ಹೆಚ್ ಡಿ ಕುಮಾರಸ್ವಾಮಿ 
ರಾಜ್ಯ

'ಹಿಂದಿ ದಿವಸ'ಆಚರಣೆ ಭಾಷಾ ಅಹಂಕಾರದ ಸಂಕೇತ, ಇದಕ್ಕೆ ಸ್ವಾಭಿಮಾನಿ ಕನ್ನಡಿಗರ ವಿರೋಧವಿದೆ: ಹೆಚ್ ಡಿ ಕುಮಾರಸ್ವಾಮಿ

ಇತ್ತೀಚೆಗೆ ಹಿಂದಿ ಭಾಷೆಯನ್ನು ಸಿದ್ಧಾಂತದ ವಿಚಾರವಾಗಿ ಪರಿವರ್ತಿಸಲಾಗಿದೆ. ರಾಷ್ಟ್ರೀಯತೆ, ದೇಶಭಕ್ತಿ, ಹಿಂದುತ್ವದೊಂದಿಗೆ ಹಿಂದಿಯನ್ನು ಸಮೀಕರಿಸಲಾಗಿದೆ. ಇದು ಅತ್ಯಂತ ದೊಡ್ಡ ದೇಶದ್ರೋಹದ ಕೆಲಸ ಎಂದು ಮಾಜಿ ಮುಖ್ಯಮಂತ್ರಿ, ಜೆಡಿಎಸ್ ನಾಯಕ ಹೆಚ್ ಡಿ ಕುಮಾರಸ್ವಾಮಿ ವಿರೋಧ ವ್ಯಕ್ತಪಡಿಸಿದ್ದಾರೆ.

ಬೆಂಗಳೂರು: ಇತ್ತೀಚೆಗೆ ಹಿಂದಿ ಭಾಷೆಯನ್ನು ಸಿದ್ಧಾಂತದ ವಿಚಾರವಾಗಿ ಪರಿವರ್ತಿಸಲಾಗಿದೆ. ರಾಷ್ಟ್ರೀಯತೆ, ದೇಶಭಕ್ತಿ, ಹಿಂದುತ್ವದೊಂದಿಗೆ ಹಿಂದಿಯನ್ನು ಸಮೀಕರಿಸಲಾಗಿದೆ. ಇದು ಅತ್ಯಂತ ದೊಡ್ಡ ದೇಶದ್ರೋಹದ ಕೆಲಸ ಎಂದು ಮಾಜಿ ಮುಖ್ಯಮಂತ್ರಿ, ಜೆಡಿಎಸ್ ನಾಯಕ ಹೆಚ್ ಡಿ ಕುಮಾರಸ್ವಾಮಿ ವಿರೋಧ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಅವರು, ವಿವಿಧ ಭಾಷೆಗಳನ್ನು ಆಡುವ ಭಾರತೀಯರ ದೇಶಭಕ್ತಿಯನ್ನು ಭಾಷೆ ಮೂಲಕ ಅಳೆಯುವುದು ಅಪಚಾರ, ಇದು ದೇಶದ ಸಮಗ್ರತೆಗೆ ಎಸೆದ ಸವಾಲಾಗಿದೆ. ದಕ್ಷಿಣ ರಾಜ್ಯಗಳ ಪೈಕಿ ಕರ್ನಾಟಕದಲ್ಲಿ ಹಿಂದಿಯನ್ನು ಸುಲಭವಾಗಿ ಹೇರಬಹುದು ಎಂದು ಹಿಂದಿ ಶ್ರೇಷ್ಠತೆ ವ್ಯಸನಿಗಳು ಅಂದಾಜಿಸಿದ್ದಾರೆ. ಇದಕ್ಕೆ ರಾಜ್ಯ ಬಿಜೆಪಿ ನಾಯಕರ ಪ್ರೋತ್ಸಾಹ, ಬೆಂಬಲವೂ ಕಾರಣವಿರಬಹುದು. ಕನ್ನಡಿಗರದ್ದು ಸೌಹಾರ್ದ ಗುಣ. ಅದನ್ನು ದೌರ್ಬಲ್ಯ ಎಂದು ಭಾವಿಸಬೇಡಿ ಎಂದು ಎಚ್ಚರಿಕೆ ಕೂಡ ನೀಡಿದ್ದಾರೆ. 

ವಿವಿಧ ಭಾಷೆ, ವಿಭಿನ್ನ ಸಂಸ್ಕೃತಿ, ಪರಂಪರೆಗಳನ್ನು ಒಡಲಲ್ಲಿಟ್ಟುಕೊಂಡ ಭಾರತದಲ್ಲಿ, ಕನ್ನಡಿಗರೂ ಸೇರಿದಂತೆ ಅನ್ಯ ಭಾಷಿಕರ ಮೇಲೆ ಹಿಂದಿಯನ್ನು ಬಲವಂತವಾಗಿ ಹಲವು ಮಾರ್ಗಗಳ ಮೂಲಕ ಹೇರಲಾಗುತ್ತಿದೆ. ಹಿಂದಿ ದಿವಸ ಆಚರಣೆ ಅಂಥವುಗಳಲ್ಲಿ ಒಂದು. ಭಾಷಾ ಅಹಂಕಾರದ ಸಂಕೇತವಾದ ಹಿಂದಿ ದಿವಸಕ್ಕೆ ಸ್ವಾಭಿಮಾನಿ ಕನ್ನಡಿಗರ ಪ್ರಬಲ ವಿರೋಧವಿದೆ ಎಂದು ಅವರು ಹೇಳಿದ್ದಾರೆ.

ಕೇಂದ್ರ ಸರ್ಕಾರ ಇಂದು ಅಂದರೆ ಸೆಪ್ಟೆಂಬರ್ 14ರಂದು ಹಿಂದಿ ದಿವಸ ಆಚರಣೆಗೆ ಕರೆ ನೀಡಿದೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

ದಲಿತಾಸ್ತ್ರದ ಮೂಲಕ ಕಟ್ಟಿಹಾಕಲು ಸಿದ್ದು ಬಣ ಕಸರತ್ತು: ತೆರಮರೆಯಲ್ಲಿ ಡಿಕೆಶಿ ಬೆಂಬಲಿಗರ ಮಸಲತ್ತು; ಅಂತರ್ಯುದ್ಧದಲ್ಲಿ ಯಾರಿಗಿದೆ ಗೆಲ್ಲುವ ತಾಕತ್ತು?

Gold Rate Today: ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ವಿವರ...

ಆರೋಗ್ಯ ಇಲಾಖೆಯಿಂದ ಉರ್ದು ಭಾಷೆ ಆಹ್ವಾನ ಪತ್ರಿಕೆ: ಜನರನ್ನು ದಾರಿ ತಪ್ಪಿಸಲೇಬೇಕು ಎಂಬ ಹಠಕ್ಕೆ ಬಿದ್ದಿದ್ದೀರಾ?

SCROLL FOR NEXT