ಸಂಗ್ರಹ ಚಿತ್ರ 
ರಾಜ್ಯ

ಕೊರೋನಾ ಸೋಂಕಿನಿಂದ ಗುಣಮುಖರಾದವರಿಗೆ ಕೌನ್ಸಿಲಿಂಗ್ ಮಾಡಲು ಬಿಬಿಎಂಪಿ ನಿರ್ಧಾರ

ಒಂದೆಡೆ ಕೊರೋನಾ ಸೋಂಕು ಭಯ ಮತ್ತೊಂದೆಡೆ ಸಾಮಾಜಿಕ ಬಹಿಷ್ಕಾರ ಎರಡೂ ಭೀತಿ ಇತ್ತೀಚಿನ ದಿನಗಳಲ್ಲಿ ಜನರಲ್ಲಿ ಮಾನಸಿಕ ರೋಗಗಳನ್ನು ಆರಂಭಿಸುತ್ತಿದ್ದು, ಈ ಹಿನ್ನೆಲೆಯಲ್ಲಿ ಸೋಂಕಿನಿಂದ ಗುಣಮುಖರಾದ ಜನರಿಗೆ ಕೌನ್ಸಿಲಿಂಗ್ ಮಾಡಲು ಬಿಬಿಎಂಬಿ ಹಾಗೂ ಆರೋಗ್ಯ ಇಲಾಖೆಯ ಅಧಿಕಾರಿಗಳು ನಿರ್ಧರಿಸಿದ್ದಾರೆ. 

ಬೆಂಗಳೂರು: ಒಂದೆಡೆ ಕೊರೋನಾ ಸೋಂಕು ಭಯ ಮತ್ತೊಂದೆಡೆ ಸಾಮಾಜಿಕ ಬಹಿಷ್ಕಾರ ಎರಡೂ ಭೀತಿ ಇತ್ತೀಚಿನ ದಿನಗಳಲ್ಲಿ ಜನರಲ್ಲಿ ಮಾನಸಿಕ ರೋಗಗಳನ್ನು ಆರಂಭಿಸುತ್ತಿದ್ದು, ಈ ಹಿನ್ನೆಲೆಯಲ್ಲಿ ಸೋಂಕಿನಿಂದ ಗುಣಮುಖರಾದ ಜನರಿಗೆ ಕೌನ್ಸಿಲಿಂಗ್ ಮಾಡಲು ಬಿಬಿಎಂಬಿ ಹಾಗೂ ಆರೋಗ್ಯ ಇಲಾಖೆಯ ಅಧಿಕಾರಿಗಳು ನಿರ್ಧರಿಸಿದ್ದಾರೆ. 

ಕೌನ್ಸಿಲಿಂಗ್ ವೇಳೆ ಸೋಂಕಿನಿಂದ ಗುಣಮುಖರಾದವರಿಗೆ ಪ್ಲಾಸ್ಮಾ ದಾನ ಕುರಿತಂತೆ ಮಾಹಿತಿ ನೀಡಿ ಜನರು ಪ್ಲಾಸ್ಮಾ ದಾನ ಮಾಡಲು ಪ್ರೇರೇಪಿಸುವ ಕಾರ್ಯಗಳೂ ನಡೆಯಲಿದೆ. ಪ್ಲಾಸ್ಮಾ ಚಿಕಿತ್ಸೆ ಪರಿಣಾಮಕಾರಿಯಾಗಿದೆ ಎಂದು ಐಸಿಎಂಆರ್ ಹೇಳದೇ ಹೋದರೂ ರಾಜ್ಯದಲ್ಲಿ ಈ ಚಿಕಿತ್ಸೆಗೆ ಉತ್ತಮ ಫಲಿತಾಂಶ ಬರುತ್ತಿದ್ದು, ಈ ಚಿಕಿತ್ಸೆಮುಂದುವರೆಸಲು ರಾಜ್ಯ ಸರ್ಕಾರ ನಿರ್ಧರಿಸಿದೆ ಎಂದು ಬಿಬಿಎಂಪಿ ಆಯುಕ್ತ ಎನ್. ಮಂಜುನಾಥ್ ಪ್ರಸಾದ್ ಅವರು ಹೇಳಿದ್ದಾರೆ. 

ಕೊರೋನಾ ಪಾಸಿಟಿವ್ ಬಂದ ಕೂಡಲೇ ಜನರು ಹೆಚ್ಚೆಚ್ಚು ಭೀತಿಗೊಳಗಾಗುತ್ತಿದ್ದಾರೆ. ಅಂತಹವರಿಗೆ ಸೂಕ್ತ ಕೌನ್ಸಿಲಿಂಗ್ ನಡೆಸುವ ಅಗತ್ಯವಿದೆ. ಸೋಂಕಿನಿಂದ ಗುಣಮುಖರಾದ ಬಳಿಕ ವ್ಯಕ್ತಿ ಪ್ಲಾಸ್ಮಾ ದಾನ ಮಾಡಬಹುದಾಗಿದೆ. ಇದು ಇತರೆ ಸೋಂಕಿತರು ಗುಣಮುಖರಾಗಲು ಸಹಾಯ ಮಾಡುತ್ತದೆ ಎಂದು ತಿಳಿಸಿದ್ದಾರೆ. 

ಆರೋಗ್ಯ ಇಲಾಖೆಯ ಅಧಿಕಾರಿಗಳು ಮಾತನಾಡಿ, ಕೊರೋನಾ ಸೋಂಕು ದೃಢಪಡುತ್ತಿದ್ದಂತೆಯೇ ಸೋಂಕಿತರುಮನೆಯಲ್ಲಿಯೇ ಇರಲಿ, ಕೋವಿಡ್ ಕೇರ್ ಕೇಂದ್ರ ಅಥವಾ ಆಸ್ಪತ್ರೆಯಲ್ಲಿ ಸಾಮಾಜಿಕ ಬಹಿಷ್ಕಾರ ಕುರಿತು ಭೀತಿಗೊಳಗಾಗುತ್ತಿದ್ದಾರೆ. ಹೀಗಾಗಿ ಗುಣಮುಖರಾದ ಬಳಿಕ ಇತರರಿಗೆ ಸಹಾಯ ಮಾಡಲು ಮುಂದಾಗುತ್ತಿಲ್ಲ ಎಂದು ಹೇಳಿದ್ದಾರೆ. 

ಪ್ಸಾಸ್ಮಾ ದಾನ ಮಾಡಲು ಇಂತಹವರಿಗೆ ಮಾನಸಿಕವಾಗಿ ಹಾಗೂ ಭಾವನಾತ್ಮಕವಾಗಿ ಗಟ್ಟಿಗೊಳ್ಳುವಂತೆ ಮಾಡಬೇಕು. ಪ್ಲಾಸ್ಮಾ ದಾನ ಮಾಡಿದರೆ, ನಿಮ್ಮ ಕುಟುಂಬ ಸದಸ್ಯರಿಗೂ ಕೂಡ ಸಹಾಯವಾಗಲಿದೆ ಎಂಬುದನ್ನು ಕೌನ್ಸಿಲಿಂಗ್ ವೇಳೆ ತಿಳಿಸುತ್ತೇವೆ. ಸೋಂಕಿನಿಂದ ಗುಣಮುಖರಾದವರೊಂದಿಗೆ ಆರೋಗ್ಯಾಧಿಕಾರಿಗಳು ಮಾತುಕತೆ ನಡೆಸಲಿದ್ದು, ಈ ವೇಳೆ ಅವರ ಆರೋಗ್ಯ ಸ್ಥಿತಿ ಕುರಿತು ಮಾಹಿತಿ ನೀಡಿ, ಉದ್ಯೋಗ, ಜೀವನ, ಕುಟುಂಬದ ಕುರಿತು ಎಲ್ಲಾ ರೀತಿಯಲ್ಲಿ ಸ್ನೇಹಯುತದಿಂದ ಮಾತನಾಡುತ್ತಾರೆ. ಬೆಳಗಿನ ಸಮಯದಲ್ಲಿ ವಾಕಿಂಗ್ ಹೋಗುವಂತೆ ಹಾಗೂ ಇತರೆ ಜನರನ್ನು ನೋಡಿ ಅವರು ನಿಮಗೆ ತಿಳಿಯದ ವ್ಯಕ್ತಿಯಾದರೂ ನಗುಮುಖದಿಂದ ತೋರಿಸುವಂತೆ ಸೂಚಿಸುತ್ತೇವೆ. ನಿಮ್ಮ ದೈಹಿಕ ಬಲವನ್ನು ಅರ್ಥೈಸಿಕೊಂಡು ಕೆಲಸವನ್ನು ಮಾಡುವಂತೆ ಇದೇ ವೇಳೆ ಸಲಹೆಯನ್ನೂ ನೀಡುತ್ತೇವೆಂದು ತಿಳಿಸಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT