ಯುವಕನ ಮೇಲೆ ಹಲ್ಲೆ ನಡೆಸುತ್ತಿರುವುದು 
ರಾಜ್ಯ

ಅಶ್ಲೀಲ ಮೆಸೇಜ್ ಕಳುಹಿಸಿದ್ದ ಯುವಕನಿಗೆ ಧರ್ಮದೇಟು: ಯುವಕನಿಂದ ಪ್ರತಿ ದೂರು, ಮಹಿಳೆ ಸೇರಿ ನಾಲ್ವರ ಬಂಧನ

ಮಹಿಳೆಯೊಬ್ಬರಿಗೆ ಅಸಭ್ಯ ರೀತಿಯಲ್ಲಿ ಸಂದೇಶ ರವಾನಿಸುತ್ತಿದ್ದ ಆರೋಪದಡಿ ಮೊಬೈಲ್ ಅಂಗಡಿಯಲ್ಲಿ ಕೆಲಸಕ್ಕಿದ್ದ ಯುವಕನೊಬ್ಬನನ್ನು ಸಾರ್ವಜನಿಕರು ಧರ್ಮದೇಟು ನೀಡಿ ಪೊಲೀಸರಿಗೆ ಒಪ್ಪಿಸಿದ ಘಟನೆ ಮಡಿಕೇರಿಯಲ್ಲಿ ನಡೆದಿದೆ.

ಮಡಿಕೇರಿ: ಮಹಿಳೆಯೊಬ್ಬರಿಗೆ ಅಸಭ್ಯ ರೀತಿಯಲ್ಲಿ ಸಂದೇಶ ರವಾನಿಸುತ್ತಿದ್ದ ಆರೋಪದಡಿ ಮೊಬೈಲ್ ಅಂಗಡಿಯಲ್ಲಿ ಕೆಲಸಕ್ಕಿದ್ದ ಯುವಕನೊಬ್ಬನನ್ನು ಸಾರ್ವಜನಿಕರು ಧರ್ಮದೇಟು ನೀಡಿ ಪೊಲೀಸರಿಗೆ ಒಪ್ಪಿಸಿದ ಘಟನೆ ಮಡಿಕೇರಿಯಲ್ಲಿ ನಡೆದಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಮಡಿಕೇರಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮತ್ತೊಂದೆಡೆ ಯುವಕ ಸಹ ತನ್ನ ಮೇಲೆ ಹಲ್ಲೆ ನಡೆಸಿದವರ ವಿರುದ್ಧ ದೂರು ನೀಡಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಿಳೆ ಹಾಗೂ ಇತರ ನಾಲ್ವರನ್ನು ಪೊಲೀಸರು ದಸ್ತಗಿರಿ ಮಾಡಿದ್ದು, ಮುಂದಿನ ಕಾನೂನು ಕ್ರಮ ಕೈಗೊಂಡಿದ್ದಾರೆ.

ಘಟನೆ ವಿವರ
ಮಡಿಕೇರಿಯ ಮೊಬೈಲ್ ಅಂಗಡಿಯಲ್ಲಿ ಕೆಲಸಕ್ಕಿದ್ದ ಮಹಮ್ಮದ್ ಮುದಸ್ಸಿರ್ ಎಂಬ ಯುವಕ ನಗರದ ಬ್ಯೂಟಿ ಪಾರ್ಲರ್ ಒಂದರ ಮಾಲೀಕರಾದ ಮಹಿಳೆಗೆ ಅಸಭ್ಯ ರೀತಿಯ ಮೆಸೇಜ್‌ಗಳನ್ನು ಮಾಡುತ್ತಿದ್ದ ಎನ್ನಲಾಗಿದೆ. ಇದರಿಂದ ಮನನೊಂದ ಮಹಿಳೆ ತನ್ನ ಸಂಬಂಧಿಕರಾದ ಉಮೇಶ್ ಎಂಬವರಿಗೆ ಈ ವಿಷಯ ತಿಳಿಸಿದ್ದಾರೆ. ಉಮೇಶ್ ಅವರು ಕೊಡಗು ರಕ್ಷಣಾ ವೇದಿಕೆಯ ಸದಸ್ಯರೊಂದಿಗೆ ಸೇರಿಕೊಂಡು ಯುವಕನಿಗೆ ಬುದ್ಧಿ ಕಲಿಸಲು ಮುಂದಾಗಿದ್ದಾರೆ.

ಅದರಂತೆ ಆ ಮಹಿಳೆಯ ಮೊಬೈಲ್‌ ಮೂಲಕವೇ 'ಹಳೇ ಆರ್‌ಟಿಒ ಕಚೇರಿ ಬಳಿಗೆ ಬಂದರೆ ಮಾತನಾಡೋಣ' ಎಂಬ ಸಂದೇಶ ಕಳುಹಿಸಿದ್ದರು. ಅಲ್ಲಿಗೆ ಗುರುವಾರ ಸಂಜೆ ಬಂದ ಯುವಕನಿಗೆ ರಕ್ಷಣಾ ವೇದಿಕೆ ಕಾರ್ಯಕರ್ತರು ಹಾಗೂ ಮಹಿಳೆ ಥಳಿಸಿದ್ದಾರೆ. ಆತನನ್ನು ಪೊಲೀಸರಿಗೆ ಒಪ್ಪಿಸಲಾಗಿದೆ. ಈಗ ಥಳಿಸಿದವರು ಮೇಲೂ ಕ್ರಮಕ್ಕೆ ಪೊಲೀಸರು ಮುಂದಾಗಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಸಾರಿಗೆ ನೌಕರರ ಒತ್ತಡಕ್ಕೆ ಮಣಿದ ಸರ್ಕಾರ; 26 ತಿಂಗಳ ಅರಿಯರ್ಸ್; ವೇತನ ಪರಿಷ್ಕರಣೆಗೆ ಒಪ್ಪಿಗೆ; ರದ್ದಾಗುತ್ತಾ ಮುಷ್ಕರ?

ದಾಖಲೆ ಬೆಲೆಗೆ ಬ್ಯಾಡಗಿ ಮೆಣಸಿನಕಾಯಿ ಮಾರಾಟ: ಕ್ವಿಂಟಾಲ್‌ಗೆ 90,000 ರೂ. ತಲುಪಿದ ದರ; ರೈತರು ಸಂತಸ, ಸಂಕಷ್ಟದಲ್ಲಿ ಈರುಳ್ಳಿ ಬೆಳೆಗಾರರು

T20 World Cup 2026: ನೆದರ್ಲೆಂಡ್ ವಿರುದ್ಧ 17 ರನ್ ಗಳಿಂದ ಗೆದ್ದು, ಟಿ-20 ಇತಿಹಾಸದಲ್ಲಿ ಹೊಸ ದಾಖಲೆ ಬರೆದ ಭಾರತ!

ಬಾಂಗ್ಲಾ ಪ್ರಧಾನಿಯಾದ ಬೆನ್ನಲ್ಲೇ ದೇಶಾದ್ಯಂತ ಅಪಹಾಸ್ಯಕ್ಕೆ ಗುರಿಯಾದ Tarique Rahman; ಆಯ್ಕೆ ಮಾಡಿದ ಜನರಿಂದಲೇ ಅವಮಾನ, ಆರೋಪ?

ಪಂಜಾಬ್: ಬಟಿಂಡಾದಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ, ಅಶ್ರುವಾಯು ಪ್ರಯೋಗ!

SCROLL FOR NEXT