ರಾಜ್ಯ

ತೋಟಗಾರಿಕಾ ಸಹಾಯಧನ ಬಿಡುಗಡೆಗೆ ರೈತನಿಂದ ಲಂಚಕ್ಕೆ ಬೇಡಿಕೆ: ಸಹಾಯಕ ಅಧಿಕಾರಿ ಎಸಿಬಿ ಬಲೆಗೆ

ತೋಟಗಾರಿಕೆ ಬೆಳೆ ಬೆಳೆಯಲು ಸರ್ಕಾರದಿಂದ ಸಿಗುವ ಸಹಾಯಧನ ಮಂಜೂರು ರೈತರಿಂದ 14 ಸಾವಿರ ರೂಪಾಯಿ ಲಂಚ ಸ್ವೀಕರಿಸಿದ ಗದಗ ಜಿಲ್ಲೆಯ ಮುಂಡರಗಿ ತೋಟಗಾರಿಕಾ ಸಹಾಯಕನೊಬ್ಬನನ್ನು ಭ್ರಷ್ಟಾಚಾರ ನಿಗ್ರಹ ದಳದ ಅಧಿಕಾರಿಗಳು ಬಂಧಿಸಿದ್ದಾರೆ.

ಗದಗ: ತೋಟಗಾರಿಕೆ ಬೆಳೆ ಬೆಳೆಯಲು ಸರ್ಕಾರದಿಂದ ಸಿಗುವ ಸಹಾಯಧನ ಮಂಜೂರು ರೈತರಿಂದ 14 ಸಾವಿರ ರೂಪಾಯಿ ಲಂಚ ಸ್ವೀಕರಿಸಿದ ಗದಗ ಜಿಲ್ಲೆಯ ಮುಂಡರಗಿ ತೋಟಗಾರಿಕಾ ಸಹಾಯಕನೊಬ್ಬನನ್ನು ಭ್ರಷ್ಟಾಚಾರ ನಿಗ್ರಹ ದಳದ ಅಧಿಕಾರಿಗಳು ಬಂಧಿಸಿದ್ದಾರೆ.

ತೋಟಗಾರಿಕಾ ಸಹಾಯಕ ಸುರೇಶ್ ಹನುಮಂತಪ್ಪ ಬಂಧಿತ ಆರೋಪಿ.

ಗದಗ ಜಿಲ್ಲೆಯ ಮುಂಡರಗಿ ತಾಲೂಕಿನ ಜಂತ್ಲಿ ಗ್ರಾಮದ ನಿವಾಸಿಯೊಬ್ಬರು ತಮ್ಮ ಜಮೀನಿನಲ್ಲಿ ಪಪ್ಪಾಯ, ನುಗ್ಗೆ ಬೆಳೆ ಬೆಳೆಯುವ ಸಂಬಂಧ 2019, ಮೇ 22ರಂದು ಮುಂಡರಗಿಯ ಹಿರಿಯ ಸಹಾಯಕ ತೋಟಗಾರಿಕಾ ನಿರ್ದೇಶಕರಿಗೆ ಅರ್ಜಿ ಸಲ್ಲಿಸಿದ್ದರು. ಅವರು ಕೂಲಿ ಕಾರ್ಮಿಕರೊಂದಿಗೆ ಸೇರಿ ಒಟ್ಟು 2 ಎಕರೆ ಪ್ರದೇಶದಲ್ಲಿ ಪಪ್ಪಾಯಿ, ನುಗ್ಗೆ ಬೆಳೆ ಬೆಳೆಯಲು ಗುಂಡಿ ತೋಡುವುದು, ಸಸಿ ನೆಡುವುದು, ಗೊಬ್ಬರ ಹಾಕುವ ಇತ್ಯಾದಿ ಕೆಲಸ ಮಾಡಿದ್ದರು. ಬಳಿಕ ಪಪ್ಪಾಯ ಹಾಗೂ ನುಗ್ಗೆ ಬೆಳೆ ಫಲಸಿಗೆ ಬಂದಿದೆ. ಈ ಕುರಿತಂತೆ ತೋಟಗಾರಿಕೆ ಬೆಳೆ ಬೆಳೆಯಲು ಸರ್ಕಾರದಿಂದ ಪ್ರತಿ ಹೆಕ್ಟೇರ್ ಗೆ ಪ್ರೋತ್ಸಾಹ ಧನವಾಗಿ 1,89,0000 ರೂ. ಮಂಜೂರು ಮಾಡಲು ಮನವಿ ಮಾಡಿದ್ದರು. ಅದರಂತೆ ತೋಟಗಾರಿಕಾ ಅಧಿಕಾರಿಗಳು ರೈತನ ಜಮೀನಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು. ಆದರೂ ಸುಮಾರು 1 ವರ್ಷಗಳಿಂದ ಎಂಜಿಎನ್ ಆರ್ ಇಜಿಎಸ್ ಯೋಜನೆಯಡಿ ಕೆಲಸ ಮಾಡಿದ ವೆಚ್ಚದ ಸಹಾಯಧನವನ್ನು ಮಂಜೂರು ಮಾಡದೆ ಕಾಲ ವಿಳಂಬ ಮಾಡಿದ್ದಾರೆ.

ಖಚಿತ ಮಾಹಿತಿಯ ಮೇರೆಗೆ  ಎಸಿಬಿ ಡಿವೈಎಸ್ಪಿ ವಾಸುದೇವರಾಮ್ ನೇತೃತ್ವದ ತಂಡ ದಾಳಿ ನಡೆಸಿ ಆರೋಪಿ ಹನುಮಂತಪ್ಪ ನನ್ನು ವಶಕ್ಕೆ ಪಡೆದಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಕಾವೇರಿ ವಿವಾದ: ಮಾತುಕತೆ ಅಂದ್ರೆ ರಾಜಿ ಎಂದರ್ಥವಲ್ಲ; ಬೆಂಗಳೂರು ಭೇಟಿ ಪ್ರಯತ್ನ ಸಮರ್ಥಿಸಿಕೊಂಡ ತಮಿಳುನಾಡು ಸಿಎಂ ವಿಜಯ್!

ಕೇರಳದಲ್ಲಿ 'ಕೇಸರಿ' ನಿಷೇಧವೇ?: ಬಟ್ಟೆ ಬಣ್ಣದ ಕುರಿತು ಪ್ರಶ್ನಿಸಿದ ಪತ್ರಕರ್ತನಿಗೆ ನಟಿ ಪ್ರಿಯಾ ವಾರಿಯರ್ 'ಶಾಂತ' ತಿರುಗೇಟು!

ಬೆಂಗಳೂರಿನ ಹಾಸ್ಟೆಲ್ ರೂಂನಲ್ಲಿ IISc ವಿದ್ಯಾರ್ಥಿ ಆತ್ಮಹತ್ಯೆ; ಸ್ಥಳದಲ್ಲಿ ಡೆತ್ ನೋಟ್ ಪತ್ತೆ!

NEET leak ಹಗರಣ ತನಿಖೆಯಲ್ಲಿ ಮೇಜರ್ ಟ್ವಿಸ್ಟ್; 3 NTAಯ ವಿಷಯ ತಜ್ಞರಿಂದಲೇ ಪ್ರಶ್ನೆ ಪತ್ರಿಕೆ ಸೋರಿಕೆ! ವರದಿ

ಸಚಿವ ಸ್ಥಾನಕ್ಕಾಗಿ ಕೃಷ್ಣಪ್ಪ ಬಿಗಿ ಪಟ್ಟು: ಡಿಕೆಶಿ ಸಂಪುಟದಿಂದ ಒಬ್ಬರಿಗೆ ಕೊಕ್? ‘ನಾನು ರಾಜೀನಾಮೆಗೆ ಸಿದ್ಧ’ ಎಂದ ಬಾಲಕೃಷ್ಣ!