ಬಂಧಿತ ಆರೋಪಿಗಳು 
ರಾಜ್ಯ

ಹುಲಿ‌ ಉಗುರು ಮಾರಾಟಕ್ಕೆ ಯತ್ನ: ಕೊಳ್ಳೇಗಾಲದಲ್ಲಿ ಇಬ್ಬರ ಬಂಧನ

ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ಪಟ್ಟಣದಲ್ಲಿ ಹುಲಿ ಉಗುರು ಮಾರಾಟಕ್ಕೆ ಯತ್ನಿಸಿದ ಇಬ್ಬರು ಆರೋಪಿಗಳನ್ನು ಅರಣ್ಯ ಸಂಚಾರಿ ದಳ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಕೊಳ್ಳೇಗಾಲ:ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ಪಟ್ಟಣದಲ್ಲಿ ಹುಲಿ ಉಗುರು ಮಾರಾಟಕ್ಕೆ ಯತ್ನಿಸಿದ ಇಬ್ಬರು ಆರೋಪಿಗಳನ್ನು ಅರಣ್ಯ ಸಂಚಾರಿ ದಳ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಪಟ್ಟಣದ ದೊಡ್ಡ ನಾಯಕರ ಬೀದಿ ನಿವಾಸಿ ಆಟೋ ಚಾಲಕ ನಾರಾಯಣಿ (33) ಹಾಗೂ ಹೊಸ ಪೋಸ್ಟ್ ಆಫೀಸ್ ರಸ್ತೆ ನಿವಾಸಿ ನಯೀಮ್ ಪಾಷಾ (34) ಬಂಧಿತ ಆರೋಪಿಗಳು.

ಅರಣ್ಯ ಸಂಚಾರಿ ದಳ ಪಿಎಸ್ಐ ಮುದ್ದು ಮಾದೇವ ತಂಡ ಬೇರೆ ಪ್ರಕರಣದ ಸಂಬಂಧ ಮಾಹಿತಿಗಾಗಿ ಪಟ್ಟಣದ ಅಣಗಳ್ಳಿ ರಸ್ತೆಯಲ್ಲಿ ಸಂಚರಿಸುತ್ತಿದ್ದ ವೇಳೆ ಆಕಸ್ಮಿಕವಾಗಿ ಜೀಪ್ ಎದುರು ಸಿಕ್ಕ ಆಟೋವನ್ನು ಗಮನಿಸಿದ್ದಾರೆ.ಇದೇ ವೇಳೆ ಆಟೋದಲ್ಲಿದ್ದ ಇಬ್ಬರು ವ್ಯಕ್ತಿಗಳು ಪೊಲೀಸರನ್ನು ನೋಡಿ ಓಡಲು ಮುಂದಾಗಿದ್ದಾರೆ. ಅನುಮಾನಗೊಂಡ ಪೊಲೀಸರು ಅವರನ್ನು ವಿಚಾರಿಸಿದಾಗ ಹುಲಿ ಉಗುರು ಮಾರಾಟಕ್ಕೆ ಯತ್ನಿಸುತ್ತಿರುವುದು ಕಂಡುಬಂದಿದೆ.

ಪರೀಶೀಲನೆ ವೇಳೆ ಬಂಧಿತ ಆರೋಪಿ ನಯೀಮ್ ಪಾಷಾನ ಹತ್ತಿರ ಎರಡು ಹುಲಿ ಉಗುರುಗಳು ದೊರಕಿವೆ. ಇದು ನನ್ನದಲ್ಲ, 3 ತಿಂಗಳಿನ ಹಿಂದೆ ಕೊಳ್ಳೇಗಾಲ ಬಸ್ ನಿಲ್ದಾಣದಲ್ಲಿ ಅಪರಿಚಿತ ವ್ಯಕ್ತಿಯಿಂದ ಡಾಲರ್ ಮಾಡಿಸಿಕೊಳ್ಳಲು ಹುಲಿ ಉಗುರು ಖರೀದಿ ಮಾಡಿದ್ದೆ. ಆದರೆ, ಹಣದ ಸಮಸ್ಯೆ ಎದುರಾದ ಕಾರಣ ಅಣಗಳ್ಳಿ ಬಳಿ ಮಾರಾಟಕ್ಕೆ ಮುಂದಾದೆ ಎಂದು ನಾರಾಯಣಿ ಒಪ್ಪಿಕೊಂಡಿದ್ದಾನೆ. ಬಂಧಿತರಿಂದ 1 ಆಟೋ, 2 ಹುಲಿ‌ ಉಗುರುಗಳನ್ನು ವಶಪಡಿಸಿಕೊಳ್ಳಲಾಗಿದ್ದು, ಆರೋಪಿಗಳನ್ನು ಹೆಚ್ಚಿನ ತನಿಖೆ ನಡೆಸಲಾಗುತ್ತಿದೆ.

ವರದಿ:- ಗುಳಿಪುರ ನಂದೀಶ ಎಂ

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ವೆನೆಜುವೆಲಾ ಪರಿಸ್ಥಿತಿ ನಿಮಗೂ ಬರಬಹುದು.. ತಡ ಮಾಡದೇ ನಮ್ ಜೊತೆ ಒಪ್ಪಂದ ಮಾಡ್ಕೊಳ್ಳಿ': ಕ್ಯೂಬಾಗೂ Donald Trump ಎಚ್ಚರಿಕೆ!

ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ತ್ರಿಪುರದಲ್ಲಿ ಎರಡು ಸಮುದಾಯಗಳ ನಡುವೆ ಘರ್ಷಣೆ: ಉನಕೋಟಿಯಲ್ಲಿ ಮಸೀದಿ-ಮುಸ್ಲಿಂ ಅಂಗಡಿಗಳಿಗೆ ಬೆಂಕಿ

ಒಂದು ವಾರದ ಚಿಕಿತ್ಸೆ ಬಳಿಕ ಆಸ್ಪತ್ರೆಯಿಂದ ಸೋನಿಯಾ ಗಾಂಧಿ ಡಿಸ್ಚಾರ್ಜ್!

Tubelight in his head: ಹಿಮಂತಾ ಬಿಸ್ವಾ ಶರ್ಮಾ ವಿರುದ್ಧ AIMIM ಮುಖ್ಯಸ್ಥ ಓವೈಸಿ ಕಿಡಿ! ಏನಿದು ವಿವಾದ?

SCROLL FOR NEXT