ಸಿಸಿಬಿ ವಶಕ್ಕೆ ನಟಿ ಸಂಜನಾ 
ರಾಜ್ಯ

ಸ್ಯಾಂಡಲ್ ವುಡ್-ಬಾಲಿವುಡ್ ನಶೆ ನಂಟಿನ ಬಗ್ಗೆ ಬೆಂಗಳೂರು ಪೊಲೀಸರಿಂದ ಸಮಗ್ರ ತನಿಖೆ

ಸ್ಯಾಂಡಲ್ ವುಡ್- ಬಾಲಿವುಡ್ ನಲ್ಲಿ ಡ್ರಗ್ಸ್ ಪೂರೈಸುತ್ತಿದ್ದ ಕಾಮನ್ ವ್ಯಕ್ತಿಯ ಬಗ್ಗೆ ಬೆಂಗಳೂರು ಪೊಲೀಸರು ಸಮಗ್ರ ತನಿಖೆ ನಡೆಸಲಿದ್ದಾರೆ ಎಂದು ಉನ್ನತ ಮೂಲಗಳಿಂದ ತಿಳಿದು ಬಂದಿದೆ.

ಬೆಂಗಳೂರು: ರಾಜ್ಯಾದ್ಯಂತ ಭಾರೀ ಸದ್ದು ಮಾಡುತ್ತಿರುವ ಡ್ರಗ್ಸ್ ಜಾಲದಲ್ಲಿ ಬಂಧಿತರಾಗಿರುವ ನಟಿಯರಿಂದ ಹಲವು ಮಹತ್ವದ ಮಾಹಿತಿಗಳು ಬಹಿರಂಗವಾಗುವ ಸಾಧ್ಯತೆಯಿದೆ.

ಸ್ಯಾಂಡಲ್ ವುಡ್- ಬಾಲಿವುಡ್ ನಲ್ಲಿ ಡ್ರಗ್ಸ್ ಪೂರೈಸುತ್ತಿದ್ದ ಕಾಮನ್ ವ್ಯಕ್ತಿಯ ಬಗ್ಗೆ ಬೆಂಗಳೂರು ಪೊಲೀಸರು ಸಮಗ್ರ ತನಿಖೆ ನಡೆಸಲಿದ್ದಾರೆ ಎಂದು ಉನ್ನತ ಮೂಲಗಳಿಂದ ತಿಳಿದು ಬಂದಿದೆ.

ಬಾಲಿವುಡ್ ನಟ ವಿವೇಕ್ ಓಬೇರಾಯ್ ಭಾವ-ಮೈದುನ ಹಾಗೂ ಮಾಜಿ ಸಚಿವ ದಿವಂಗತ ಜೀವರಾಜ್ ಆಳ್ವ ಪುತ್ರ ಆದಿತ್ಯ ಆಳ್ವನಿಗಾಗಿ ಸಿಸಿಬಿ ಪೊಲೀಸರು ಹುಡುಕಾಟ ನಡೆಸಿದ್ದಾರೆ, ಸೆಪ್ಟಂಬರ್ 4 ರಂದು ಕಾಟನ್ ಪೇಟೆ ಪೊಲೀಸರು ದಾಖಲಿಸಿಕೊಂಡ ಪ್ರಕರಣದಲ್ಲಿ ಆದಿತ್ಯ ಆಳ್ವ 6ನೇ ಆರೋಪಿ.

ನಟಿ ರಾಗಿಣಿ ಸೇರಿದಂತೆ ಒಟ್ಟು 12 ಮಂದಿ ವಿರುದ್ಧ ಎಫ್ ಐಆರ್ ದಾಖಲಾಗಿದೆ, ಆದರೆ ಆದಿತ್ಯ ಆಳ್ವ ಇದುವರೆಗೂ ನಗರದಲ್ಲಿ ಪತ್ತೆಯಾಗಿಲ್ಲ, ಹೀಗಾಗಿ ಪೊಲೀಸರು ಆತನ ಬಾಡಿಗಾರ್ಡ್ ಗಳನ್ನು ವಿಚಾರಣೆ ನಡೆಸಿದ್ದಾರೆ.

ಬಾಲಿವುಡ್ ಮತ್ತು ಸ್ಯಾಂಡಲ್ ವುಡ್ ಗೆ ಡ್ರಗ್ಸ್ ಪೂರೈಸುವ ಕಾಮನ್ ಡ್ರಗ್ಸ್ ಸಪ್ಲೈ ಚೈನ್ ನಿಂದಾಗಿ ಕೆಲವು ನಿರ್ಣಾಯಕ ಮಾಹಿತಿ ಸಿಗಬಹುದು ಎಂದು ಅಧಿಕೃತ ಮೂಲಗಳು ದಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಗೆ ತಿಳಿಸಿದ್ದಾರೆ.

ನಟ ಸುಶಾಂತ್ ಸಿಂಗ್ ರಜಪೂತ್ ಸಾವಿನ ಪ್ರಕರಣ ಸಂಬಂಧ ನಟಿ ರಿಯಾ ಚಕ್ರವರ್ತಿಯನ್ನು ಎನ್ ಸಿಬಿ ತಂಡ ಬಂಧಿಸಿದೆ. ಬೆಂಗಳೂರು ನಗರ ಎನ್ ಸಿಬಿ ಘಟಕ ಮುಂಬಯಿಯಲ್ಲಿ ಬೀಡುಬಿಟ್ಟಿದ್ದು. ರಿಯಾ ಚಕ್ರವರ್ತಿ ವಿಚಾರಣೆ ನಡೆಸುತ್ತಿದ್ದಾರೆ, ಪ್ರಕರಣ ಸಂಬಂಧ ಅನಿಕಾ ಸೇರಿದಂತೆ ಮೂವರು ಡ್ರಗ್ ಪೆಡ್ಲರ್ ಗಳನ್ನು ಬಂಧಿಸಿದ್ದಾರೆ. ಸಿಸಿಬಿ ಮತ್ತು ಎನ್ ಸಿಬಿ ಪ್ರತ್ಯೇಕವಾಗಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

ಸಿಸಿಬಿ ಪೊಲೀಸರು ಇದುವರೆಗೂ ನಟಿಯರಾದ ರಾಗಿಣಿ ಮತ್ತು ಸಂಜನಾ ಸೇರಿದಂತೆ ಇದುವರೆಗೂ 7 ಮಂದಿಯನ್ನು ಬಂಧಿಸಿದ್ದಾರೆ. ಇವೆಂಟ್ ಮ್ಯಾನೇಜರ್ ವಿರೇನ್ ಖನ್ನಾ, ಆರ್ ಟಿ ಓ ಕ್ಲರ್ಕ್ ರವಿಶಂಕರ್, ರಾಹುಲ್ ಶೆಟ್ಟಿ, ನಿಯಾಜ್, ಲೂಮ್ ಪೆಪ್ಪರ್ ಸಾಂಬಾರನ್ನು ವಶಕ್ಕೆ ತೆಗೆದುಕೊಂಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

SCROLL FOR NEXT