ಶಾಸಕ ಹ್ಯಾರಿಸ್ 
ರಾಜ್ಯ

ಶಾಸಕಾಂಗ ಪಕ್ಷದ ಸಭೆಯಲ್ಲಿದ್ದಾಗಲೇ ಹ್ಯಾರಿಸ್ ಗೆ ಬಂತು ಮೊಬೈಲ್ ಸಂದೇಶ, ಕಾಂಗ್ರೆಸ್ ಶಾಸಕರಿಗೀಗ ಆತಂಕ!

ಇದೇ ತಿಂಗಳ 21 ರಿಂದ ವಿಧಾನ ಮಂಡಲ ಅಧಿವೇಶನ ಆರಂಭವಾಗಲಿದೆ. ಸದನದಲ್ಲಿ ಹಲವು ವಿಚಾರಗಳನ್ನು ಪ್ರಸ್ತಾಪ ಮಾಡಲು ಕಾಂಗ್ರೆಸ್ ಶಾಸಕಾಂಗ ನಾಯಕ ಸಿದ್ದರಾಮಯ್ಯ ಕರೆದಿದ್ದ ಶಾಸಕಾಂಗ ಸಭೆಯಲ್ಲಿ ಶಾಂತಿನಗರ ಮತಕ್ಷೇತ್ರದ ಶಾಸಕ ಎನ್.ಎ.ಹ್ಯಾರಿಸ್ ಅವರು ಸಹ ಭಾಗವಹಿಸಿದ್ದರು.

ಬೆಂಗಳೂರು: ಇದೇ ತಿಂಗಳ 21 ರಿಂದ ವಿಧಾನ ಮಂಡಲ ಅಧಿವೇಶನ ಆರಂಭವಾಗಲಿದೆ. ಸದನದಲ್ಲಿ ಹಲವು ವಿಚಾರಗಳನ್ನು ಪ್ರಸ್ತಾಪ ಮಾಡಲು ಕಾಂಗ್ರೆಸ್ ಶಾಸಕಾಂಗ ನಾಯಕ ಸಿದ್ದರಾಮಯ್ಯ ಕರೆದಿದ್ದ ಶಾಸಕಾಂಗ ಸಭೆಯಲ್ಲಿ ಶಾಂತಿನಗರ ಮತಕ್ಷೇತ್ರದ ಶಾಸಕ ಎನ್.ಎ.ಹ್ಯಾರಿಸ್ ಅವರು ಸಹ ಭಾಗವಹಿಸಿದ್ದರು.

ಹ್ಯಾರಿಶ್ ಅವರು ಸಭೆಯಲ್ಲಿದ್ದಾಗಲೇ ಅವರ ಮೊಬೈಲ್ ಗೆ ಸಂದೇಶವೊಂದು ಬಂದಿದ್ದು, ಅಲ್ಲಿದ್ದ ಇತರ ಶಾಸಕರಿಗೆ ಈಗ ಆತಂಕ ಶುರುವಾಗಿದೆ.

ಸದನಕ್ಕೆ ಪಕ್ಷದ ತಯಾರಿ ಹೇಗಿರಬೇಕೆಂಬ ಚರ್ಚೆಗಾಗಿ ಕರೆದಿದ್ದ ಸಭೆಯಲ್ಲಿ ಭಾಗವಹಿಸುವ ಮುನ್ನ ಹ್ಯಾರಿಶ್ ಅವರು ಕೋವಿಡ್-19  ಪರೀಕ್ಷೆಗೊಳಗಾಗಿದ್ದರು. ಆದರೆ ಫಲಿತಾಂಶ ಬರುವುದು ತಡವಾದ್ದರಿಂದ ಹ್ಯಾರೀಸ್ ಸಭೆಗೆ ಹಾಜರಾಗಿದ್ದರು. ಸಭೆಯ ಬಳಿಕ ಮಧ್ಯಾಹ್ನ ಭೋಜನದ ವೇಳೆ ಹ್ಯಾರೀಸ್ ಮೊಬೈಲ್ ಗೆ ಸಂದೇಶವೊಂದು ಬಂದಿದ್ದು, ಸಂದೇಶ ಬಂದ ತಕ್ಷಣವೇ ಹ್ಯಾರೀಸ್ ಸಭೆಯಿಂದ ಹೊರನಡೆದಿದ್ದಾರೆ.

ಇದು ಹ್ಯಾರೀಸ್ ಗೆ ಕೊರೊನಾ ಸೋಂಕು ದೃಢಪಟ್ಟಿರುವ ಬಗ್ಗೆ ಸಂದೇಶ ಬಂದಿದೆ ಎನ್ನಲಾಗಿದ್ದು, ಹ್ಯಾರೀಸ್ ತಮ್ಮ ಮನೆಗೆ ತೆರಳಿ ಹೋಮ್ ಐಸೋಲೇಶನ್ ಆಗಿದ್ದಾರೆ. ಹ್ಯಾರೀಸ್ ಜೊತೆ ಊಟ ಮಾಡಿದ್ದ, ಸಭೆಯಲ್ಲಿ ಭಾಗವಹಿಸಿದ್ದ ಕಾಂಗ್ರೆಸ್ ಶಾಸಕರಿಗೀಗ ಆತಂಕ ಶುರುವಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ.50 ರಷ್ಟು ಸುಂಕ ನಾಳೆ ಜಾರಿ: ಕರಡು ಸೂಚನೆ ಹೊರಡಿಸಿದ ಅಮೆರಿಕ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ದಾಳಿ ಕುರಿತು ಮೊದಲ ಬಾರಿಗೆ ಇಸ್ರೇಲ್ ವಿಷಾದ

SCROLL FOR NEXT