ಕೆಎಸ್ ಆರ್ ರೈಲು ನಿಲ್ದಾಣ 
ರಾಜ್ಯ

ಹಿಂದಿ ದಿವಸ್ ವಿವಾದ: ಎಲ್ಲಾ ಭಾಷೆಗಳ ಆಚರಣೆಗೆ ಕರೆ

ಹಿಂದಿಯೇತರ ರಾಜ್ಯಗಳಲ್ಲಿ ಹಿಂದಿ ದಿವಸ್' ಆಚರಣೆಗೆ ರಾಜಕೀಯ ಪಕ್ಷಗಳ ಮುಖಂಡರು, ಕನ್ನಡ ಪರ ಸಂಘಟನೆಗಳು ಮತ್ತು ನೆಟ್ಟಿಗರಿಂದ ಸೋಮವಾರ ತೀವ್ರ ವಿರೋಧ ವ್ಯಕ್ತವಾಯಿತು.

ಬೆಂಗಳೂರು: ಹಿಂದಿಯೇತರ ರಾಜ್ಯಗಳಲ್ಲಿ ಹಿಂದಿ ದಿವಸ್' ಆಚರಣೆಗೆ ರಾಜಕೀಯ ಪಕ್ಷಗಳ ಮುಖಂಡರು, ಕನ್ನಡ ಪರ ಸಂಘಟನೆಗಳು ಮತ್ತು ನೆಟ್ಟಿಗರಿಂದ ಸೋಮವಾರ ತೀವ್ರ ವಿರೋಧ ವ್ಯಕ್ತವಾಯಿತು.

ಹಿಂದಿ ದಿವಸ್ ಆಚರಣೆಯನ್ನು ಕೇಂದ್ರ ಸರ್ಕಾರ ನಿಲ್ಲಿಸಬೇಕು, ಕೇವಲ ಹಿಂದಿ ದಿವಸ್ ಆಚರಣೆಯಷ್ಟೇ ಯಾಕೆ? ಕನ್ನಡ ಸೇರಿದಂತೆ ಎಲ್ಲಾ ಭಾಷೆಗಳನ್ನು ದೇಶಾದ್ಯಂತ ಆಚರಿಸಬೇಕು ಎಂದು ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಒತ್ತಾಯಿಸಿದ್ದಾರೆ.

ಈ ಮಧ್ಯೆ ಅನೇಕ  ನಟರು ಕೂಡಾ ಹಿಂದಿ ದಿವಸ್ ಆಚರಣೆಗೆ ವಿರೋಧ ವ್ಯಕ್ತಪಡಿಸಿದ್ದಾರೆ. ಕನ್ನಡಿಗರಾದ ನಾವು ಎಲ್ಲಾ ಭಾಷೆಗಳನ್ನು ಪ್ರೀತಿಸುತ್ತಿವೆ. ಆದರೆ, ಕನ್ನಡ ಪ್ರೀತಿಸುತ್ತೇವೆ. ಹಿಂದಿ ಹೇರಬೇಡಿ ಎಂದು ನಟ ಧನಂಜಯ್ ಕನ್ನಡದಲ್ಲಿ ಸಂದೇಶದೊಂದಿಗೆ ಟೀ ಶರ್ಟ್ ಹಾರಿಸುತ್ತಾ, ಟ್ವೀಟ್ ಮಾಡಿದ್ದಾರೆ.

ನಟ ಪ್ರಕಾಶ್ ರಾಜ್ ಮತ್ತು ಚೇತನ್ ಕೂಡಾ ಇದೇ ರೀತಿಯ ಸಂದೇಶ ನೀಡಿದ್ದಾರೆ. ಕನ್ನಡಪರ ಸಂಘಟನೆಯ ಸದಸ್ಯರು ಆನಂದ್ ರಾವ್ ಮೇಲ್ಸುತುವೆ ಬಳಿ ಪ್ರತಿಭಟನೆ ನಡೆಸಿದರು. ನೆಟ್ಟಿಗರು ಕೂಡಾ ವಿವಿಧ ಸಾಮಾಜಿಕ ಜಾಲತಾಣಗಳಲ್ಲಿ ತೀವ್ರ ವಿರೋಧ ವ್ಯಕ್ತಪಡಿಸಿದರು.

ಕನ್ನಡ ರಕ್ಷಣಾ ವೇದಿಕೆಯ ಗುಂಪೊಂದು  ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣದಲ್ಲಿ ಬೋರ್ಡ್ ನ್ನು ಕಿತ್ತು ಹಾಕಿ ಕಪ್ಪು ಬಣ್ಣ ಬಳಿದರು. ಈ ಸಂಬಂಧ ಎರಡು ಎಫ್ ಐಆರ್ ಗಳು ದಾಖಲಾಗಿವೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

ದಲಿತಾಸ್ತ್ರದ ಮೂಲಕ ಕಟ್ಟಿಹಾಕಲು ಸಿದ್ದು ಬಣ ಕಸರತ್ತು: ತೆರಮರೆಯಲ್ಲಿ ಡಿಕೆಶಿ ಬೆಂಬಲಿಗರ ಮಸಲತ್ತು; ಅಂತರ್ಯುದ್ಧದಲ್ಲಿ ಯಾರಿಗಿದೆ ಗೆಲ್ಲುವ ತಾಕತ್ತು?

Gold Rate Today: ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ವಿವರ...

ಆರೋಗ್ಯ ಇಲಾಖೆಯಿಂದ ಉರ್ದು ಭಾಷೆ ಆಹ್ವಾನ ಪತ್ರಿಕೆ: ಜನರನ್ನು ದಾರಿ ತಪ್ಪಿಸಲೇಬೇಕು ಎಂಬ ಹಠಕ್ಕೆ ಬಿದ್ದಿದ್ದೀರಾ?

SCROLL FOR NEXT