ರಾಜ್ಯ

ಕೊರೋನಾಗೆ ಕುಣಿಗಲ್ ಸರ್ಕಾರಿ ಆಸ್ಪತ್ರೆ ವೈದ್ಯ ಬಲಿ: ಶ್ರೀರಾಮುಲು ಸಂತಾಪ

Vishwanath S

ಕುಣಿಗಲ್/ಬೆಂಗಳೂರು: ಕೊರೋನಾ ಸೋಂಕಿಗೆ ಒಳಗಾಗಿ ಚಿಕಿತ್ಸೆ ಪಡೆಯುತ್ತಿದ್ದ ಕುಣಿಗಲ್ ನ ಸರ್ಕಾರಿ ಆಸ್ಪತ್ರೆಯ ಯುವ ವೈದ್ಯ ಡಾ. ದೇವರಾಜ್ ನಿಧನರಾಗಿದ್ದಾರೆ.

ಅವರಿಗೆ 37 ವರ್ಷ ವಯಸ್ಸಾಗಿತ್ತು. ಕೊರೋನಾ ವಾರಿಯರ್ಸ್ ಆಗಿ ಕುಣಿಗಲ್ ಸರ್ಕಾರಿ ಆಸ್ಪತ್ರೆಯಲ್ಲಿ ಸೇವೆ ಸಲ್ಲಿಸುತ್ತಿದ್ದ ಅವರಿಗೆ ಇತ್ತೀಚೆಗೆ ಕೊರೋನಾ ಸೋಂಕು ದೃಢಪಟ್ಟಿತ್ತು.

ಮನೆಯಲ್ಲಿಯೇ ಚಿಕಿತ್ಸೆ ಪಡೆಯುತ್ತಿದ್ದ ಅವರಿಗೆ ಸೋಮವಾರ ಉಸಿರಾಟದ ಸಮಸ್ಯೆ ಕಾಣಿಸಿಕೊಂಡಿತ್ತು. ಈ ಹಿನ್ನೆಲೆಯಲ್ಲಿ ಕುಣಿಗಲ್ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. 

ಆರೋಗ್ಯ ಸ್ಥಿತಿ ಬಿಗಡಾಯಿಸಿದ್ದರಿಂದ ಮಂಗಳವಾರ ಬೆಳಗ್ಗೆ ತುಮಕೂರಿನ ಸೂರ್ಯ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ಕೊನೆಯುಸಿರೆಳೆದರು. ಅವರಿಗೆ ರಕ್ತದೊತ್ತಡ ಸಮಸ್ಯೆ ಕೂಡ ಇತ್ತು ಎನ್ನಲಾಗಿದೆ.

SCROLL FOR NEXT