ಸಾಂದರ್ಭಿಕ ಚಿತ್ರ 
ರಾಜ್ಯ

ಗಾಂಜಾ ಮಾರಾಟ, ಸೇವನೆ: 38 ಜನರ ಬಂಧನ, 17.89 ಕೆ.ಜಿ. ಗಾಂಜಾ ವಶ

ಗಾಂಜಾ ಸೇವನೆ, ಮಾರಾಟ ಮಾಡುತ್ತಿದ್ದ 38 ಜನರನ್ನು ಬಂಧಿಸಿ, 17.89 ಕೆ.ಜಿ. ಗಾಂಜಾ ಮತ್ತು 600 ಎಂ.ಎಲ್. ಗಾಂಜಾ ಆಯಿಲ್ ಅನ್ನು ಉತ್ತರ ವಿಭಾಗದ ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಬೆಂಗಳೂರು: ಗಾಂಜಾ ಸೇವನೆ, ಮಾರಾಟ ಮಾಡುತ್ತಿದ್ದ 38 ಜನರನ್ನು ಬಂಧಿಸಿ, 17.89 ಕೆ.ಜಿ. ಗಾಂಜಾ ಮತ್ತು 600 ಎಂ.ಎಲ್. ಗಾಂಜಾ ಆಯಿಲ್ ಅನ್ನು ಉತ್ತರ ವಿಭಾಗದ ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಉತ್ತರ ವಿಭಾಗದ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ವಿಶೇಷ ಕಾರ್ಯಾಚರಣೆ ನಡೆಸಿ ಮಾದಕ ವಸ್ತು ಗಾಂಜಾ ಮಾರಾಟ ಮಾಡುತ್ತಿದ್ದವರ ವಿರುದ್ಧ 3 ಪೊಲೀಸ್ ಠಾಣೆಗಳಲ್ಲಿ 4 ಪ್ರಕರಣಗಳನ್ನು ದಾಖಲು ಮಾಡಿ, 5 ಜನರನ್ನು ಬಂಧಿಸಿ 17.89 ಕೆ.ಜಿ ಮಾದಕ ವಸ್ತು ಗಾಂಜಾ ಹಾಗೂ 600 ಎಂ.ಎಲ್. ಗಾಂಜಾ ಆಯಿಲ್ ಅನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಆರ್ ಎಂ ಸಿ ಯಾರ್ಡ್ ಪೊಲೀಸರು ಅರುಣ್(29), ವಿಜಯನ್ (27), ದೀಪನ್ ಎಂಬುವವರನ್ನು ಬಂಧಿಸಿ, 13.8 ಕೆಜಿ ಗಾಂಜಾ ವಶಪಡಿಸಿಕೊಂಡು ಎರಡು ಪ್ರಕರಣ ದಾಖಲಿಸಿಕೊಂಡಿದ್ದಾರೆ‌‌.

ಅಚ್ಚುತನಗರದ 5ನೇ ಕ್ರಾಸ್ ರಸ್ತೆ ಪಕ್ಕದಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದಾರೆ ಎಂಬ ಮಾಹಿತಿ ಮೇರೆಗೆ ಪೊಲೀಸರು ದಾಳಿ ಮಾಡಿ ವಿನಯ್‍ಕುಮಾರ್(22) ಎಂಬಾತನನ್ನುಬಂಧಿಸಿ 4 ಕೆಜಿ ಗಾಂಜಾ ವಶಪಡಿಸಿಕೊಂಡಿದ್ದಾರೆ.  ಆರೋಪಿಯನ್ನು ಹೆಚ್ಚಿನ ವಿಚಾರಣೆಗೊಳಪಡಿಸಿದಾಗ ಆಂಧ್ರಪ್ರದೇಶ ಮತ್ತು ಒರಿಸ್ಸಾ ರಾಜ್ಯಗಳ ನಡುವೆ ಬರುವ ಅಕೂರ್ ವ್ಯಾಲಿಯಲ್ಲಿ ವ್ಯಕ್ತಿಯೊಬ್ಬರಿಂದ ತಂದಿರುವುದಾಗಿ ಹಾಗೂ ಅದನ್ನು ಕಾಲೇಜು ವಿದ್ಯಾರ್ಥಿಗಳಿಗೆ ಮಾರಾಟ ಮಾಡಿದರೆ ಹೆಚ್ಚಿನ ಹಣ ಗಳಿಸಬಹುದು ಎಂದು ಹೇಳಿದ್ದಾರೆ.

ಸೆಂಟ್ ಕ್ಲಾರೆಟ್ ಕಾಲೇಜು ಬಳಿ ಗಾಂಜಾ ಆಯಿಲ್‍ನ್ನು ತಂದು ಮಾರಾಟ ಮಾಡುತ್ತಿದ್ದ ತವನೀಶ್ ಎಂಬಾತನನ್ನು ಬಂಧಿಸಿ 600 ಎಂಎಲ್ ಗಾಂಜಾವನ್ನು ವಶಪಡಿಸಿಕೊಂಡಿದ್ದಾರೆ.

ಉತ್ತರ ವಿಭಾಗದ ಪೊಲೀಸ್ ಠಾಣೆ ಸರಹದ್ದಿನಲ್ಲಿ ಗಾಂಜಾ ಮತ್ತು ಇನ್ನಿತರ ಮಾದಕ ಸೇವನೆ ಮಾಡುತ್ತಿದ್ದ ವ್ಯಕ್ತಿಗಳ ವಿರುದ್ದ 12 ಪೊಲೀಸ್ ಠಾಣೆಗಳಲ್ಲಿ 30 ಪ್ರಕರಣಗಳನ್ನು ದಾಖಲು ಮಾಡಿಕೊಂಡು 38 ಮಂದಿಯನ್ನು ಬಂಧಿಸಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಎಲ್ಲಾ ಹೊಸ ಸ್ಮಾರ್ಟ್‌ಫೋನ್‌ಗಳಲ್ಲಿ 'ಸಂಚಾರ್ ಸಾಥಿ' ಆ್ಯಪ್ ಕಡ್ಡಾಯ: ಕೇಂದ್ರ ಆದೇಶ

ಬಸವ ತತ್ವದ ಕೆಲ ಸ್ವಾಮೀಜಿಗಳು ತಾಲಿಬಾನಿಗಳಿದ್ದಂತೆ: ಕಾಡಸಿದ್ದೇಶ್ವರ ಸ್ವಾಮೀಜಿ ಮತ್ತೊಂದು ವಿವಾದಾತ್ಮಕ ಹೇಳಿಕೆ!

HR88B8888 ಭಾರತದ ಅತ್ಯಂತ ದುಬಾರಿ ಕಾರು ನೋಂದಣಿ ಸಂಖ್ಯೆ ಮರು ಹರಾಜಿಗೆ..! ಕಾರಣ ಏನು ಗೊತ್ತಾ?

Video: ಹೊಟೆಲ್ ಲಾಬಿಯಲ್ಲಿ ಗಂಭೀರ್-ರೋಹಿತ್ ಶರ್ಮಾ ಮಾತಿನ ಚಕಮಕಿ; ಕೋಚ್ ಅನ್ನೇ ನಿರ್ಲಕ್ಷಿಸಿದ್ರಾ Kohli!

ಬೆಂಗಳೂರು, ದೆಹಲಿ ಸೇರಿ ಪ್ರಮುಖ ವಿಮಾನ ನಿಲ್ದಾಣಗಳಲ್ಲಿ ವಿಮಾನಗಳ GPS ಸ್ಪೂಫಿಂಗ್: ರಾಜ್ಯಸಭೆಗೆ ಕೇಂದ್ರ ಮಾಹಿತಿ

SCROLL FOR NEXT