ಸಿಎಂ ಯಡಿಯೂರಪ್ಪ 
ರಾಜ್ಯ

ಡ್ರಗ್ಸ್ ಮಾಫಿಯಾ ವಿರುದ್ಧ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಚರ್ಚಿಸಲು ಸಭೆ ಕರೆಯಿರಿ: ಸಿಎಂಗೆ ಎಂಎಲ್ಸಿ ಲೆಹರ್ ಸಿಂಗ್ ಸಿರೋಯಾ ಪತ್ರ

ಡ್ರಗ್ಸ್ ಮಾಫಿಯಾ ವಿರುದ್ಧ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಚರ್ಚಿಸಲು ಸಂಸದರು, ಶಾಸಕರು ಹಾಗೂ ಹಿರಿಯ ಅಧಿಕಾರಿಗಳನ್ನು ಕರೆದು ಸಭೆ ನಡೆಸುವಂತೆ ಬಿಜೆಪಿ ಹಿರಿಯ ಮುಖಂಡ ಮತ್ತು ವಿಧಾನ ಪರಿಷತ್ ಬಿಜೆಪಿ ಸದಸ್ಯ ಲೆಹರ್ ಸಿಂಗ್ ಸಿರೋಯಾ ಅವರು ಮನವಿ ಮಾಡಿಕೊಂಡಿದ್ದಾರೆ. 

ಬೆಂಗಳೂರು: ಡ್ರಗ್ಸ್ ಮಾಫಿಯಾ ವಿರುದ್ಧ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಚರ್ಚಿಸಲು ಸಂಸದರು, ಶಾಸಕರು ಹಾಗೂ ಹಿರಿಯ ಅಧಿಕಾರಿಗಳನ್ನು ಕರೆದು ಸಭೆ ನಡೆಸುವಂತೆ ಬಿಜೆಪಿ ಹಿರಿಯ ಮುಖಂಡ ಮತ್ತು ವಿಧಾನ ಪರಿಷತ್ ಬಿಜೆಪಿ ಸದಸ್ಯ ಲೆಹರ್ ಸಿಂಗ್ ಸಿರೋಯಾ ಅವರು ಮನವಿ ಮಾಡಿಕೊಂಡಿದ್ದಾರೆ. 

ಈ ಕುರಿತು ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಪತ್ರ ಬರೆದಿರುವ ಸಿರೋಯಾ ಅವರು, ನಾವೆಲ್ಲರೂ ಆತ್ಮಾವಲೋಕನ ಮಾಡಿಕೊಳ್ಳಬೇಕಿದೆ. ಡ್ರಗ್ಸ್ ದಂಧೆ ಪ್ರಕರಣದ ತನಿಖೆಯಲ್ಲಿ ಯಾರೊಬ್ಬರೂ ಮಧ್ಯೆ ಪ್ರವೇಶ ಮಾಡುವುದಿಲ್ಲ ಎಂಬುದಕ್ಕೆ ಬದ್ಧವಾಗಿರಬೇಕಿದೆ. ಶಿಕ್ಷಣ ಸಂಸ್ಥೆ, ಹೋಟೆಲ್, ಪಬ್ ಗಳು ಹಾಗೂ ಯಾವುದೇ ಸ್ಥಳಗಳಲ್ಲಿ ಡ್ರಗ್ಸ್ ದಂಧೆಯಲ್ಲಿ ಭಾಗಿಯಾದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕಿದೆ ಎಂದು ಹೇಳಿದ್ದಾರೆ. 

ಬಾಲಾಪರಾಧಿಗಳು ಹಾಗೂ ಶಾಲಾ ಮಕ್ಕಳು ಡ್ರಗ್ಸ್ ಮಾಫಿಯಾಗೆ ಬಲಿಯಾಗುತ್ತಿದ್ದಾರೆಂಬುದು ಗಂಭೀರವಾದ ವಿಚಾರವಾಗಿದೆ. ಸೂಕ್ತ ಹಾಗೂ ಸಮಯೋಚಿತ ಮಾರ್ಗದರ್ಶನಗಳಿಲ್ಲದ ಕಾರಣ ಹದಿಹರೆಯದವರು ದುರ್ಬಲರಾಗುತ್ತಿದ್ದಾರೆ. ಡ್ರಗ್ಸ್ ದಂಧೆ ಕುರಿತ ಕಾನೂನುಗಳನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುವುದು ಅತ್ಯಗತ್ಯವಿದೆ. ಈ ನಿಟ್ಟಿನಲ್ಲಿ ಎನ್‌ಡಿಪಿಎಸ್ ಕಾಯ್ದೆಯನ್ನು ಬಲಪಡಿಸುವಂತಹ ಹಾಗೂ ಸರಿಪಡಿಸುವ ಕ್ರಮವನ್ನು ಸರ್ಕಾರ ತೆಗೆದುಕೊಳ್ಳುವುದು ಅತ್ಯಗತ್ಯವಿದೆ ಎಂದು ತಿಳಿಸಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಡಿಕೆಶಿ ಸಂಪುಟಕ್ಕೆ ಮತ್ತೆ ಸರ್ಜರಿ? ಭಾರಿ ಬದಲಾವಣೆ, 3-5 ಸಚಿವರಿಗೆ ಕೊಕ್?; ಮಹಿಳೆ ಸೇರಿ ಕೆಲ ರೆಬೆಲ್ ನಾಯಕರಿಗೆ ಅವಕಾಶ ಸಾಧ್ಯತೆ

2013ರ ಲೈಂಗಿಕ ದೌರ್ಜನ್ಯ ಪ್ರಕರಣ: Tehelka ಮಾಜಿ ಸಂಪಾದಕ ತರುಣ್ ತೇಜ್‌ಪಾಲ್‌ಗೆ ಸುಪ್ರೀಂ ಕೋರ್ಟ್‌ ಶಾಕ್‌; 2 ವಾರಗಳಲ್ಲಿ ಶರಣಾಗುವಂತೆ ಖಡಕ್ ಸೂಚನೆ..!

ವಿಮಾನ ಸುರಕ್ಷತೆಯಲ್ಲಿ ರಾಜಿಯಿಲ್ಲ: ಪೈಲಟ್‌ಗಳ ಡ್ರಗ್‌ ಟೆಸ್ಟ್‌ ನಿಯಮದಲ್ಲಿ ಮಹತ್ವದ ಬದಲಾವಣೆ, ವರ್ಷವಿಡೀ ಯಾದೃಚ್ಛಿಕ ತಪಾಸಣೆಗೆ ಕೇಂದ್ರ ಸರ್ಕಾರ ಮುಂದು..!

ಕಾಶ್ಮೀರಿ ಪಂಡಿತರ ನರಮೇಧ: 28 ವರ್ಷಗಳ ಬಳಿಕ Wandhama ಕೇಸ್ ಫೈಲ್ ರೀ-ಓಪನ್, ತನಿಖೆ ಪುನರಾರಂಭ..!

ಹಿರಿಯೂರು ಬಳಿ ಸಮರ್ಥ್ ಶಾಮನೂರು ಕಾರು ಅಪಘಾತ: ಕಾಂಗ್ರೆಸ್ ಶಾಸಕ ಅಪಾಯದಿಂದ ಪಾರು!