ನಾಗರಹೊಳೆ ಹುಲಿ ಅಭಯಾರಣ್ಯ 
ರಾಜ್ಯ

ಕೋವಿಡ್-19 ಅನ್ಲಾಕ್ ಬೆನ್ನಲ್ಲೇ ಬಂಡೀಪುರ, ನಾಗರಹೊಳೆಯತ್ತ ಮುಖ ಮಾಡುತ್ತಿರುವ ಪ್ರವಾಸಿಗರು!

ಕೊರೋನಾ ವೈರಸ್ ಲಾಕ್ ಡೌನ್ ನಿಂದಾಗಿ ತಳಮಟ್ಟಕ್ಕೆ ಕುಸಿದ್ದ ಪ್ರವಾಸೋಧ್ಯಮ ವಲಯ ಇದೀಗ ಅನ್ಲಾಕ್ 4.0 ಬಳಿಕ ನಿಧಾನವಾಗಿ ಚೇತರಿಕೆ ಕಾಣುತ್ತಿದ್ದು, ಬಂಡೀಪುರ, ನಾಗರಹೊಳೆ ಪ್ರವಾಸಿಗರು ಮುಖ ಮಾಡುತ್ತಿದ್ದಾರೆ.

ಮೈಸೂರು: ಕೊರೋನಾ ವೈರಸ್ ಲಾಕ್ ಡೌನ್ ನಿಂದಾಗಿ ತಳಮಟ್ಟಕ್ಕೆ ಕುಸಿದ್ದ ಪ್ರವಾಸೋಧ್ಯಮ ವಲಯ ಇದೀಗ ಅನ್ಲಾಕ್ 4.0 ಬಳಿಕ ನಿಧಾನವಾಗಿ ಚೇತರಿಕೆ ಕಾಣುತ್ತಿದ್ದು, ಬಂಡೀಪುರ, ನಾಗರಹೊಳೆ ಪ್ರವಾಸಿಗರು ಮುಖ ಮಾಡುತ್ತಿದ್ದಾರೆ.

ಲಾಕ್‌ಡೌನ್ ನಿಂದಾಗಿ ರಾಜ್ಯದ ಬಹುತೇಕ ಎಲ್ಲ ರಾಷ್ಟ್ರೀಯ ಉದ್ಯಾನವನಗಳಲ್ಲಿನ ಎಲ್ಲಾ ಚಟುವಟಿಕೆಗಳನ್ನು ಸ್ಥಗಿತಗೊಳಿಸಲಾಗಿತ್ತು. ಇದೀಗ ಲಾಕ್ ಡೌನ್ ಅನ್ನ ಹಂತಹಂತವಾಗಿ ತೆರವುಗೊಳಿಸಲಾಗುತ್ತಿದ್ದು, ಅನ್ಲಾಕ್ 4.0ನಲ್ಲಿ ಪ್ರವಾಸಿತಾಣಗಳನ್ನು ಪ್ರವಾಸಿಗರಿಗೆ ಷರತ್ತು ಮತ್ತು ಕಠಿಣ ಮಾರ್ಗಸೂಚಿಗಳ  ಮೇರೆಗೆ ಮುಕ್ತಗೊಳಿಸಲಾಗುತ್ತಿದೆ. ರಾಷ್ಟ್ರೀಯ ಹುಲಿ ಸಂರಕ್ಷಣಾ ಪ್ರಾಧಿಕಾರದ (ಎನ್‌ಟಿಸಿಎ) ನಿರ್ದೇಶನಗಳನ್ನು ಅನುಸರಿಸಿ ರಾಷ್ಟ್ರೀಯ ಉದ್ಯಾನವನಗಳನ್ನು ಪ್ರವಾಸಿಗರಿಗೆ ಮತ್ತು ಪ್ರಕೃತಿ ಪ್ರಿಯರಿಗೆ ಮುಕ್ತಗೊಳಿಸಲಾಗುತ್ತಿದೆ. 

ಪ್ರಸ್ತುತ ವಾರಾಂತ್ಯದ ವೇಳೆಗೆ ಸುಮಾರು 150 ಪ್ರವಾಸಿಗರು ರಾಷ್ಟ್ರೀಯ ಉಧ್ಯಾನವನ ಭೇಟಿಗೆ ಟಿಕೆಟ್ ಕಾಯ್ದಿರಿಸುತ್ತಿದ್ದಾರೆ. ಜೂನ್‌ನಲ್ಲೇ ಉದ್ಯಾನವನಗಳು ಪ್ರವಾಸಿಗರಿಗೆ ತೆರೆದಿತ್ತಾದರೂ, ಜುಲೈನಲ್ಲಿ ಸೋಂಕು ಪ್ರಕರಣಗಳ ಹೆಚ್ಚಳದಿಂದಾಗಿ, ಅವುಗಳನ್ನು ಮತ್ತೆ ಮುಚ್ಚಲಾಯಿತು, ಇದೀಗ ಮತ್ತೆ ರಾಷ್ಟ್ರೀಯ  ಉಧ್ಯಾನವನಗಳ ಸಫಾರಿಗಳನ್ನು ತೆರೆಯಲಾಗಿದ್ದು, ಪ್ರವಾಸಿಗರಿಂದ ಉತ್ತಮ ಪ್ರತಿಕ್ರಿಯೆ ಕಂಡುಬರುತ್ತಿದೆ.

ಈ ಬಗ್ಗೆ ಮಾಹಿತಿ ನೀಡಿರುವ ಬಂಡೀಪುರ ಟೈಗರ್ ರಿಸರ್ವ್ ನಿರ್ದೇಶಕ ಟಿ.ಬಾಲಚಂದ್ರ ಅವರು, ಕೋವಿಡ್-19 ಲಾಕ್ ಡೌನ್ ಬಳಿಕ ಇದೇ ಮೊದಲ ಬಾರಿಗೆ ರಾಷ್ಟ್ರೀಯ ಉದ್ಯಾನವನಗಳಲ್ಲಿ ಹೆಚ್ಚಿನ ಪ್ರವಾಸಿಗರು ಕಾಣುತ್ತಿದ್ದಾರೆ. ನಾಗರಹೊಳೆ ಭೇಟಿಗೂ ಪ್ರವಾಸಿಗರು ಆನ್ ಲೈನ್ ಬುಕಿಂಗ್ ಮಾಡಲಾಗುತ್ತಿದೆ.  ಎನ್‌ಟಿಸಿಎ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಅನುಸರಿಸುತ್ತಿದ್ದೇವೆ. ಇದು ಪ್ರವಾಸಿಗರ ಸುರಕ್ಷತೆಯನ್ನು ಖಾತರಿಪಡಿಸುತ್ತದೆ ಎಂದು ನಾಗರಹೊಳೆ ಹುಲಿ ಅಭಯಾರಣ್ಯದ ನಿರ್ದೇಶಕ ಮಹೇಶ್ ಕುಮಾರ್ ಹೇಳಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT