ಕೊರೋನಾದಿಂದ ಬಿಜೆಪಿ ರಾಜ್ಯಸಭಾ ಸದಸ್ಯ ಅಶೋಕ್ ಗಸ್ತಿ ನಿಧನ: ಪ್ರಧಾನಿ ಮೋದಿ ಸಂತಾಪ 
ರಾಜ್ಯ

ಕೊರೋನಾದಿಂದ ಬಿಜೆಪಿ ರಾಜ್ಯಸಭಾ ಸದಸ್ಯ ಅಶೋಕ್ ಗಸ್ತಿ ನಿಧನ: ಪ್ರಧಾನಿ ಮೋದಿ ಸಂತಾಪ 

ಇತ್ತೀಚಿಗಷ್ಟೇ ಬಿಜೆಪಿಯಿಂದ ರಾಜ್ಯಸಭೆಗೆ ಆಯ್ಕೆಯಾಗಿದ್ದ ಅಶೋಕ್​ ಗಸ್ತಿ(55) ಕೊರೋನಾ ಸೋಂಕಿನಿಂದ ಮೃತಪಟ್ಟಿದ್ದಾರೆ. 

ಬೆಂಗಳೂರು: ಇತ್ತೀಚಿಗಷ್ಟೇ ಬಿಜೆಪಿಯಿಂದ ರಾಜ್ಯಸಭೆಗೆ ಆಯ್ಕೆಯಾಗಿದ್ದ ಅಶೋಕ್​ ಗಸ್ತಿ(55) ಕೊರೋನಾ ಸೋಂಕಿನಿಂದ ಮೃತಪಟ್ಟಿದ್ದಾರೆ. 

ಮಣಿಪಾಲ್ ಆಸ್ಪತ್ರೆಯಲ್ಲಿ ಗಸ್ತಿ ಚಿಕಿತ್ಸೆ ಪಡೆಯುತ್ತಿದ್ದರು. ಅಶೋಕ್ ಗಸ್ತಿ ಬಹು ಅಂಗಾಂಗ ವೈಫಲ್ಯದಿಂದ ಬಳಲುತ್ತಿದ್ದರು. 

ಸೆಪ್ಟೆಂಬರ್ 2ರಂದು ಗಸ್ತಿ ಅವರಿಗೆ ಕೋವಿಡ್-19 ಪಾಸಿಟಿವ್ ದೃಢಪಟ್ಟಿತ್ತು. ಬಳಿಕ ಅವರು ನಗರದ ಮಣಿಪಾಲ್​ ಆಸ್ಪತ್ರೆಗೆ ದಾಖಲಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ.

ಮೂಲತಃ ಬಳ್ಳಾರಿ ಜಿಲ್ಲೆಯವರಾದ ಅಶೋಕ್ ಗಸ್ತಿ ಅವರು ಸವಿತಾ ಸಮಾಜಕ್ಕೆ ಸೇರಿದ್ದವರು. ಆರ್ ಎಸ್ಎಸ್‍ನ ಶಿಸ್ತಿನ ಸಿಪಾಯಿ ಆಗಿದ್ದ ಗಸ್ತಿ ಅವರನ್ನು ನಾಲ್ಕು ತಿಂಗಳ ಹಿಂದಷ್ಟೇ ರಾಜ್ಯಸಭೆಗೆ ಆಯ್ಕೆ ಮಾಡಲಾಗಿತ್ತು. ವಿಧಾನಸಭೆಯಿಂದ ರಾಜ್ಯಸಭೆಗೆ ಜೂನ್ 8ರಂದು ನಡೆಯಬೇಕಿದ್ದ ಚುನಾವಣೆಗೆ ಬಿಜೆಪಿ ಸಾಮಾನ್ಯ ಕಾರ್ಯಕರ್ತರಾಗಿದ್ದ ಅಶೋಕ್ ಗಸ್ತಿ ಅವರನ್ನು ಕಣಕ್ಕಿಳಿಸಿತ್ತು ಮತ್ತು ಅವಿರೋಧವಾಗಿ ಆಯ್ಕೆಯಾಗಿದ್ದರು. 

ಗಸ್ತಿ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ಸಂತಾಪ 

ಅಶೋಕ್ ಗಸ್ತಿ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದಾರೆ, ರಾಜ್ಯಸಭಾ ಸದಸ್ಯ ಅಶೋಕ್ ಗಸ್ತಿ ಅವರು ಪಕ್ಷ ಸಂಘಟನೆಗೆ ತಮ್ಮ ಜೀವನವನ್ನೇ ಮುಡಿಪಾಗಿಟ್ಟಿದ್ದರು. ಬಡವರ, ದೀನ-ದಲಿತರ ಸಬಲೀಕರಣಕ್ಕಾಗಿ ದುಡಿಯುತ್ತಿದ್ದರು. ಅವರ ನಿಧನದಿಂದಾಗಿ ನೋವುಂಟಾಗಿದೆ ಎಂದು ಮೋದಿ ಟ್ವೀಟ್ ಮಾಡಿ ಸಂತಾಪ ಸೂಚಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?