ಷರಿಯಾ ಕಾನೂನು ಮುಂದಿಟ್ಟು ಎರಡನೇ ವಿವಾಹ ಸಮರ್ಥಿಸಿದವನ ವಾದ ತಿರಸ್ಕರಿಸಿದ ಕರ್ನಾಟಕ ಹೈಕೋರ್ಟ್ 
ರಾಜ್ಯ

ಷರಿಯಾ ಕಾನೂನು ಮುಂದಿಟ್ಟು ಎರಡನೇ ವಿವಾಹ ಸಮರ್ಥಿಸಿದವನ ವಾದ ತಿರಸ್ಕರಿಸಿದ ಕರ್ನಾಟಕ ಹೈಕೋರ್ಟ್ 

ಷರಿಯಾ ಕಾನೂನನ್ನು ಮುಂದಿಟ್ಟುಕೊಂಡು ತನ್ನ ಎರಡನೇ ವಿವಾಹವನ್ನು ಸಮರ್ಥಿಸಿಕೊಳ್ಳಲು ಯತ್ನಿಸಿದ ವ್ಯಕ್ತಿಯೋರ್ವನ ವಾದವನ್ನು ಹೈಕೋರ್ಟ್ ತಿರಸ್ಕರಿಸಿದೆ. 

ಬೆಂಗಳೂರು: ಷರಿಯಾ ಕಾನೂನನ್ನು ಮುಂದಿಟ್ಟುಕೊಂಡು ತನ್ನ ಎರಡನೇ ವಿವಾಹವನ್ನು ಸಮರ್ಥಿಸಿಕೊಳ್ಳಲು ಯತ್ನಿಸಿದ ವ್ಯಕ್ತಿಯೋರ್ವನ ವಾದವನ್ನು ಹೈಕೋರ್ಟ್ ತಿರಸ್ಕರಿಸಿದೆ. 

ಎರಡನೇ ವಿವಾಹ ಮೊದಲನೇ ಪತ್ನಿಗೆ ಮಾಡುವ ಅಗಾಧವಾದ ಕ್ರೌರ್ಯ ಎಂದು ಹೇಳಿದೆ. 

ಮುಸ್ಲಿಮರ ಕಾನೂನಿನಲ್ಲಿ ಬಹುಪತ್ನಿತ್ವ ಮಾನ್ಯವಿರಬಹುದು ಆದರೆ ಅದು ಮೊದಲ ಪತ್ನಿಯೆಡೆಗೆ ಅಗಾಧವಾದ ಕ್ರೌರ್ಯ ಎಂದು ವಿಚಾರಣೆ ವೇಳೆ ಹೈಕೋರ್ಟ್ ನ ಕಲಬುರಗಿ ವಿಭಾಗದ ಹೈಕೋರ್ಟ್ ಪೀಠದ ನ್ಯಾ. ಕೃಷ್ಣ ಎಸ್ ದೀಕ್ಷಿತ್, ನ್ಯಾ.ಪಿ ಕೃಷ್ಣಭಟ್ ಹೇಳಿದ್ದಾರೆ. ಈ ಮೂಲಕ ಕೆಳ ಹಂತದ ನ್ಯಾಯಾಲಯ ನೀಡಿದ್ದ ತೀರ್ಪನ್ನು ಅನೂರ್ಜಿತಗೊಳಿಸಬೇಕೆಂದು ಯೂಸೂಫ್ ಪಟೇಲ್ ಪಾಟೀಲ್ ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿದೆ. 

ವಿಜಯಪುರದ ನಿವಾಸಿ ಯೂಸೂಫ್ ಎಂಬಾತ 2014 ರಲ್ಲಿ ರಾಮ್ಜಾನ್ಭಿ ಎಂಬ ಮಹಿಳೆಯನ್ನು ಷರಿಯಾ ಕಾನೂನಿನ ಪ್ರಕಾರ ವಿವಾಹವಾಗಿದ್ದ ಇದಾದ ಕೆಲವೇ ದಿನಗಳಲ್ಲಿ ಎರಡನೇ ವಿವಾಹ ಮಾಡಿಕೊಂಡಿದ್ದ. 

ಎರಡನೇ ವಿವಾಹವನ್ನು ಪ್ರಶ್ನಿಸಿ ಮೊದಲ ಪತ್ನಿ ಕೋರ್ಟ್ ಮೆಟ್ಟಿಲೇರಿ ಅನೂರ್ಜಿತಗೊಳಿಸಬೇಕೆಂದು ಮನವಿ ಮಾಡಿದ್ದರು. ಅಷ್ಟೇ ಅಲ್ಲದೇ ಪತಿಯ ಮನೆಯವರು ತಮ್ಮ ಹಾಗೂ ತಮ್ಮ ಕುಟುಂಬ ಸದಸ್ಯರ ಮೇಲೆ ಹಲ್ಲೆ ನಡೆಸಿದ್ದಾರೆಂದೂ ಆರೋಪಿಸಿದ್ದರು. 

ಇದಕ್ಕೆ ಪ್ರತಿಕ್ರಿಯೆ ನೀಡಿದ್ದ ಯೂಸೂಫ್, ತಾನು ಮೊದಲ ಪತ್ನಿಯನ್ನು ಪ್ರೀತಿಸುತ್ತೇನೆ, ಆದರೆ ಷರಿಯಾ ಕಾನೂನಿನ ಪ್ರಕಾರ ಎರಡು ವಿವಾಹವಾಗುವುದಕ್ಕೆ ಅವಕಾಶವಿದೆ. ತಮ್ಮದು ಪ್ರಬಹವಿ ಕುಟುಂಬವಾಗಿದ್ದು, ಪೋಷಕರ ಒತ್ತಡಕ್ಕೆ ಮಣಿದು ಎರಡನೇ ವಿವಾಹವಾದೆ ಎಂದು ವಾದಿಸಿದ್ದರು. ಆದರೆ ಈ ವಾದವನ್ನು ಹೈಕೋರ್ಟ್ ತಿರಸ್ಕರಿಸಿದೆ. 
 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

Tariff ಬೆನ್ನಲ್ಲೇ ಅಮೆರಿಕ ಅಧ್ಯಕ್ಷರಿಗೆ ಯುದ್ಧೋನ್ಮಾದ: "ಯುದ್ಧ ಇಲಾಖೆ" ಬಗ್ಗೆ ಟ್ರಂಪ್ ಒಲವು!

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

Ragigudda Metro ಮೆಟ್ರೋ ನಿಲ್ದಾಣದಲ್ಲಿ ತಪ್ಪಿದ ದುರಂತ, ಆಯತಪ್ಪಿ ಹಳಿ ಮೇಲೆ ಬಿದ್ದ ಸಿಬ್ಬಂದಿ!... ಮುಂದೇನಾಯ್ತು? Video

ಸೌರಭ್ ಭಾರದ್ವಾಜ್ ಮನೆ ಮೇಲೆ ಇಡಿ ದಾಳಿ; ಮೋದಿ ನಕಲಿ ಪದವಿ ಕುರಿತ ಗಮನ ಬೇರೆಡೆ ಸೆಳೆಯಲು ಯತ್ನ ಎಂದ AAP

SCROLL FOR NEXT