ರಾಜ್ಯ

ಬಿಬಿಎಂಪಿ ಆಡಳಿತಾಧಿಕಾರಿಯಾಗಿ ಗೌರವ್‌ ಗುಪ್ತ ಅಧಿಕಾರ ಸ್ವೀಕಾರ; ಸಕಾರಾತ್ಮಕ ಆಡಳಿತದ ಭರವಸೆ

Manjula VN

ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ (ಬಿಬಿಎಂಪಿ) ನೂತನ ಆಡಳಿತಗಾರರಾಗಿ ಐಎಎಸ್‌ ಅಧಿಕಾರಿ ಗೌರವ್ ಗುಪ್ತ ಶುಕ್ರವಾರ ಅಧಿಕಾರ ಸ್ವೀಕರಿಸಿದರು.

ಪಾಲಿಕೆ ಕೇಂದ್ರ ಕಛೇರಿಯಲ್ಲಿ ಬೆಳಗ್ಗೆ 9.45ಕ್ಕೆ ಅಧಿಕಾರ ಸ್ವೀಕರಿಸಿದ ಗೌರವ್‌ ಗುಪ್ತಾ, ಆಯುಕ್ತರು, ಅಧಿಕಾರಿಗಳು, ಸರ್ಕಾರ ಸೇರಿದಂತೆ ಸ್ಥಳೀಯ ಜನಪ್ರತಿನಿಧಿಗಳೊಂದಿಗೆ ಚರ್ಚಿಸಿ ನಗರದ ಅಭಿವೃದ್ಧಿಗೆ ಸಕಲ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು.

ಅಧಿಕಾರ ಸ್ವೀಕರಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಬಿಎಂಪಿ ಬಜೆಟ್‌, ಕೋವಿಡ್‌ ಸಮಸ್ಯೆ ಮತ್ತು ಮಳೆಗಾಲದ ಸಿದ್ಧತೆ ಕುರಿತು ತೆಗೆದುಕೊಳ್ಳಲಾಗಿರುವ ಕ್ರಮಗಳನ್ನು ಪರಿಶೀಲಿಸಿ, ಅಗತ್ಯ ಸುಧಾರಣೆ ಮಾಡುವುದಾಗಿ ತಿಳಿಸಿದರು.

SCROLL FOR NEXT