108 ಅಂಬುಲೆನ್ಸ್ 
ರಾಜ್ಯ

ಕೊರೋನಾ ಸೋಂಕಿತೆ ಎಂದು ಹೇಳಿ ಆ್ಯಂಬುಲೆನ್ಸ್ ನಲ್ಲಿ ಕರೆದೊಯ್ದರು, ಬಳಿಕ ಮಹಿಳೆ ನಾಪತ್ತೆ!

ಕೊರೋನಾ ಸೋಂಕು ದೃಢಪಟ್ಟ ಬಳಿಕ ಆ್ಯಂಬಲೆನ್ಸ್ ನಲ್ಲಿ ಆಸ್ಪತ್ರೆಗೆ ತೆರಳಿದ್ದ 28 ವರ್ಷದ ಮಹಿಳೆಯೊಬ್ಬರು ನಾಪತ್ತೆಯಾಗಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಬೆಂಗಳೂರು: ಕೊರೋನಾ ಸೋಂಕು ದೃಢಪಟ್ಟ ಬಳಿಕ ಆ್ಯಂಬಲೆನ್ಸ್ ನಲ್ಲಿ ಆಸ್ಪತ್ರೆಗೆ ತೆರಳಿದ್ದ 28 ವರ್ಷದ ಮಹಿಳೆಯೊಬ್ಬರು ನಾಪತ್ತೆಯಾಗಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಸೊಂಕಿತ ಮಹಿಳೆ ಬೆಂಗಳೂರಿನ ಬೊಮ್ಮನಹಳ್ಳಿಯ ನಿವಾಸಿಯಾಗಿದ್ದು, ಈ ಹಿಂದೆ ಬಿಬಿಎಂಪಿ ಡೋರ್ ಟು ಡೋರ್ ಅಭಿಯಾನದಲ್ಲಿ ಗಂಟಲು ದ್ರವ ಪರೀಕ್ಷೆಗೆ ಒಳಪಟ್ಟಿದ್ದರು. ಈ ವೇಳೆ ಅವರಿಗೆ ಕೊರೋನಾ ಸೋಂಕು ಇರುವುದು ಪತ್ತೆಯಾಗಿತ್ತು. ಬಳಿಕ ಆಂಬುಲೆನ್ಸ್ ನಲ್ಲಿ ಬಂದ ಇಬ್ಬರು ಆಕೆಯನ್ನು ಕರೆದುಕೊಂಡು  ಹೋದರು. ಅಂದಿನಿಂದ ಆಕೆಯ ಸಂಪರ್ಕವೇ ಸಾಧ್ಯವಾಗಿಲ್ಲ ಎಂದು ಕುಟುಂಬಸ್ಥರು ಹೇಳಿದ್ದಾರೆ.

ಈ ಬಗ್ಗೆ ಮಾಹಿತಿ ನೀಡಿರುವ ಸೋಂಕಿತೆಯ ಸಹೋದರ ಸಂಬಂಧಿ ವಿಕಾಸ್, ಸೆಪ್ಟೆಂಬರ್ 3ರಂದು ಸೋಂಕಿತೆಯ ನಿವಾಸಕ್ಕೆ 4 ಮಂದಿ ಪಿಪಿಇ ಕಿಟ್ ಧರಿಸಿ ಆ್ಯಂಬುಲೆನ್ಸ್ ನಲ್ಲಿ ಆಗಮಿಸಿದ್ದರು. ತಾವು ಬಿಬಿಎಂಪಿಯ ಡೋರ್ ಟು ಡೋರ್ ಕೋವಿಡ್ ಟೆಸ್ಟ್ ಕ್ಯಾಂಪೇನ್ ನಡೆಸುತ್ತಿರುವುದಾಗಿ ಹೇಳಿದರು. ಅಂದು ನಮ್ಮ  ಕುಟುಂಬ ಸೇರಿದಂತೆ ಅಕ್ಕಪಕ್ಕದ ಮನೆಯವರೂ ಕೂಡ ಪರೀಕ್ಷೆಗೊಳಪಟ್ಟಿದ್ದರು. ಮಾರನೆಯ ದಿನ ಆ್ಯಂಬುಲೆನ್ಸ್ ನಲ್ಲಿ ಮತ್ತೆ ಇಬ್ಬರು ಬಂದು ಸಂಗೀತಾ ಅವರಿಗೆ (ಹೆಸರು ಬದಲಿಸಲಾಗಿದೆ) ಸೋಂಕು ದೃಢಪಟ್ಟಿದ್ದು, ಅವರನ್ನು ಪ್ರಶಾಂತ್ ಆಸ್ಪತ್ರೆಗೆ ದಾಖಲಿಸುತ್ತೇವೆ ಎಂದು ಹೇಳೆ ಆಕೆಯನ್ನು ವಾಹನದೊಳಗೆ  ಹತ್ತಿಸಿಕೊಂಡರು. ಆಕೆ ಫೋನ್ ತೆಗೆದುಕೊಳ್ಳಲೂ ಕೂಡ ಅವರು ಅವರು ಅನುಮತಿಸಲಿಲ್ಲ. ಆಸ್ಪತ್ರೆಯಲ್ಲಿ ಮೊಬೈಲ್ ಫೋನ್ ನಿಷೇಧ ಎಂದು ಹೇಳಿದರು. ಅಲ್ಲದೆ ಸ್ವಲ್ಪ ಹೊತ್ತಿನ ಬಳಿಕ ಆಸ್ಪತ್ರೆಗೆ ಬನ್ನಿ ಎಂದು ಹೇಳಿ ಆಕೆಯನ್ನು ಕರೆದೊಯ್ದರು.

ಬಳಿಕ ನಾವು ಆಸ್ಪತ್ರೆಗೆ ಹೋಗಿ ವಿಚಾರಿಸಿದಾಗ ಆ ಹೆಸರಿನ ಯಾವುದೇ ಮಹಿಳೆ ದಾಖಲಾಗಿಲ್ಲ ಎಂದು ಹೇಳಿದರು. ಬಳಿಕ ಬಿಬಿಎಂಪಿಗೂ ನಾವು ಕರೆ ಮಾಡಿದೆವು, ಅವರೂ ಕೂಡ ಅಂದಿನ ಅಭಿಯಾನದ ಬಳಿಕ ಆ ಪ್ರದೇಶದಿಂದ ಸಂಗೀತಾ ಎಂಬ ಹೆಸರಿನಲ್ಲಿಯಾರಿಗೂ ಸೋಂಕು ದೃಢಪಟ್ಟ ಕುರಿತು ವರದಿಯಾಗಿಲ್ಲ.  ನಾವು .ಯಾವುದೇ ರೋಗಿಯನ್ನು ಕರೆತರುವಂತೆ ಯಾರಿಗೂ ಸೂಚಿಸಿಲ್ಲ ಎಂದು ಹೇಳಿದರು ಎಂದು ವಿಕಾಸ್ ಹೇಳಿದ್ದಾರೆ. ಅಲ್ಲದೆ ಬೊಮ್ಮನಹಳ್ಳಿ ಬಿಬಿಎಂಪಿ ಅಧಿಕಾರಿಗಳು ಈ ಬಗ್ಗೆ ಮಾಹಿತಿ ನೀಡಿದ್ದು, ಆಕೆಯನ್ನು ಕರೆದುಕೊಂಡು ಹೋದ ಆ್ಯಂಬುಲೆನ್ಸ್ ಬಿಬಿಎಂಪಿಯದ್ದಲ್ಲ. ಅಲ್ಲದೆ ನಾವು ಯಾವುದೇ ರೀತಿಯ  ಕೋವಿಡ್ ಪರೀಕ್ಷೆ ಕೂಡ ನಡೆಸಿಲ್ಲ. ಸ್ವಾಬ್ ಪರೀಕ್ಷೆ ನಡೆಸಿದರೆ ಸಂಬಂಧಪಟ್ಟವರಿಗೆ ಎಸ್ಎಂಎಸ್ ಮೂಲಕ ಸಂದೇಶ ರವಾನಿಸುತ್ತೇವೆ. ಆ್ಯಂಬುಲೆನ್ಸ್ ಸಂಖ್ಯೆ, ಚಾಲಕ ಮತ್ತು ಸಹಾಯಕರ ಮಾಹಿತಿಯನ್ನು ಸೋಂಕಿತರಿಗೆ ತಿಳಿಸುತ್ತೇವೆ. ಅಂತೆಯೇ ನಮ್ಮ ಎಲ್ಲಾ ಆ್ಯಂಬುಲೆನ್ಸ್ ಗಳಿಗೂ ಜಿಪಿಎಸ್ ವ್ಯವಸ್ಥೆ ಇದ್ದು,  ಪ್ರತೀ ಕ್ಷಣ ಅವರನ್ನು ಟ್ರ್ಯಾಕ್ ಮಾಡುತ್ತೇವೆ. ಸೋಂಕಿತರನ್ನು ವಾಹನಕ್ಕೆ ಹತ್ತಿಸಿಕೊಂಡ ಬಳಿಕ ಆವರನ್ನು ಆಸ್ಪತ್ರೆಗೆ ದಾಖಲಿಸುವ ವರೆಗೂ ವಾಹನದ ಪ್ರತೀಕ್ಷಣದ ಚಲನೆಯೂ ಕಂಟ್ರೋಲ್ ರೂಮ್ ನಲ್ಲಿ ದಾಖಲಾಗುತ್ತದೆ ಎಂದು ಹೇಳಿದ್ದಾರೆ.

ಇದೀಗ ಮಹಿಳೆ ನಾಪತ್ತೆಯಾಗಿ 4 ದಿನಗಳು ಕಳೆದಿದ್ದು, ಆಕೆ ಎಲ್ಲಿದ್ದಾರೆ ಎಂಬುದು ತಿಳಿದಿಲ್ಲ. ಪ್ರಸ್ತುತ ಸಂಗೀತಾ ಅವರ ಪತಿ ಬೊಮ್ಮನಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು, ಪೊಲೀಸರು ತನಿಖೆ ನಡೆಸಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಪಾಕಿಸ್ತಾನ-ಅಫ್ಘಾನಿಸ್ತಾನ ಯುದ್ಧ: 58 ಪಾಕ್ ಸೈನಿಕರು ಹತ, ತಾಲಿಬಾನ್ ಸರ್ಕಾರದ 'ದೊಡ್ಡ' ಹೇಳಿಕೆ

ಭಾರತ- ಬಾಂಗ್ಲಾದೇಶ ಗಡಿ: ರೂ. 2.82 ಕೋಟಿ ಮೌಲ್ಯದ 'ಚಿನ್ನದ ಬಿಸ್ಕತ್ತು' ಜೊತೆಗೆ ಕಳ್ಳಸಾಗಣೆದಾರನನ್ನು ಬಂಧಿಸಿದ BSF!

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

'ಬ್ಲೂ ಸ್ಟಾರ್ ಆಪರೇಷನ್' ಕಾರ್ಯಾಚರಣೆ ತಪ್ಪಿಗೆ ಇಂದಿರಾ ಗಾಂಧಿ ಪ್ರಾಣ ತೆತ್ತರು: ಪಿ ಚಿದಂಬರಂ

ದೇಶದ ಮುಸ್ಲಿಂರನ್ನು ಗುರಿಯಾಗಿಸಿಕೊಳ್ಳುವ ಬಿಜೆಪಿ ಅಫ್ಘಾನಿಸ್ತಾನದ ಜೊತೆ ಸಂಬಂಧ ಬೆಳೆಸುವುದು 'ಬೂಟಾಟಿಕೆ': ಮೆಹಬೂಬಾ ಮುಫ್ತಿ

SCROLL FOR NEXT