108 ಅಂಬುಲೆನ್ಸ್ 
ರಾಜ್ಯ

ಕೊರೋನಾ ಸೋಂಕಿತೆ ಎಂದು ಹೇಳಿ ಆ್ಯಂಬುಲೆನ್ಸ್ ನಲ್ಲಿ ಕರೆದೊಯ್ದರು, ಬಳಿಕ ಮಹಿಳೆ ನಾಪತ್ತೆ!

ಕೊರೋನಾ ಸೋಂಕು ದೃಢಪಟ್ಟ ಬಳಿಕ ಆ್ಯಂಬಲೆನ್ಸ್ ನಲ್ಲಿ ಆಸ್ಪತ್ರೆಗೆ ತೆರಳಿದ್ದ 28 ವರ್ಷದ ಮಹಿಳೆಯೊಬ್ಬರು ನಾಪತ್ತೆಯಾಗಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಬೆಂಗಳೂರು: ಕೊರೋನಾ ಸೋಂಕು ದೃಢಪಟ್ಟ ಬಳಿಕ ಆ್ಯಂಬಲೆನ್ಸ್ ನಲ್ಲಿ ಆಸ್ಪತ್ರೆಗೆ ತೆರಳಿದ್ದ 28 ವರ್ಷದ ಮಹಿಳೆಯೊಬ್ಬರು ನಾಪತ್ತೆಯಾಗಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಸೊಂಕಿತ ಮಹಿಳೆ ಬೆಂಗಳೂರಿನ ಬೊಮ್ಮನಹಳ್ಳಿಯ ನಿವಾಸಿಯಾಗಿದ್ದು, ಈ ಹಿಂದೆ ಬಿಬಿಎಂಪಿ ಡೋರ್ ಟು ಡೋರ್ ಅಭಿಯಾನದಲ್ಲಿ ಗಂಟಲು ದ್ರವ ಪರೀಕ್ಷೆಗೆ ಒಳಪಟ್ಟಿದ್ದರು. ಈ ವೇಳೆ ಅವರಿಗೆ ಕೊರೋನಾ ಸೋಂಕು ಇರುವುದು ಪತ್ತೆಯಾಗಿತ್ತು. ಬಳಿಕ ಆಂಬುಲೆನ್ಸ್ ನಲ್ಲಿ ಬಂದ ಇಬ್ಬರು ಆಕೆಯನ್ನು ಕರೆದುಕೊಂಡು  ಹೋದರು. ಅಂದಿನಿಂದ ಆಕೆಯ ಸಂಪರ್ಕವೇ ಸಾಧ್ಯವಾಗಿಲ್ಲ ಎಂದು ಕುಟುಂಬಸ್ಥರು ಹೇಳಿದ್ದಾರೆ.

ಈ ಬಗ್ಗೆ ಮಾಹಿತಿ ನೀಡಿರುವ ಸೋಂಕಿತೆಯ ಸಹೋದರ ಸಂಬಂಧಿ ವಿಕಾಸ್, ಸೆಪ್ಟೆಂಬರ್ 3ರಂದು ಸೋಂಕಿತೆಯ ನಿವಾಸಕ್ಕೆ 4 ಮಂದಿ ಪಿಪಿಇ ಕಿಟ್ ಧರಿಸಿ ಆ್ಯಂಬುಲೆನ್ಸ್ ನಲ್ಲಿ ಆಗಮಿಸಿದ್ದರು. ತಾವು ಬಿಬಿಎಂಪಿಯ ಡೋರ್ ಟು ಡೋರ್ ಕೋವಿಡ್ ಟೆಸ್ಟ್ ಕ್ಯಾಂಪೇನ್ ನಡೆಸುತ್ತಿರುವುದಾಗಿ ಹೇಳಿದರು. ಅಂದು ನಮ್ಮ  ಕುಟುಂಬ ಸೇರಿದಂತೆ ಅಕ್ಕಪಕ್ಕದ ಮನೆಯವರೂ ಕೂಡ ಪರೀಕ್ಷೆಗೊಳಪಟ್ಟಿದ್ದರು. ಮಾರನೆಯ ದಿನ ಆ್ಯಂಬುಲೆನ್ಸ್ ನಲ್ಲಿ ಮತ್ತೆ ಇಬ್ಬರು ಬಂದು ಸಂಗೀತಾ ಅವರಿಗೆ (ಹೆಸರು ಬದಲಿಸಲಾಗಿದೆ) ಸೋಂಕು ದೃಢಪಟ್ಟಿದ್ದು, ಅವರನ್ನು ಪ್ರಶಾಂತ್ ಆಸ್ಪತ್ರೆಗೆ ದಾಖಲಿಸುತ್ತೇವೆ ಎಂದು ಹೇಳೆ ಆಕೆಯನ್ನು ವಾಹನದೊಳಗೆ  ಹತ್ತಿಸಿಕೊಂಡರು. ಆಕೆ ಫೋನ್ ತೆಗೆದುಕೊಳ್ಳಲೂ ಕೂಡ ಅವರು ಅವರು ಅನುಮತಿಸಲಿಲ್ಲ. ಆಸ್ಪತ್ರೆಯಲ್ಲಿ ಮೊಬೈಲ್ ಫೋನ್ ನಿಷೇಧ ಎಂದು ಹೇಳಿದರು. ಅಲ್ಲದೆ ಸ್ವಲ್ಪ ಹೊತ್ತಿನ ಬಳಿಕ ಆಸ್ಪತ್ರೆಗೆ ಬನ್ನಿ ಎಂದು ಹೇಳಿ ಆಕೆಯನ್ನು ಕರೆದೊಯ್ದರು.

ಬಳಿಕ ನಾವು ಆಸ್ಪತ್ರೆಗೆ ಹೋಗಿ ವಿಚಾರಿಸಿದಾಗ ಆ ಹೆಸರಿನ ಯಾವುದೇ ಮಹಿಳೆ ದಾಖಲಾಗಿಲ್ಲ ಎಂದು ಹೇಳಿದರು. ಬಳಿಕ ಬಿಬಿಎಂಪಿಗೂ ನಾವು ಕರೆ ಮಾಡಿದೆವು, ಅವರೂ ಕೂಡ ಅಂದಿನ ಅಭಿಯಾನದ ಬಳಿಕ ಆ ಪ್ರದೇಶದಿಂದ ಸಂಗೀತಾ ಎಂಬ ಹೆಸರಿನಲ್ಲಿಯಾರಿಗೂ ಸೋಂಕು ದೃಢಪಟ್ಟ ಕುರಿತು ವರದಿಯಾಗಿಲ್ಲ.  ನಾವು .ಯಾವುದೇ ರೋಗಿಯನ್ನು ಕರೆತರುವಂತೆ ಯಾರಿಗೂ ಸೂಚಿಸಿಲ್ಲ ಎಂದು ಹೇಳಿದರು ಎಂದು ವಿಕಾಸ್ ಹೇಳಿದ್ದಾರೆ. ಅಲ್ಲದೆ ಬೊಮ್ಮನಹಳ್ಳಿ ಬಿಬಿಎಂಪಿ ಅಧಿಕಾರಿಗಳು ಈ ಬಗ್ಗೆ ಮಾಹಿತಿ ನೀಡಿದ್ದು, ಆಕೆಯನ್ನು ಕರೆದುಕೊಂಡು ಹೋದ ಆ್ಯಂಬುಲೆನ್ಸ್ ಬಿಬಿಎಂಪಿಯದ್ದಲ್ಲ. ಅಲ್ಲದೆ ನಾವು ಯಾವುದೇ ರೀತಿಯ  ಕೋವಿಡ್ ಪರೀಕ್ಷೆ ಕೂಡ ನಡೆಸಿಲ್ಲ. ಸ್ವಾಬ್ ಪರೀಕ್ಷೆ ನಡೆಸಿದರೆ ಸಂಬಂಧಪಟ್ಟವರಿಗೆ ಎಸ್ಎಂಎಸ್ ಮೂಲಕ ಸಂದೇಶ ರವಾನಿಸುತ್ತೇವೆ. ಆ್ಯಂಬುಲೆನ್ಸ್ ಸಂಖ್ಯೆ, ಚಾಲಕ ಮತ್ತು ಸಹಾಯಕರ ಮಾಹಿತಿಯನ್ನು ಸೋಂಕಿತರಿಗೆ ತಿಳಿಸುತ್ತೇವೆ. ಅಂತೆಯೇ ನಮ್ಮ ಎಲ್ಲಾ ಆ್ಯಂಬುಲೆನ್ಸ್ ಗಳಿಗೂ ಜಿಪಿಎಸ್ ವ್ಯವಸ್ಥೆ ಇದ್ದು,  ಪ್ರತೀ ಕ್ಷಣ ಅವರನ್ನು ಟ್ರ್ಯಾಕ್ ಮಾಡುತ್ತೇವೆ. ಸೋಂಕಿತರನ್ನು ವಾಹನಕ್ಕೆ ಹತ್ತಿಸಿಕೊಂಡ ಬಳಿಕ ಆವರನ್ನು ಆಸ್ಪತ್ರೆಗೆ ದಾಖಲಿಸುವ ವರೆಗೂ ವಾಹನದ ಪ್ರತೀಕ್ಷಣದ ಚಲನೆಯೂ ಕಂಟ್ರೋಲ್ ರೂಮ್ ನಲ್ಲಿ ದಾಖಲಾಗುತ್ತದೆ ಎಂದು ಹೇಳಿದ್ದಾರೆ.

ಇದೀಗ ಮಹಿಳೆ ನಾಪತ್ತೆಯಾಗಿ 4 ದಿನಗಳು ಕಳೆದಿದ್ದು, ಆಕೆ ಎಲ್ಲಿದ್ದಾರೆ ಎಂಬುದು ತಿಳಿದಿಲ್ಲ. ಪ್ರಸ್ತುತ ಸಂಗೀತಾ ಅವರ ಪತಿ ಬೊಮ್ಮನಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು, ಪೊಲೀಸರು ತನಿಖೆ ನಡೆಸಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೈಕಮಾಂಡ್ ಅದೇಶ ಪಾಲನೆ: ಗುರುವಾರ ಬೆಳಗ್ಗೆ 10.30ಕ್ಕೆ ರಾಜ್ಯಪಾಲರ ಭೇಟಿಗೆ ಸಮಯ ಕೇಳಿದ ಸಿಎಂ ಸಿದ್ದರಾಮಯ್ಯ; Video

SIR ಪ್ರಕ್ರಿಯೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್; ಮುಕ್ತ ಹಾಗೂ ನ್ಯಾಯಸಮ್ಮತ ಚುನಾವಣೆಗೆ ಅಗತ್ಯ ಎಂದ ನ್ಯಾಯಪೀಠ..!

ರಾಜ್ಯದ ಮುಂದಿನ ಮುಖ್ಯಮಂತ್ರಿಯಾಗಿ ಡಿಕೆ ಶಿವಕುಮಾರ್ ಹೆಸರು ಬಹುತೇಕ ಫೈನಲ್? ಕಾಂಗ್ರೆಸ್‌ನಲ್ಲಿ ಗರಿಗೆದರಿದ ರಾಜಕೀಯ ಚಟುವಟಿಕೆ..!

ದೆಹಲಿ ಸಭೆ ಬಳಿಕ ಬೆಂಗಳೂರಿನಲ್ಲಿ ಶಕ್ತಿ ಪ್ರದರ್ಶನಕ್ಕೆ ಸಿದ್ದರಾಮಯ್ಯ ಸಜ್ಜು: ಬೆಂಬಲಿಗರ ಜೊತೆ ಮಹತ್ವದ ಸಭೆ, ಹೆಚ್ಚಿದ ಕುತೂಹಲ

ಹೈಕಮಾಂಡ್ ಸೂಚನೆಗೆ ಮಣಿದ ಸಿದ್ದರಾಮಯ್ಯ: ಮುಖ್ಯಮಂತ್ರಿ ಸ್ಥಾನ ತ್ಯಜಿಸಲು ಸಮ್ಮತಿ; ಕಾಂಗ್ರೆಸ್ ಪವರ್ ಶಿಫ್ಟ್‌ಗೆ ಕೌಂಟ್‌ಡೌನ್ ಶುರು, ಡಿಕೆಶಿಗೆ ಸಿಎಂ ಪಟ್ಟ..?

SCROLL FOR NEXT