ಪ್ರಶಾಂತ್ - ಸಂಜನಾ 
ರಾಜ್ಯ

ಸಂಜನಾ ವಿರುದ್ಧ 10 ಕೋಟಿ ರೂ. ಮಾನನಷ್ಟ ಮೊಕದ್ದಮೆ ದಾಖಲಿಸುತ್ತೇನೆ: ಪ್ರಶಾಂತ್ ಸಂಬರಗಿ

ಸ್ಯಾಂಡಲ್ ವುಡ್ ಗೆ ನಶೆಯ ನಂಟು ಪ್ರಕರಣಕ್ಕೆ ಸಂಬಂಧಿಸಿ, ನಟಿಯರಾದ ರಾಗಿಣಿ, ಸಂಜನಾ ಗಲ್ರಾನಿ ಸಿಸಿಬಿಯಿಂದ ಬಂಧಿತರಾಗಿ ಸಾಂತ್ವನ ಕೇಂದ್ರದಲ್ಲಿದ್ದಾರೆ.

ಬೆಂಗಳೂರು: ಸ್ಯಾಂಡಲ್ ವುಡ್ ಗೆ ನಶೆಯ ನಂಟು ಪ್ರಕರಣಕ್ಕೆ ಸಂಬಂಧಿಸಿ, ನಟಿಯರಾದ ರಾಗಿಣಿ, ಸಂಜನಾ ಗಲ್ರಾನಿ ಸಿಸಿಬಿಯಿಂದ ಬಂಧಿತರಾಗಿ ಸಾಂತ್ವನ ಕೇಂದ್ರದಲ್ಲಿದ್ದಾರೆ.

ಮತ್ತಷ್ಟು ನಟ, ನಟಿಯರ ಹಾಗೂ ಗಣ್ಯಾತಿಗಣ್ಯರ ಮಕ್ಕಳು ಕೇಸ್‍ ನಲ್ಲಿ ಲಾಕ್ ಆಗುವ ಬಗ್ಗೆ ವ್ಯಾಪಕ ಚರ್ಚೆಯಾಗುತ್ತಿದೆ. ಇದೇ ವೇಳೆ ನಟಿ ಸಂಜನಾ ಗಲ್ರಾನಿ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸುವುದಾಗಿ ಚಲನಚಿತ್ರ ವಿತರಕ, ಸಾಮಾಜಿಕ ಹೋರಾಟಗಾರ ಪ್ರಶಾಂತ್ ಸಂಬರಗಿ ಹೇಳಿದ್ದಾರೆ.

'ನಾನು ಸಂಜನಾ ಹೆಸರನ್ನೇ ತೆಗೆದುಕೊಂಡಿರಲಿಲ್ಲ. ಆದರೆ, ಅವರೇ ಕುಂಬಳಕಾಯಿ ಕಳ್ಳ ಎನ್ನುವಂತೆ ಹಂದಿ, ನಾಯಿ ಅಂತೆಲ್ಲ ಮಾತನಾಡಿದ್ದಾರೆ. ಚಪ್ಪಲಿಯಲ್ಲಿ ಹೊಡಿತೀನಿ, ರೋಡಲ್ಲಿ ಹೊಡಿತೀನಿ ಅಂತೆಲ್ಲ ಹೇಳಿದ್ದಾರೆ. ನಾನು ಉತ್ತರ ಕರ್ನಾಟಕದ ನಿವಾಸಿ, ಬೆಳಗಾವಿಯವನು ನಾನು. ನನ್ನ ಬಂಧುಗಳು, ನನ್ನ ಸಂಬರಗಿ ಕುಟುಂಬ ದೊಡ್ಡದು. ಹಾಗಾಗಿ, ಸಂಜನಾ ವಿರುದ್ಧ 10 ಕೋಟಿ ರೂ.ಗಳ ಮಾನನಷ್ಟ ಮೊಕದ್ದಮೆ ದಾಖಲು ಮಾಡುತ್ತಿದ್ದೇವೆ' ಎಂದು ಹೇಳಿದ್ದಾರೆ.

ಪ್ರಶಾಂತ್ ಸಂಬರಗಿ ಅವರು ನೇರವಾಗಿ ಸಂಜನಾ ಅವರ ಹೆಸರು ಹೇಳದೇ ಪರೋಕ್ಷವಾಗಿ ನಟಿ ವಿರುದ್ಧ ಹಲವು ಆರೋಪಗಳನ್ನು ಮಾಡಿದ್ದರು. ಆದರೆ, ಸಂಜನಾ ಎಲ್ಲಾ ಆರೋಪಗಳನ್ನು ತಳ್ಳಿ ಹಾಕಿದ್ದರು. ಅಲ್ಲದೆ ಪ್ರಶಾಂತ್ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ್ದರು. ಇದರ ವಿರುದ್ಧ ಪ್ರಶಾಂತ್ ಕಾನೂನಿನ ಮೊರೆ ಹೋಗಲು ನಿರ್ಧಾರ ಮಾಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT