ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ 
ರಾಜ್ಯ

ಕೃಷಿ, ಕೃಷಿಯೇತರ ಕ್ಷೇತ್ರಕ್ಕೆ 39,300 ಕೋಟಿ ರೂ. ಸಾಲ: ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ

ಈ ವರ್ಷ ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿವಿಧ ಕಾರ್ಯಕ್ರಮಗಳ ಅಡಿಯಲ್ಲಿ ಕೃಷಿ, ಕೃಷಿಯೇತರ ಕ್ಷೇತ್ರಕ್ಕೆ 39 ಸಾವಿರದ 300 ಕೋಟಿ ಸಾಲವನ್ನು ನೀಡಲಾಗಿದೆ ಎಂದು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ತಿಳಿಸಿದ್ದಾರೆ.

ಬೆಂಗಳೂರು: ಈ ವರ್ಷ ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿವಿಧ ಕಾರ್ಯಕ್ರಮಗಳ ಅಡಿಯಲ್ಲಿ  ಕೃಷಿ, ಕೃಷಿಯೇತರ ಕ್ಷೇತ್ರಕ್ಕೆ 39 ಸಾವಿರದ 300 ಕೋಟಿ ಸಾಲವನ್ನು ನೀಡಲಾಗಿದೆ ಎಂದು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ತಿಳಿಸಿದ್ದಾರೆ.

ಸಹಕಾರ ಇಲಾಖೆ ಆಯೋಜಿಸಿದ್ದ ವಿವಿಧ ಯೋಜನೆಗಳ ಫಲಾನುಭವಿಗಳಿಗೆ ಆರ್ಥಿಕ ಸ್ಪಂದನಾ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಕೋವಿಡ್- 19 ಸಂದರ್ಭದಲ್ಲಿ ರಾಜ್ಯ ಸರ್ಕಾರದಿಂದ ಕೈಗೊಳ್ಳಲಾಗಿರುವ ಯೋಜನೆಗಳ ಬಗ್ಗೆ ವಿವರ ನೀಡಿದರು. ಸಹಕಾರ ಕ್ಷೇತ್ರದಲ್ಲಿ ಮೂಲಸೌಕರ್ಯಕ್ಕೆ ಆದ್ಯತೆ ನೀಡಲಾಗಿದ್ದು, ಸಹಕಾರಿ ಸಂಘಗಳ ಬಲವರ್ದನೆಗೆ 4,525 ಕೋಟಿ ರೂಪಾಯಿಯನ್ನು ಹಂಚಿಕೆ ಮಾಡಲಾಗಿದೆ.ಕೇಂದ್ರ ಸರ್ಕಾರ ವಿಶೇಷ ಲಿಕ್ವಿಡಿ ಸೌಲಭ್ಯದಡಿಯಲ್ಲಿ ಜಿಲ್ಲಾ ಸಹಕಾರಿ ಬ್ಯಾಂಕ್ ಗಳಿಗೆ 1,700 ಕೋಟಿ ರೂ ನೀಡಿದೆ ಎಂದು ಮುಖ್ಯಮಂತ್ರಿ ತಿಳಿಸಿದರು.

ಈ ಕಾರ್ಯಕ್ರಮ ಈಗಾಗಲೇ ಅನುಷ್ಠಾನಗೊಂಡಿದ್ದು, ಸಹಕಾರಿ ಸಂಘಗಳು ಈಗಾಗಲೇ 11,880 ಕೋಟಿ ರೂ. ಸಾಲವನ್ನು ನೀಡಿದ್ದರೆ, ನಗರ ಸಹಕಾರಿ ಬ್ಯಾಂಕುಗಳು ಸಹ ಸಾಲವನ್ನು ಮಂಜೂರು ಮಾಡಿದ್ದು, ಈ ವರ್ಷ 39, 300 ಕೋಟಿ ಗುರಿಯನ್ನು ಹೊಂದಲಾಗಿದೆ ಎಂದು ಇಲಾಖೆಯ ಹಿರಿಯ ಅಧಿಕಾರಿಯೊಬ್ಬರು ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಲಾಲ್ ಬಾಗ್ ಅಭಿವೃದ್ಧಿಗೆ 10 ಕೋಟಿ ರೂ; ಸುರಂಗ ರಸ್ತೆ ಯೋಜನೆಯಿಂದ ಸಸ್ಯೋದ್ಯಾನದ ಮೇಲೆ ಯಾವುದೇ ಎಫೆಕ್ಟ್ ಆಗಲ್ಲ: ಡಿ.ಕೆ ಶಿವಕುಮಾರ್; Video

ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆ: ಒಂದಾದ ಜಾರಕಿಹೊಳಿ ಬ್ರದರ್ಸ್‌ಗೆ ಜಾಕ್‌ಪಾಟ್; ರಮೇಶ್ ಕತ್ತಿ ಬಣಕ್ಕೆ ಶಾಕ್!

ನೊಬೆಲ್ ಶಾಂತಿ ಪ್ರಶಸ್ತಿ ಘೋಷಣೆಯಾಗುತ್ತಿದ್ದಂತೆಯೇ Maria Corina Machado ವಿವಾದಕ್ಕೆ ಗುರಿ; ಭುಗಿಲೆದ್ದ ಅಶಾಂತಿ!

Shocking: ಹೆಣ್ಣಿನ ಶವ ಎಳೆದೊಯ್ದು ಶವಾಗಾರದಲ್ಲೇ ಅತ್ಯಾಚಾರ, 25ರ ಯುವಕನಿಂದ ಪೈಶಾಚಿಕ ಕೃತ್ಯ, CCTV Video

Belagavi: ಲವರ್ ಜೊತೆ ಮಗಳು ಪರಾರಿ; ಇಡೀ ಊರಿಗೆ 'ತಿಥಿ' ಊಟ ಹಾಕಿಸಿದ ತಂದೆ!

SCROLL FOR NEXT