ಸಂಗ್ರಹ ಚಿತ್ರ 
ರಾಜ್ಯ

ಮೈಸೂರು: ಡೆಡ್ಲಿ ವೈರಸ್ ನಿಂದ ರಕ್ಷಿಸಲು ದಸರಾ ಆನೆಗಳಿಗೂ ಕೊರೋನಾ ಪರೀಕ್ಷೆ?

ಮನುಷ್ಯರಿಂದ ಆನೆಗಳಿಗೆ ಸೋಂಕು ತಗುಲುತ್ತದೆಯೇ ಎಂಬ ಪ್ರಶ್ನೆಗೆ ಅರಣ್ಯಾಧಿಕಾರಿಗಳಲ್ಲಿ ಉತ್ತರವಿಲ್ಲ, ಹೀಗಾಗಿ ಆನೆಗಳಿಗೂ ಕೊರೋನಾ ಪರೀಕ್ಷೆ ನಡೆಸಲು ನಿರ್ಧರಿಸಲಾಗಿದೆ.

ಮೈಸೂರು: ಮನುಷ್ಯರಿಂದ ಆನೆಗಳಿಗೆ ಸೋಂಕು ತಗುಲುತ್ತದೆಯೇ ಎಂಬ ಪ್ರಶ್ನೆಗೆ ಅರಣ್ಯಾಧಿಕಾರಿಗಳಲ್ಲಿ ಉತ್ತರವಿಲ್ಲ, ಹೀಗಾಗಿ ಆನೆಗಳಿಗೂ ಕೊರೋನಾ ಪರೀಕ್ಷೆ ನಡೆಸಲು ನಿರ್ಧರಿಸಲಾಗಿದೆ.

ಈ ವರ್ಷ ನಡೆಯುವ ಸರಳ ದಸರಾ ಆಚರಣೆಯಲ್ಲಿ ಡೆಡ್ಲಿ ವೈರಸ್ ನಿಂದ ಆನೆಗಳನ್ನು ರಕ್ಷಿಸಲು ಮುಂಜಾಗ್ರತಾ ಕ್ರ ಮ ಕೈಗೊಳ್ಳಲು ನಿರ್ಧರಿಸಲಾಗಿದೆ.

ಮೈಸೂರು ಅರಮನೆಯಲ್ಲಿರುವ ದಸರಾ ಆನೆಗಳನ್ನು ನೋಡಲು ಪ್ರವಾಸಿಗರಿಗೆ ನಿರ್ಬಂಧ ಹೇರಲಾಗಿದೆ, ಜೊತೆಗೆ ಆನೆಗಳಿರುವ ಸ್ಥಳಕ್ಕೆ ಪದೇ ಪದೇ ಹೋಗದಂತೆ ಮಾವುತರಿಗೂ ಸೂಚನೆ ನೀಡಲಾಗಿದೆ.

ದಸರಾ ಆಚರಣೆ ಮುಗಿದ ನಂತರ ಅವುಗಳಿಗೆ ಸೋಂಕು ತಗುಲಿದೆಯೇ ಅಥವಾ ಇಲ್ಲವೇ ಎಂಬುದನ್ನು ಪರೀಕ್ಷಿಸಲು ಆನೆಗಳು ಶಿಬಿರಕ್ಕೆ ತೆರಳುವ ಮುನ್ನ ಕೊರೋನಾ ಪರೀಕ್ಷೆ   ನಡೆಸಲಾಗುವುದು ಎಂದು ಅರಣ್ಯ ಉಪ ಸಂರಕ್ಷಕ ಅಲೆಕ್ಸಾಂಡರ್ ತಿಳಿಸಿದ್ದಾರೆ. ಇನ್ನೂ ಆನೆಗಳ ಜೊತೆ ಬಂದಿರುವ ಮಾವುತರು ಮತ್ತು ಕಾವಾಡಿಗರಿಗೂ ಆರೋಗ್ಯ ತಪಾಸಣೆ ಮಾಡಿಸಲು ನಿರ್ಧರಿಸಲಾಗಿದೆ.
 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT