ಶಾಸಕ ಹ್ಯಾರಿಸ್ 
ರಾಜ್ಯ

ಶಾಸಕಾಂಗ ಪಕ್ಷದ ಸಭೆಯಲ್ಲಿದ್ದಾಗಲೇ ಹ್ಯಾರಿಸ್ ಗೆ ಬಂತು ಮೊಬೈಲ್ ಸಂದೇಶ, ಕಾಂಗ್ರೆಸ್ ಶಾಸಕರಿಗೀಗ ಆತಂಕ!

ಇದೇ ತಿಂಗಳ 21 ರಿಂದ ವಿಧಾನ ಮಂಡಲ ಅಧಿವೇಶನ ಆರಂಭವಾಗಲಿದೆ. ಸದನದಲ್ಲಿ ಹಲವು ವಿಚಾರಗಳನ್ನು ಪ್ರಸ್ತಾಪ ಮಾಡಲು ಕಾಂಗ್ರೆಸ್ ಶಾಸಕಾಂಗ ನಾಯಕ ಸಿದ್ದರಾಮಯ್ಯ ಕರೆದಿದ್ದ ಶಾಸಕಾಂಗ ಸಭೆಯಲ್ಲಿ ಶಾಂತಿನಗರ ಮತಕ್ಷೇತ್ರದ ಶಾಸಕ ಎನ್.ಎ.ಹ್ಯಾರಿಸ್ ಅವರು ಸಹ ಭಾಗವಹಿಸಿದ್ದರು.

ಬೆಂಗಳೂರು: ಇದೇ ತಿಂಗಳ 21 ರಿಂದ ವಿಧಾನ ಮಂಡಲ ಅಧಿವೇಶನ ಆರಂಭವಾಗಲಿದೆ. ಸದನದಲ್ಲಿ ಹಲವು ವಿಚಾರಗಳನ್ನು ಪ್ರಸ್ತಾಪ ಮಾಡಲು ಕಾಂಗ್ರೆಸ್ ಶಾಸಕಾಂಗ ನಾಯಕ ಸಿದ್ದರಾಮಯ್ಯ ಕರೆದಿದ್ದ ಶಾಸಕಾಂಗ ಸಭೆಯಲ್ಲಿ ಶಾಂತಿನಗರ ಮತಕ್ಷೇತ್ರದ ಶಾಸಕ ಎನ್.ಎ.ಹ್ಯಾರಿಸ್ ಅವರು ಸಹ ಭಾಗವಹಿಸಿದ್ದರು.

ಹ್ಯಾರಿಶ್ ಅವರು ಸಭೆಯಲ್ಲಿದ್ದಾಗಲೇ ಅವರ ಮೊಬೈಲ್ ಗೆ ಸಂದೇಶವೊಂದು ಬಂದಿದ್ದು, ಅಲ್ಲಿದ್ದ ಇತರ ಶಾಸಕರಿಗೆ ಈಗ ಆತಂಕ ಶುರುವಾಗಿದೆ.

ಸದನಕ್ಕೆ ಪಕ್ಷದ ತಯಾರಿ ಹೇಗಿರಬೇಕೆಂಬ ಚರ್ಚೆಗಾಗಿ ಕರೆದಿದ್ದ ಸಭೆಯಲ್ಲಿ ಭಾಗವಹಿಸುವ ಮುನ್ನ ಹ್ಯಾರಿಶ್ ಅವರು ಕೋವಿಡ್-19  ಪರೀಕ್ಷೆಗೊಳಗಾಗಿದ್ದರು. ಆದರೆ ಫಲಿತಾಂಶ ಬರುವುದು ತಡವಾದ್ದರಿಂದ ಹ್ಯಾರೀಸ್ ಸಭೆಗೆ ಹಾಜರಾಗಿದ್ದರು. ಸಭೆಯ ಬಳಿಕ ಮಧ್ಯಾಹ್ನ ಭೋಜನದ ವೇಳೆ ಹ್ಯಾರೀಸ್ ಮೊಬೈಲ್ ಗೆ ಸಂದೇಶವೊಂದು ಬಂದಿದ್ದು, ಸಂದೇಶ ಬಂದ ತಕ್ಷಣವೇ ಹ್ಯಾರೀಸ್ ಸಭೆಯಿಂದ ಹೊರನಡೆದಿದ್ದಾರೆ.

ಇದು ಹ್ಯಾರೀಸ್ ಗೆ ಕೊರೊನಾ ಸೋಂಕು ದೃಢಪಟ್ಟಿರುವ ಬಗ್ಗೆ ಸಂದೇಶ ಬಂದಿದೆ ಎನ್ನಲಾಗಿದ್ದು, ಹ್ಯಾರೀಸ್ ತಮ್ಮ ಮನೆಗೆ ತೆರಳಿ ಹೋಮ್ ಐಸೋಲೇಶನ್ ಆಗಿದ್ದಾರೆ. ಹ್ಯಾರೀಸ್ ಜೊತೆ ಊಟ ಮಾಡಿದ್ದ, ಸಭೆಯಲ್ಲಿ ಭಾಗವಹಿಸಿದ್ದ ಕಾಂಗ್ರೆಸ್ ಶಾಸಕರಿಗೀಗ ಆತಂಕ ಶುರುವಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಲಾಲ್ ಬಾಗ್ ಅಭಿವೃದ್ಧಿಗೆ 10 ಕೋಟಿ ರೂ; ಸುರಂಗ ರಸ್ತೆ ಯೋಜನೆಯಿಂದ ಸಸ್ಯೋದ್ಯಾನದ ಮೇಲೆ ಯಾವುದೇ ಎಫೆಕ್ಟ್ ಆಗಲ್ಲ: ಡಿ.ಕೆ ಶಿವಕುಮಾರ್; Video

ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆ: ಒಂದಾದ ಜಾರಕಿಹೊಳಿ ಬ್ರದರ್ಸ್‌ಗೆ ಜಾಕ್‌ಪಾಟ್; ರಮೇಶ್ ಕತ್ತಿ ಬಣಕ್ಕೆ ಶಾಕ್!

ನೊಬೆಲ್ ಶಾಂತಿ ಪ್ರಶಸ್ತಿ ಘೋಷಣೆಯಾಗುತ್ತಿದ್ದಂತೆಯೇ Maria Corina Machado ವಿವಾದಕ್ಕೆ ಗುರಿ; ಭುಗಿಲೆದ್ದ ಅಶಾಂತಿ!

Shocking: ಹೆಣ್ಣಿನ ಶವ ಎಳೆದೊಯ್ದು ಶವಾಗಾರದಲ್ಲೇ ಅತ್ಯಾಚಾರ, 25ರ ಯುವಕನಿಂದ ಪೈಶಾಚಿಕ ಕೃತ್ಯ, CCTV Video

Belagavi: ಲವರ್ ಜೊತೆ ಮಗಳು ಪರಾರಿ; ಇಡೀ ಊರಿಗೆ 'ತಿಥಿ' ಊಟ ಹಾಕಿಸಿದ ತಂದೆ!

SCROLL FOR NEXT