ಸಂಗ್ರಹ ಚಿತ್ರ 
ರಾಜ್ಯ

ಕೊರೋನಾ: ಸಾಮಾಜಿಕ ಅಂತರ ನಿಯಮ ಕೈಬಿಟ್ಟ ಕೆಎಸ್ಆರ್'ಟಿಸಿ

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (ಕೆಎಸ್‌ಆರ್‌ಟಿಸಿ) ಮತ್ತು ಇತರ ಬಸ್‌ಗಳಲ್ಲಿನ ಸಾಮಾಜಿಕ ಅಂತರ ಕಾಯ್ದುಕೊಳ್ಳುವ ನಿಯಮಗಳನ್ನು ಹಿಂಪಡೆಯಲಾಗಿದೆ ಎಂದು ಉಪಮುಖ್ಯಮಂತ್ರಿ ಮತ್ತು ಸಾರಿಗೆ ಸಚಿವ ಲಕ್ಷ್ಮಣ್ ಸವದಿ ಹೇಳಿದ್ದಾರೆ. 

ಕಲಬುರಗಿ: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (ಕೆಎಸ್‌ಆರ್‌ಟಿಸಿ) ಮತ್ತು ಇತರ ಬಸ್‌ಗಳಲ್ಲಿನ ಸಾಮಾಜಿಕ ಅಂತರ ಕಾಯ್ದುಕೊಳ್ಳುವ ನಿಯಮಗಳನ್ನು ಹಿಂಪಡೆಯಲಾಗಿದೆ ಎಂದು ಉಪಮುಖ್ಯಮಂತ್ರಿ ಮತ್ತು ಸಾರಿಗೆ ಸಚಿವ ಲಕ್ಷ್ಮಣ್ ಸವದಿ ಹೇಳಿದ್ದಾರೆ. 

ಸುದ್ದಿಗಾರರೊಂಡಿದೆ ಮಾತನಾಡಿದ ಅವರು, “ಸಾರ್ವಜನಿಕರು ಇನ್ನು ಮುಂದೆ ಸಾಮಾಜಿಕ ಅಂತರ ಕಾಯ್ದುಕೊಳ್ಳುವ ಅಗತ್ಯವಿಲ್ಲ. ದ್ವಿಚಕ್ರ, ತ್ರಿಚಕ್ರ ಅಥವಾ ವಿಮಾನಗಳಲ್ಲಿ ಯಾವುದೇ ನಿರ್ಬಂಧಗಳನ್ನು ಅನುಸರಿಸಲಾಗುತ್ತಿಲ್ಲ. ಹೀಗಿರುವಾಗ ಬಸ್‌ಗಳಲ್ಲಿ ಪ್ರಯಾಣಿಕರ ಸಂಖ್ಯೆಯನ್ನು ನಿರ್ಬಂಧಿಸುವುದರಲ್ಲಿ ಯಾವುದೇ ಅರ್ಥವಿಲ್ಲ. ಆದರೆ, ಬಸ್‌ಗಳಲ್ಲಿ ಪ್ರಯಾಣಿಸುವಾಗ ಸಾರ್ವಜನಿಕರು ಕಡ್ಡಾಯವಾಗಿ ಮಾಸ್ಕ್ ಗಳನ್ನು ಧರಿಸಬೇಕೆಂದು ಹೇಳಿದ್ದಾರೆ. 

ರಾಜ್ಯದ ವಿವಿಧ ಮಾರ್ಗಗಳಲ್ಲಿ ಬಸ್ ಗಳು ಸಂಚಾರ ನಡೆಸುತ್ತಿವೆ. ಬೇಡಿಕೆಗಳಿಗೆ ಅನುಗುಣವಾಗಿ ಬಸ್ ಗಳನ್ನು ನಿಯೋಜನೆ ಮಾಡಲಾಗುತ್ತಿದೆ. ಕರ್ನಾಟಕ ಮತ್ತು ಆಂಧ್ಯಪ್ರದೇಶದ ನಡುವೆ ಬಸ್ ಗಳನ್ನು ಬಿಡಲಾಗಿದೆ. ತೆಲಂಗಾಣ, ತಮಿಳುನಾಡು, ಗೋವಾ ಹಾಗೂ ಪಾಂಡಿಚೆರಿ ರಾಜ್ಯಗಳಿಗೂ ಪತ್ರ ಪರೆಯಲಾಗಿದ್ದು, ಅಂತರ್ ರಾಜ್ಯ ಬಸ್ ಗಳ ಸೇವೆ ಪ್ರಾರಂಭಿಸುವಂತೆ ತಿಳಿಸಿದೆ. ಆದರೆ, ಈ ವರೆಗೂ ಆ ರಾಜ್ಯಗಳಿಂದ ಯಾವುದೇ ಪ್ರತಿಕ್ರಿಯೆಗಳೂ ಬಂದಿಲ್ಲ. ಈ ಕುರಿತು ಶೀಘ್ರದಲ್ಲಿಯೇ ಅಧಿಕಾರಿಗಳೊಂದಿಗೆ ಮಾತುಕತೆ ನಡೆಸಲಾಗುತ್ತದೆ. ಮಹಾರಾಷ್ಟ್ರ ರಾಜ್ಯಕ್ಕಿನ್ನೂ ಪತ್ರ ಬರೆದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. 

ಸಾರಿಗೆ ಇಲಾಖೆಗೆ ಪ್ರತೀನಿತ್ಯ ರೂ.2.5 ಕೋಟಿ ನಷ್ಟ ಎದುರಾಗುತ್ತಿದೆ. ಆದರೂ, ಸಿಬ್ಬಂದಿಗಳಿಗೆ ಸರ್ಕಾರದ ಅನುದಾನದಲ್ಲಿ ವೇತನವನ್ನು ನೀಡಲಾಗುತ್ತಿದೆ ಎಂದಿದ್ದಾರೆ. 

ಸಂಪುಟ ವಿಸ್ತರಣೆ ಅಥವಾ ಸಂಪುಟ ಪುನಾರಚನೆ ಯಾವಾಗ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ಈ ನಿರ್ಧಾರ ಮುಖ್ಯಮಂತ್ರಿಗಳಿಗೆ ಬಿಟ್ಟದ್ದಾಗಿದೆ. ಅಧಿವೇಶನಕ್ಕೂ ಮುನ್ನ ಅಥವಾ ಅಧಿವೇಶನದ ಬಳಿಕವಾದರೂ ನಡೆಯಬಹುದು. ಈ ಬಗ್ಗೆ ಮುಖ್ಯಮಂತ್ರಿಗಳು ಪಕ್ಷದ ಹೈಕಮಾಂಡ್ ಜೊತೆಗೆ ಸಭೆ ನಡೆಸಿ ಅಂತಿನ ನಿರ್ಧಾರ ಕೈಗೊಳ್ಳಲಿದ್ದಾರೆಂದು ತಿಳಿಸಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಾದ್ಯಂತ ಭಾರೀ ಮಳೆ: ಪ್ರವಾಹ, ಭೂಕುಸಿತದಿಂದ ಮೂವರು ಸಾವು; ಕೊಚ್ಚಿ ಹೋದ ಸೇತುವೆ; Video

Indian Navyಗೆ ಮತ್ತಷ್ಟು ಬಲ: INS Udaygiri, INS Himgiri ಯುದ್ಧನೌಕೆಗಳು ಸೇರ್ಪಡೆ!

ಬಿಹಾರ: ಇನ್ನು 40-50 ವರ್ಷ ಅಧಿಕಾರದಲ್ಲಿ ಇರ್ತೀವಿ ಅಂತಾ ಅಮಿತ್ ಶಾ ಗೆ ಹೇಗೆ ಗೊತ್ತು? ರಾಹುಲ್ ಗಾಂಧಿ

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

Tariff ಬೆನ್ನಲ್ಲೇ ಅಮೆರಿಕ ಅಧ್ಯಕ್ಷರಿಗೆ ಯುದ್ಧೋನ್ಮಾದ: "ಯುದ್ಧ ಇಲಾಖೆ" ಬಗ್ಗೆ ಟ್ರಂಪ್ ಒಲವು!

SCROLL FOR NEXT