನಾ ಅವರ ಮನೆ ಮೇಲೆ ಸಿಸಿಬಿ ಪೊಲೀಸ್ ಅಧಿಕಾರಿಗಳು ದಾಳಿ ನಡೆಸಿದ್ದು, ಶೋಧ ಕಾರ್ಯ ನಡೆಸಿದ್ದಾರೆ. 

ಸಿಸಿಬಿ ದಾಳಿ ವೇಳೆ ನಟಿ ಸಂಜನಾ ಮನೆಯಲ್ಲಿ ಮಲಗಿದ್ದು, ನಿದ್ರೆಯಿಂದ ಎದ್ದಿರಲಿಲ್ಲ. ಸಿಸಿಬಿ ಪೊಲೀಸರು ಮನೆಯ ಬಳಿ ಬಂದ ಸಂದರ್ಭದಲ್ಲಿ ಸಂಜನಾ ತಾಯಿ ಬಾಗಿಲು ತೆಗೆದಿದ್ದಾರೆ. ನಂತರ ನೋಟಿಸ್ ತೋರಿಸಿದ ಅಧಿಕಾರಿಗಳು ಮನೆಯಲ್ಲಿ ಶೋಧ ಕಾರ್ಯಾಚರಣೆ ನಡೆಸಿದ್ದಾರೆ. ಬಳಿಕ ಮಲಗಿದ್ದ ಸಂಜನಾ ಅವರಿಗೆ ವಿಚಾರವನ್ನು ತಿಳಿಸಿ, ತನಿಖೆಗೆ ಸಹಕಾರ ನೀಡುವಂತೆ ಅಧಿಕಾರಿಗಳು ಸೂಚಿಸಿದ್ದಾರೆ. ಶೋಧ ಕಾರ್ಯ ಪೂರ್ಣಗೊಂಡ ಬಳಿಕ ಸಂಜನಾ ಅವರನ್ನು ವಶಕ್ಕೆ ಪಡೆಯಲು ಅಧಿಕಾರಿಗಳು ಮುಂದಾಗಿದ್ದಾರೆ. 

ಈ ವೇಳೆ ಕೂಗಾಡಿರುವ ಸಂಜನಾ ಅವರು, ಮನೆಯಲ್ಲಿ ಏನೂ ಸಿಗದೇ ಇದ್ದರೂ ನನ್ನನ್ನು ವಶಕ್ಕೆ ಪಡೆಯುತ್ತಿದ್ದೀರಿ. ನಾನೇಕೆ ನಿಮ್ಮೊಂದಿಗೆ ಬರಬೇಕು. ನನಗೆ ನೀವು ನೋಟಿಸ್ ಕೊಟ್ಟಿಲ್ಲ. ಏಕಾಏಕಿ ದಾಳಿ ನಡೆಸಿದ್ದೀರಿ. ನಾನೇನು ಆರೋಪಿನಾ? ನಾನು ಬರುವುದಿಲ್ಲ ಎಂದು ರಂಪಾಟ ಮಾಡಿದ್ದಾರೆಂದು ತಿಳಿದುಬಂದಿದೆ. 

ಸಂಜಾನ ಅವರು ತೀವ್ರವಾಗಿ ಕೂಗಾಡುತ್ತಿದ್ದಂತೆಯೇ ಅಧಿಕಾರಿಗಳು, ನೀವೀಗ ನಮ್ಮ ವಶದಲ್ಲಿದ್ದೀರಿ. ಹೀಗಾಗಿ ನಾವು ನೀವು ಹೇಳಿದಂತೆ ಕೇಳಲು ಸಾಧ್ಯವಿಲ್ಲ. ನಾವು ಹೇಳಿದ್ದನ್ನು ನೀವು ಕೇಳಬೇಕು. ಸರ್ಜ್ ವಾರೆಂಟ್ ಸಂದರ್ಭದಲ್ಲಿ ವಿರೋಧ ಮಾಡಿದರೆ ನಿಮಗೇ ಕಷ್ಟವಾಗುತ್ತದೆ ಎಂದು ಹೇಳಿ, ಸಂಜನಾ ಅವರನ್ನು ತಣ್ಣಗಾಗುವಂತೆ ಮಾಡಿದ್ದಾರೆಂದು ವರದಿಗಳು ತಿಳಿಸಿವೆ. 

ಇನ್ನು ಸಂಜನಾ ಅವರನ್ನು ಇದೀಗ ವಶಕ್ಕೆ ಪಡೆದಿರುವ ಪೊಲೀಸರು, ಸಂಜನಾ ಅವರ ಮೊಬೈಲ್, ಪರ್ಸ್ ಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆಂದು ತಿಳಿದುಬಂದಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 13 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಧರ್ಮಸ್ಥಳ ಕೇಸ್: ತನಿಖೆ ಶೀಘ್ರಗತಿ ಪೂರ್ಣಗೊಳಿಸಲು SIT ಪ್ರಯತ್ನ; ಗೃಹ ಸಚಿವ ಡಾ.ಜಿ.ಪರಮೇಶ್ವರ್

ಕೃಷ್ಣಾ ಮೇಲ್ದಂಡೆ ಯೋಜನೆ-3: ಸರ್ವಪಕ್ಷ ನಾಯಕರೊಂದಿಗೆ ಶೀಘ್ರದಲ್ಲೇ ಸಭೆ; ಡಿಕೆ.ಶಿವಕುಮಾರ್

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

SCROLL FOR NEXT