ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಮನೋಜ್ ಕುಮಾರ್ 
ರಾಜ್ಯ

ಕೊರೊನಾ ಸೋಂಕು ಗೆದ್ದು ಪ್ಲಾಸ್ಮಾ ದಾನಕ್ಕೆ ಮುಂದಾದ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಮನೋಜ್ ಕುಮಾರ್

ಕೊರೊನಾ ಮಹಾಮಾರಿಯಿಂದ ಚಾಮರಾಜನಗರ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಮನೋಜ್ ಕುಮಾರ್ ಸಂಪೂರ್ಣ ಗುಣಮುಖರಾಗಿ ಈಗ ಪ್ಲಾಸ್ಮಾ ದಾನಕ್ಕೆ ಮುಂದಾಗಿದ್ದಾರೆ.

ಚಾಮರಾಜನಗರ: ಕೊರೊನಾ ಮಹಾಮಾರಿಯಿಂದ ಚಾಮರಾಜನಗರ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಮನೋಜ್ ಕುಮಾರ್ ಸಂಪೂರ್ಣ ಗುಣಮುಖರಾಗಿ ಈಗ ಪ್ಲಾಸ್ಮಾ ದಾನಕ್ಕೆ ಮುಂದಾಗಿದ್ದಾರೆ.

ಕೊರೊನಾ ವಿರುದ್ಧ ಹೋರಾಡುತ್ತಿರುವ ಹಲವು ರೋಗಿಗಳಿಗೆ ನೆರವಾಗಲೆಂದು ಪ್ಲಾಸ್ಮಾ ದಾನ ಮಾಡಲು ಮುಂದಾಗಿದ್ದೇನೆ. ಈ ಕುರಿತು ಆರೋಗ್ಯ ಇಲಾಖೆಗೆ ಮಾಹಿತಿ ನೀಡಿದ್ದೇನೆ‌, ಚಾಮರಾಜನಗರ ಆರೋಗ್ಯ ಇಲಾಖೆ ಸಿಬ್ಬಂದಿಯೂ ಉತ್ತಮವಾಗಿ ಸ್ಪಂದಿಸಿದ್ದಾರೆ ಎಂದರು. ನೆಗಡಿ, ಮೈ-ಕೈ ನೋವಿದ್ದ ಕಾರಣ  ಕೋವಿಡ್ ಟೆಸ್ಟ್ ಮಾಡಿಸಿದ ವೇಳೆ ಮನೋಜ್ ಕುಮಾರ್ ಹಾಗೂ ಅವರ ಪತ್ನಿ, ಮಗನಿಗೂ ಸೋಂಕು ಇರುವುದು ದೃಢಪಟ್ಟಿತ್ತು. ಬಳಿಕ ಹೋಂ ಐಸೋಲೇಷನ್​​​​​ನಲ್ಲೇ ಇದ್ದು ವೈದ್ಯರ ಸಲಹೆ ಮೇರೆಗೆ ಚಿಕಿತ್ಸೆ ಪಡೆದು 9 ದಿನಕ್ಕೆ ಕೋವಿಡ್​ನಿಂದ ಗುಣಮುಖರಾಗಿದ್ದಾರೆ.

ಈ ಕುರಿತು  ಮನೋಜ್ ಕುಮಾರ್  ಮಾಧ್ಯಮಗಳೊಂದಿಗೆಪ್ರತಿಕ್ರಿಯಿಸಿದ್ದು, ಹೋಂ ಐಸೋಲೇಷನ್​ನಲ್ಲಿದ್ದು ಗುಣಮುಖರಾಗಿದ್ದೇವೆ, ರೋಗ ಲಕ್ಷಣಗಳನ್ನು ಯಾರೂ ನಿರ್ಲಕ್ಷಿಸಬಾರದು, ಒಂದು ವೇಳೆ ನಿರ್ಲಕ್ಷಿಸಿದರೆ ವೈದ್ಯರು ಅಸಹಾಯಕರಾಗುತ್ತಾರೆ. ಹೋಂ ಐಸೋಲೇಷನ್​​ನಲ್ಲಿದ್ದುಕೊಂಡೆ ಗುಣಮುಖರಾಗಬಹುದು,  ಒಂದು ವೇಳೆ ಸೋಂಕು ದೃಢವಾದರೂ ಧೈರ್ಯಗೆಡಬಾರದು ಎಂದಿದ್ದಾರೆ.ಇದೇ ವೇಳೆ ಕೊರೊನಾ ವಿರುದ್ಧ ಹೋರಾಡುತ್ತಿರುವ ಹಲವು ರೋಗಿಗಳಿಗೆ ನೆರವಾಗಲೆಂದು ಪ್ಲಾಸ್ಮಾ ದಾನ ಮಾಡಲು ಮುಂದಾಗಿದ್ದೇನೆ. ಈ ಕುರಿತು ಆರೋಗ್ಯ ಇಲಾಖೆಗೆ ಮಾಹಿತಿ ನೀಡಿದ್ದೇನೆ‌, ಚಾಮರಾಜನಗರ ಆರೋಗ್ಯ ಇಲಾಖೆ  ಸಿಬ್ಬಂದಿಯೂ ಉತ್ತಮವಾಗಿ ಸ್ಪಂದಿಸಿದ್ದಾರೆ ಎಂದರು.

ವರದಿ ಗುಳಿಪುರ ನಂದೀಶ ಎಂ

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ