ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಮನೋಜ್ ಕುಮಾರ್ 
ರಾಜ್ಯ

ಕೊರೊನಾ ಸೋಂಕು ಗೆದ್ದು ಪ್ಲಾಸ್ಮಾ ದಾನಕ್ಕೆ ಮುಂದಾದ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಮನೋಜ್ ಕುಮಾರ್

ಕೊರೊನಾ ಮಹಾಮಾರಿಯಿಂದ ಚಾಮರಾಜನಗರ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಮನೋಜ್ ಕುಮಾರ್ ಸಂಪೂರ್ಣ ಗುಣಮುಖರಾಗಿ ಈಗ ಪ್ಲಾಸ್ಮಾ ದಾನಕ್ಕೆ ಮುಂದಾಗಿದ್ದಾರೆ.

ಚಾಮರಾಜನಗರ: ಕೊರೊನಾ ಮಹಾಮಾರಿಯಿಂದ ಚಾಮರಾಜನಗರ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಮನೋಜ್ ಕುಮಾರ್ ಸಂಪೂರ್ಣ ಗುಣಮುಖರಾಗಿ ಈಗ ಪ್ಲಾಸ್ಮಾ ದಾನಕ್ಕೆ ಮುಂದಾಗಿದ್ದಾರೆ.

ಕೊರೊನಾ ವಿರುದ್ಧ ಹೋರಾಡುತ್ತಿರುವ ಹಲವು ರೋಗಿಗಳಿಗೆ ನೆರವಾಗಲೆಂದು ಪ್ಲಾಸ್ಮಾ ದಾನ ಮಾಡಲು ಮುಂದಾಗಿದ್ದೇನೆ. ಈ ಕುರಿತು ಆರೋಗ್ಯ ಇಲಾಖೆಗೆ ಮಾಹಿತಿ ನೀಡಿದ್ದೇನೆ‌, ಚಾಮರಾಜನಗರ ಆರೋಗ್ಯ ಇಲಾಖೆ ಸಿಬ್ಬಂದಿಯೂ ಉತ್ತಮವಾಗಿ ಸ್ಪಂದಿಸಿದ್ದಾರೆ ಎಂದರು. ನೆಗಡಿ, ಮೈ-ಕೈ ನೋವಿದ್ದ ಕಾರಣ  ಕೋವಿಡ್ ಟೆಸ್ಟ್ ಮಾಡಿಸಿದ ವೇಳೆ ಮನೋಜ್ ಕುಮಾರ್ ಹಾಗೂ ಅವರ ಪತ್ನಿ, ಮಗನಿಗೂ ಸೋಂಕು ಇರುವುದು ದೃಢಪಟ್ಟಿತ್ತು. ಬಳಿಕ ಹೋಂ ಐಸೋಲೇಷನ್​​​​​ನಲ್ಲೇ ಇದ್ದು ವೈದ್ಯರ ಸಲಹೆ ಮೇರೆಗೆ ಚಿಕಿತ್ಸೆ ಪಡೆದು 9 ದಿನಕ್ಕೆ ಕೋವಿಡ್​ನಿಂದ ಗುಣಮುಖರಾಗಿದ್ದಾರೆ.

ಈ ಕುರಿತು  ಮನೋಜ್ ಕುಮಾರ್  ಮಾಧ್ಯಮಗಳೊಂದಿಗೆಪ್ರತಿಕ್ರಿಯಿಸಿದ್ದು, ಹೋಂ ಐಸೋಲೇಷನ್​ನಲ್ಲಿದ್ದು ಗುಣಮುಖರಾಗಿದ್ದೇವೆ, ರೋಗ ಲಕ್ಷಣಗಳನ್ನು ಯಾರೂ ನಿರ್ಲಕ್ಷಿಸಬಾರದು, ಒಂದು ವೇಳೆ ನಿರ್ಲಕ್ಷಿಸಿದರೆ ವೈದ್ಯರು ಅಸಹಾಯಕರಾಗುತ್ತಾರೆ. ಹೋಂ ಐಸೋಲೇಷನ್​​ನಲ್ಲಿದ್ದುಕೊಂಡೆ ಗುಣಮುಖರಾಗಬಹುದು,  ಒಂದು ವೇಳೆ ಸೋಂಕು ದೃಢವಾದರೂ ಧೈರ್ಯಗೆಡಬಾರದು ಎಂದಿದ್ದಾರೆ.ಇದೇ ವೇಳೆ ಕೊರೊನಾ ವಿರುದ್ಧ ಹೋರಾಡುತ್ತಿರುವ ಹಲವು ರೋಗಿಗಳಿಗೆ ನೆರವಾಗಲೆಂದು ಪ್ಲಾಸ್ಮಾ ದಾನ ಮಾಡಲು ಮುಂದಾಗಿದ್ದೇನೆ. ಈ ಕುರಿತು ಆರೋಗ್ಯ ಇಲಾಖೆಗೆ ಮಾಹಿತಿ ನೀಡಿದ್ದೇನೆ‌, ಚಾಮರಾಜನಗರ ಆರೋಗ್ಯ ಇಲಾಖೆ  ಸಿಬ್ಬಂದಿಯೂ ಉತ್ತಮವಾಗಿ ಸ್ಪಂದಿಸಿದ್ದಾರೆ ಎಂದರು.

ವರದಿ ಗುಳಿಪುರ ನಂದೀಶ ಎಂ

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭೀಕರ ಮಳೆಗೆ ಜಮ್ಮು-ಕಾಶ್ಮೀರ ತತ್ತರ: ಸಾವಿನ ಸಂಖ್ಯೆ 41ಕ್ಕೆ ಏರಿಕೆ; ಕೇಂದ್ರದಿಂದ ನೆರವಿನ ಭರವಸೆ; ಮುಂದುವರೆದ ರಕ್ಷಣಾ ಕಾರ್ಯಾಚರಣೆ

ಭಾರತದ ಮೇಲೆ ಅಮೆರಿಕಾ ಸುಂಕಾಸ್ತ್ರ: ದೇಶ ರಕ್ಷಿಸುವಲ್ಲಿ ಪ್ರಧಾನಿ ಮೋದಿ ವಿಫಲ; AICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಾಗ್ದಾಳಿ

ಜಮ್ಮು-ಕಾಶ್ಮೀರದ ಬಂಡಿಪೋರಾದಲ್ಲಿ ಗುಂಡಿನ ಚಕಮಕಿ: ಇಬ್ಬರು ಉಗ್ರರ ಹತ್ಯೆ

RSS Song Controversy: ಡಿಕೆಶಿ ಆರ್‌ಎಸ್‌ಎಸ್‌ ಗೀತೆ ಹಾಡಿದ್ದು ತಪ್ಪು, ಕ್ಷಮೆ ಕೇಳಿದ್ದರಿಂದ ಎಲ್ಲವೂ ಮುಗಿದಿದೆ; ಮಲ್ಲಿಕಾರ್ಜುನ ಖರ್ಗೆ

ವಾಲ್ಮೀಕಿ ನಿಗಮ ಹಗರಣ: ಜಾರಿ ನಿರ್ದೇಶನಾಲಯದಿಂದ 5 ಕೋಟಿ ಮೌಲ್ಯದ ಆಸ್ತಿ ಮುಟ್ಟುಗೋಲು !

SCROLL FOR NEXT