ಹೈಕೋರ್ಟ್ 
ರಾಜ್ಯ

ಎಸ್‌ಸಿ /ಎಸ್‌ಟಿ ಪ್ರಕರಣಗಳ ತನಿಖೆ, ವಿಚಾರಣೆಯಲ್ಲಿ ವಿಳಂಬ: ಪರಿಣಾಮಕಾರಿ ಅನುಷ್ಠಾನಕ್ಕೆ ಹೈಕೋರ್ಟ್ ನಿರ್ದೇಶನ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆ 1989 ರ ಅಡಿಯಲ್ಲಿ ದಾಖಲಾದ ಪ್ರಕರಣಗಳಲ್ಲಿ ತನಿಖೆ, ವಿಚಾರಣೆಯಲ್ಲಿ ವಿಳಂಬ ಮತ್ತು ಕಡಿಮೆ ಅಪರಾಧ ಸಾಬೀತಾಗಿರುವುದನ್ನು  ಹೈಕೋರ್ಟ್ ಗಂಭೀರವಾಗಿ ತೆಗೆದುಕೊಂಡಿದ್ದು, ಕಾಯ್ದೆಯ ಪರಿಣಾಮಕಾರಿ ಅನುಷ್ಠಾನಕ್ಕಾಗಿ ರಾಜ್ಯ ಸರ್ಕಾರಕ್ಕೆ ಅನೇಕ ನಿರ್ದೇಶನಗಳನ್ನು ನೀಡಿದೆ.

ಬೆಂಗಳೂರು: ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆ 1989 ರ ಅಡಿಯಲ್ಲಿ ದಾಖಲಾದ ಪ್ರಕರಣಗಳಲ್ಲಿ ತನಿಖೆ, ವಿಚಾರಣೆಯಲ್ಲಿ ವಿಳಂಬ ಮತ್ತು ಕಡಿಮೆ ಅಪರಾಧ ಸಾಬೀತಾಗಿರುವುದನ್ನು  ಹೈಕೋರ್ಟ್ ಗಂಭೀರವಾಗಿ ತೆಗೆದುಕೊಂಡಿದ್ದು, ಕಾಯ್ದೆಯ ಪರಿಣಾಮಕಾರಿ ಅನುಷ್ಠಾನಕ್ಕಾಗಿ ರಾಜ್ಯ ಸರ್ಕಾರಕ್ಕೆ ಅನೇಕ ನಿರ್ದೇಶನಗಳನ್ನು ನೀಡಿದೆ.

ರಾಜ್ಯ ಪರಿಶಿಷ್ಟ ಜಾತಿ  ಮತ್ತು ಪಂಗಡ ಬಲವರ್ದನೆ ಮತ್ತು ಮೇಲ್ವಿಚಾರಣಾ ಸಮಿತಿ ಸಲ್ಲಿಸಿದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಕುರಿತಂತೆ ರಾಜ್ಯ ಸರ್ಕಾರದ ಪ್ರತಿಕ್ರಿಯೆಯನ್ನು ಆಲಿಸಿದ ಬಳಿಕ ಮುಖ್ಯ ನ್ಯಾಯಮೂರ್ತಿ ಅಭಯ್ ಶ್ರೀನಿವಾಸ ಒಕಾ ಮತ್ತು ನ್ಯಾಯಾಧೀಶ ಅಶೋಕ್ ಎಸ್ ಕಿನಾಗಿ ಅವರನ್ನೊಳಗೊಂಡ ವಿಭಾಗೀಯ ಪೀಠ, ನಿರ್ದೇಶನಗಳನ್ನು ನೀಡಿತು.

ನಿಯಮ 7(2) ರ ಪ್ರಕಾರ 60 ದಿನಗಳೊಳಗೆ ಚಾರ್ಚ್ ಶೀಟ್ ಸಲ್ಲಿಸಬೇಕು. ಆದಾಗ್ಯೂ, 2015ರಲ್ಲಿ ಅಂತ್ಯದಲ್ಲಿ ದಾಖಲಾಗಿರುವ 35, 091 ಪ್ರಕರಣಗಳಲ್ಲಿ ಕೇವಲ 6, 451 ಪ್ರಕರಣಗಳಿಗೆ ಚಾರ್ಚ್ ಶೀಟ್ ಸಲ್ಲಿಸಲಾಗಿದೆ. ತನಿಖೆಯ ವಿಳಂಬಕ್ಕೆ ತನಿಖಾ ಅಧಿಕಾರಿ ವಿವರಣೆಯನ್ನು ಸಲ್ಲಿಸಿದ್ದಾರೆಯೇ ಎಂದು ಸರ್ಕಾರ ಸ್ಪಷ್ಟಪಡಿಸಬೇಕು ಎಂದು ನ್ಯಾಯಾಧೀಶರು ಹೇಳಿದರು.

ಬಾಕಿ ಇರುವ ಹೆಚ್ಚಿನ ಸಂಖ್ಯೆಯ  ಪ್ರಕರಣಗಳು ಮತ್ತು  ಜಿಲ್ಲಾ ನ್ಯಾಯಾಧೀಶರನ್ನು ಭರ್ತಿ ಮಾಡಲು ಕೈಗೊಂಡ ಕ್ರಮಗಳನ್ನು ಗಮನದಲ್ಲಿಟ್ಟುಕೊಂಡು ಕಾಯಿದೆಯಡಿ ಪ್ರಕರಣಗಳನ್ನು ವಿಚಾರಣೆ ನಡೆಸಲು ಇನ್ನೂ ಒಂಬತ್ತು ವಿಶೇಷ ನ್ಯಾಯಾಲಯಗಳನ್ನು ಸ್ಥಾಪಿಸುವಂತೆ ರಾಜ್ಯ ಸರ್ಕಾರದ ಮನವಿಯ ಕುರಿತು ವರದಿ ಸಲ್ಲಿಸುವಂತೆ  ಹೈಕೋರ್ಟ್‌ನ ರಿಜಿಸ್ಟ್ರಾರ್ ಜನರಲ್ ಗೆ ನ್ಯಾಯಪೀಠ ನಿರ್ದೇಶನ ನೀಡಿತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇರಾನ್‌ ಸರ್ಕಾರ ವಿರುದ್ಧ ಪ್ರತಿಭಟನೆ: ಹಿಂಸಾಚಾರದಲ್ಲಿ ಮೃತಪಟ್ಟವರ ಸಂಖ್ಯೆ 116 ಕ್ಕೆ ಏರಿಕೆ

ಕರ್ನಾಟಕದ ಮುಕುಟಕ್ಕೆ ಮತ್ತೊಂದು ಗರಿ: ಬೆಂಗಳೂರು ಮೂಲದ ಮೇಜರ್ Swathi ShanthaKumarಗೆ ವಿಶ್ವಸಂಸ್ಥೆ ಸೆಕ್ರೆಟರಿ ಜನರಲ್ ಪ್ರಶಸ್ತಿ!

ಕೇಂದ್ರ ಬಜೆಟ್ 2026-27: ರಾಜ್ಯದ ಹಣಕಾಸು ಸಮತೋಲನ ಪುನಃಸ್ಥಾಪಿಸಲು ಹೆಚ್ಚಿನ ಅನುದಾನ ಒದಗಿಸಿ; ಕೇಂದ್ರಕ್ಕೆ ರಾಜ್ಯ ಸರ್ಕಾರ ಆಗ್ರಹ

Grok ಅಶ್ಲೀಲ ಕಂಟೆಂಟ್ ವಿವಾದ: ಕೇಂದ್ರ ಸರ್ಕಾರಕ್ಕೆ ಕೊನೆಗೂ ಮಣಿದ X, 600 ಖಾತೆಗಳ ಡಿಲೀಟ್!

ಕೌಟುಂಬಿಕ ಹಿಂಸಾಚಾರ ಸಂತ್ರಸ್ಥರಿಗೆ ಬೆಂಗಳೂರಿನಲ್ಲಿ ಅಣಬೆ ಕೃಷಿ ತರಬೇತಿ

SCROLL FOR NEXT