ಸಂಗ್ರಹ ಚಿತ್ರ 
ರಾಜ್ಯ

ಶೇ.50ರಷ್ಟು ಬೆಡ್ ಹಸ್ತಾಂತರಿಸದ 36 ಖಾಸಗಿ ಆಸ್ಪತ್ರೆಗಳಿಗೆ ಬಿಬಿಎಂಟಿ ನೋಟಿಸ್

ಬೆಂಗಳೂರಿನ ಕೊರೋನಾ ಸೋಂಕಿತರ ಚಿಕಿತ್ಸೆಗೆ ಸಹಕಾರ ನೀಡದ ಮತ್ತು ಸರ್ಕಾರದ ಆದೇಶದಂತೆ ಆಸ್ಪತ್ರೆಯ ಒಟ್ಟು ಹಾಸಿಗೆಯಲ್ಲಿ ಶೇ.50ರಷ್ಟು ಹಾಸಿಗೆಗಳನ್ನು ಸರ್ಕಾರದ ವಶಕ್ಕೆ ನೀಡದ ನಗರದ 36 ಖಾಸಗಿ ಆಸ್ಪತ್ರೆಗಳಿಗೆ ಬಿಬಿಎಂಪಿ ಆಯುಕ್ತ. ಎನ್.ಮಂಜುನಾಥ್ ಪ್ರಸಾದ್ ವಿಪತ್ತು ನಿರ್ವಹಣಾ ಕಾಯ್ದೆ ಅಡಿ ಶೋಕಾಸ್ ನೋಟಿಸ್ ಜಾರಿ ಮಾಡಿದ್ದಾರೆ. 

ಬೆಂಗಳೂರು: ಬೆಂಗಳೂರಿನ ಕೊರೋನಾ ಸೋಂಕಿತರ ಚಿಕಿತ್ಸೆಗೆ ಸಹಕಾರ ನೀಡದ ಮತ್ತು ಸರ್ಕಾರದ ಆದೇಶದಂತೆ ಆಸ್ಪತ್ರೆಯ ಒಟ್ಟು ಹಾಸಿಗೆಯಲ್ಲಿ ಶೇ.50ರಷ್ಟು ಹಾಸಿಗೆಗಳನ್ನು ಸರ್ಕಾರದ ವಶಕ್ಕೆ ನೀಡದ ನಗರದ 36 ಖಾಸಗಿ ಆಸ್ಪತ್ರೆಗಳಿಗೆ ಬಿಬಿಎಂಪಿ ಆಯುಕ್ತ. ಎನ್.ಮಂಜುನಾಥ್ ಪ್ರಸಾದ್ ವಿಪತ್ತು ನಿರ್ವಹಣಾ ಕಾಯ್ದೆ ಅಡಿ ಶೋಕಾಸ್ ನೋಟಿಸ್ ಜಾರಿ ಮಾಡಿದ್ದಾರೆ. 

ಜೊತೆಗೆ ಮುಂದಿನ 48 ಗಂಟೆಗಳ ಒಳಗಾಗಿ ಸರ್ಕಾರದ ಆದೇಶದಂತೆ ಶೇ.50ರಷ್ಟು ಹಾಸಿಗೆಗಳನ್ನು ಬಿಟ್ಟು ಕೊಡಬೇಕು ಹಾಗೂ 24 ಗಂಟೆಗಳ ಒಳಗೆ ಪಾಲಿಕೆಯ ಶೋಕಾಸ್ ನೋಟಿಸ್'ಗೆ ಸಂಬಂಧಿಸಿದಂತೆ ನೋಡಲ್ ಅಧಿಕಾರಿಗಳಿಗೆ ಉತ್ತರ ನೀಡುವಂತೆ ಸೂಚಿಸಿದ್ದಾರೆ. 

ಸೋಟಿಸ್'ಗೆ ಉತ್ತರ ನೀಡದ ಹಾಗೂ ಸರ್ಕಾರದ ನಿರ್ದೇಶನದಂತೆ ಶೇ.50ರಷ್ಟು ಹಾಸಿಗೆಗಳನ್ನು ಬಿಟ್ಟುಕೊಡದೆ ಇದ್ದಲ್ಲಿ, ಆಶ್ಪತ್ರೆಗಳ ಪರವಾನಗಿಯನ್ನು ರದ್ದು ಮಾಡುವುದರ ಜೊತೆಗೆ ವಿಪತ್ತು ನಿರ್ವಹಣಾ ಕಾಯ್ದೆಯಡಿ ಕಠಿಣ ಕ್ರಮ ಕೈಗೊಳ್ಳಲಾಗುವುದು. ಸೋಂಕಿತರ ಚಿಕಿತ್ಸೆಗೆ ಆನ್'ಲೈನ್ ಪೋರ್ಟ್'ನಲ್ಲಿ ಹಾಸಿಗೆ ಬ್ಲಾಕ್ ಮಾಡಿದರೂ, ಖಾಸಗಿ ಆಸ್ಪತ್ರೆಗೆ ದಾಖಲಿಸುವ ವೇಳೆ ಆಸ್ಪತ್ರೆಯಲ್ಲಿ ಹಾಸಿಗೆಗಳು ಖಾಲಿ ಇಲ್ಲ ಎಂದು ಹೇಳಿ ಚಿಕಿತ್ಸೆಗೆ ನಿರಾಕರಿಸಲಾಗುತ್ತಿತ್ತು. ಅಲ್ಲದೆ ಎಸ್ಎಎಸ್'ಟಿ ಪೋರ್ಟ್ ನಲ್ಲಿ ವಿವರವಾದ ಮಾಹಿತಿ ನೀಡಿಲ್ಲ ಎಂದು ನೋಟಿಸ್ ನೀಡಲಾಗಿದೆ. 

ಈಗಾಗಲೇ ಹಲವು ಬಾರಿ ಬಿಬಿಎಂಪಿ ಆಯುಕ್ತರು ಮತ್ತು ಅಧಿಕಾರಿಗಳು ಸರ್ಕಾರಿ ಆದೇಶದಂತೆ ಶೇ.50ರಷ್ಟು ಹಾಸಿಗೆಗಳನ್ನು ಸರ್ಕಾರದ ವಶಕ್ಕೆ ನೀಡುವಂತೆ ಸೂಚನೆ ನೀಡಲಾಗಿತ್ತು. ಹಲವು ಬಾರಿ ಖಾಸಗಿ ಆಸ್ಪತ್ರೆಗಳ ಮುಖ್ಯಸ್ಥರೊಂದಿಗೆ ಚರ್ಚೆ ನಡೆಸಿ ಬಿಬಿಎಂಪಿಯಿಂದ ಸಾಧ್ಯವಾಗುವ ಎಲ್ಲಾ ಸಹಕಾರ ನೀಡಲಾಗುವುದು. ಶೇ.50ರಷ್ಟು ಹಾಸಿಗೆ ನೀಡುವಂತೆ ಸೂಚಿಸಲಾಗಿತ್ತು. ಆದರೆ, ಕೆಲವು ಖಾಸಗಿ ಆಸ್ಪತ್ರೆಗಳು ಶೇ.50ರಷ್ಟು ಹಾಸಿಗೆ ನೀಡಿರಲಿಲ್ಲ.ಹೀಗಾಗಿ ಬಿಬಿಎಂಪಿ ಆಯುಕ್ತರು ಶೋಕಾಸ್ ನೋಟಿಸ್ ಜಾರಿ ಮಾಡಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟದ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

Theaterisation: 'ಥಿಯೇಟರ್ ಕಮಾಂಡ್‌' ರಚನೆ: ಪ್ರಯತ್ನದಲ್ಲಿ ಪ್ರಗತಿ ಸಾಧಿಸಲಾಗುತ್ತಿದೆಯೇ? ಆಡ್ಮಿರಲ್ ಡಿಕೆ ತ್ರಿಪಾಠಿ ಹೇಳಿದ್ದು ಹೀಗೆ...

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

'ಪಾಕಿಸ್ತಾನದೊಂದಿಗೆ ಯುದ್ಧ ನಿಲ್ಲಿಸಲು ಟ್ರಂಪ್ 24 ಗಂಟೆ ಕಾಲಾವಕಾಶ ನೀಡಿದ್ದರು, ಮೋದಿ ಕೇವಲ 5 ಗಂಟೆಗಳಲ್ಲಿ ಪಾಲಿಸಿದರು': ರಾಹುಲ್ ಗಾಂಧಿ

'ಧಮ್ ಇದ್ರೆ.. ಸನಾತನಧರ್ಮ, ಬಿಹಾರಿಗಳ ಕುರಿತ ಹೇಳಿಕೆ ಮತ್ತೆ ಹೇಳ್ತೀರಾ?': MK Stalin ಗೆ ಬಿಜೆಪಿ-ಜೆಡಿಯು ಸವಾಲು!

SCROLL FOR NEXT