ಸಾರಾ ಮಹೇಶ್ 
ರಾಜ್ಯ

ಜೆಡಿಎಸ್ ಸರ್ಕಾರ ಪತನಕ್ಕೆ ಡ್ರಗ್ ಮಾಫಿಯಾ ಹಣ ಬಳಕೆ: ಕುಮಾರಸ್ವಾಮಿ ಹೇಳಿಕೆ ಹಾಸ್ಯಾಸ್ಪದವಲ್ಲ- ಸಾರಾ ಮಹೇಶ್  

ಜೆಡಿಎಸ್ ಸರ್ಕಾರವನ್ನು ಪತನಗೊಳಿಸಲು ಡ್ರಗ್ ಮಾಫಿಯಾ ಹಣವನ್ನು ಬಳಸಿಕೊಳ್ಳಲಾಗಿತ್ತು ಎಂಬ ಕುಮಾರಸ್ವಾಮಿ ಹೇಳಿಕೆ ಹಾಸ್ಯಾಸ್ಪದ ಅಲ್ಲ ಎಂದು ಮಾಜಿ ಸಚಿವ ಸಾ. ರಾ. ಮಹೇಶ್ ಹೇಳಿದ್ದಾರೆ.

ಬೆಂಗಳೂರು: ಜೆಡಿಎಸ್ ಸರ್ಕಾರವನ್ನು ಪತನಗೊಳಿಸಲು ಡ್ರಗ್ ಮಾಫಿಯಾ ಹಣವನ್ನು ಬಳಸಿಕೊಳ್ಳಲಾಗಿತ್ತು ಎಂಬ ಮಾಜಿ ಮುಖ್ಯಮಂತ್ರಿ ಎಚ್ ಡಿ. ಕುಮಾರಸ್ವಾಮಿ ಹೇಳಿಕೆ ಹಾಸ್ಯಾಸ್ಪದ ಅಲ್ಲ ಎಂದು ಮಾಜಿ ಸಚಿವ ಸಾ. ರಾ. ಮಹೇಶ್ ಹೇಳಿದ್ದಾರೆ.

ತಮ್ಮ ಸರ್ಕಾರವನ್ನು ಪತನಗೊಳಿಸಲು ಡ್ರಗ್ ಮಾಫಿಯಾ ಹಣವನ್ನು ಬಳಸಿಕೊಳ್ಳಲಾಗಿತ್ತು ಎಂದು ಕುಮಾರಸ್ವಾಮಿ ಹೇಳಿಕೆ ನೀಡಿದ್ದರು. ಈ ಹೇಳಿಕೆ ಹಾಸ್ಯಾಸ್ಪದವಾದದ್ದು ಎಂದು ಉಪ ಮುಖ್ಯಮಂತ್ರಿ ಲಕ್ಷ್ಮಣ್ ಸವದಿ ಟೀಕಿಸಿದ್ದರು.

ಕುಮಾರಸ್ವಾಮಿ ಹೇಳಿಕೆ ಹಾಸ್ಯಾಸ್ಪದ ಎಂದು ಸವದಿ ಹೇಳುತ್ತಾರೆ.ಸದನದಲ್ಲಿ ನೀಲಿ ಚಿತ್ರ ನೋಡುವವರು ಉಪ ಮುಖ್ಯಮಂತ್ರಿಯಾಗಿರುವುದನ್ನು ನೋಡಿ ಜನರು ನಗುತ್ತಿದ್ದಾರೆ ಎಂದು ಸಾರಾ ಮಹೇಶ್ ಹೇಳಿದ್ದಾರೆ.

ತಾವು ಮುಖ್ಯಮಂತ್ರಿಯಾಗಿದ್ದ ವೇಳೆಯಲ್ಲಿ ಡ್ರಗ್ ಮಾಫಿಯಾದ ವಿರುದ್ಧದ ಸರ್ಕಾರದ ಕ್ರಮಕ್ಕೆ ಹೆದರಿ ಕೆಲವರು ಶ್ರೀಲಂಕಾಕ್ಕೆ ತೆರಳಿದ್ದರು. ಡ್ರಗ್ ಮಾಫಿಯಾ ಮತ್ತು ಕ್ರಿಕೆಟ್ ಬೆಟ್ಟಿಂಗ್ ದಂಧೆಯ ಹಣದಿಂದ ತಮ್ಮ ಸರ್ಕಾರವನ್ನು ಪತನಗೊಳಿಸಲಾಯಿತು ಎಂದು ಕುಮಾರಸ್ವಾಮಿ ಸುದ್ದಿಗೋಷ್ಟಿಯಲ್ಲಿ ಹೇಳಿಕೆ ನೀಡಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT