ಅಶೋಕ್ ಗಸ್ತಿ 
ರಾಜ್ಯ

ಸರ್ಕಾರಿ ಗೌರವಗಳೊಂದಿಗೆ ಅಶೋಕ್ ಗಸ್ತಿ ಅಂತ್ಯ ಸಂಸ್ಕಾರ

ಕೊರೋನಾ ಸೋಂಕಿಗೆ ತುತ್ತಾಗಿ ಗುರುವಾರ ರಾತ್ರಿ ನಿಧನರಾದ ಬಿಜೆಪಿಯ ಹಿರಿಯ ಮುಖಂಡ ರಾಜ್ಯಸಭಾ ಸದಸ್ಯ ಅಶೋಕ್ ಗಸ್ತಿ ಅವರ ಪಾರ್ಥೀವ ಶರೀರದ ಅಂತ್ಯ ಸಂಸ್ಕಾರ ಸರ್ಕಾರಿ ಗೌರವಗಳೊಂದಿಗೆ ರಾಯಚೂರಿನಲ್ಲಿ ನೆರವೇರಿತು.

ಪೋತಗಲ್: ಕೊರೋನಾ ಸೋಂಕಿಗೆ ತುತ್ತಾಗಿ ಗುರುವಾರ ರಾತ್ರಿ ನಿಧನರಾದ ಬಿಜೆಪಿಯ ಹಿರಿಯ ಮುಖಂಡ ರಾಜ್ಯಸಭಾ ಸದಸ್ಯ ಅಶೋಕ್ ಗಸ್ತಿ ಅವರ ಪಾರ್ಥೀವ ಶರೀರದ ಅಂತ್ಯ ಸಂಸ್ಕಾರ ಸರ್ಕಾರಿ ಗೌರವಗಳೊಂದಿಗೆ ರಾಯಚೂರಿನಲ್ಲಿ ನೆರವೇರಿತು.

ಅಶೋಕ್ ಗಸ್ತಿ ಅವರ ಹುಟ್ಟೂರಾದ ರಾಯಚೂರು ಜಿಲ್ಲೆಯ ಪೋತಗಲ್‌ನಲ್ಲಿ ಇಂದು ಅಶೋಕ್ ಗಸ್ತಿ ಅವರ ಪಾರ್ಥೀವ ಶರೀರದ ಅಂತ್ಯ ಸಂಸ್ಕಾರ ಸರ್ಕಾರಿ ಗೌರವಗಳೊಂದಿಗೆ ನೆರವೇರಿತು. ರಾಯಚೂರಿನ ಪೋತಗಲ್ ರಸ್ತೆಯಲ್ಲಿರುವ ಕೊರೊನಾದಿಂದ ಮೃತರಿಗೆ ಮೀಸಲಿರಿಸಿದ ರುದ್ರಭೂಮಿಯಲ್ಲಿ ಗಸ್ತಿ ಅವರ  ಅಂತಿಮ ಸಂಸ್ಕಾರ ನೆರವೇರಿಸಲಾಯಿತು.

ಗಸ್ತಿ ಅವರು ಕೊರೊನಾದಿಂದಾಗಿ ಮೃತಪಟ್ಟ ಹಿನ್ನೆಲೆ ಕೊರೊನಾ ನಿಯಮದಂತೆ ಎಲ್ಲಾ ರೀತಿಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವುದಾಗಿ ಜಿಲ್ಲಾಡಳಿತ ತಿಳಿಸಿತ್ತು. ಅದರಂತೆ ಬೆಂಗಳೂರಿನಿಂದ ಗಸ್ತಿ ಅವರ ಪಾರ್ಥಿವ ಶರೀರ ರಾಯಚೂರಿನ ಅವರ ನಿವಾಸಕ್ಕೆ ಆಗಮಿಸಿತು. ನಿವಾಸದಲ್ಲಿ ಅಂತಿಮ ದರ್ಶನದ  ಬಳಿಕ ಅಂಬ್ಯುಲೆನ್ಸ್‌ ಮೂಲಕವೇ ಪೋತಗಲ್‌ನ ಸ್ಮಶಾನಕ್ಕೆ ರವಾನೆ ಮಾಡಲಾಯಿತು. ಕೊರೋನಾ ಮಾರ್ಗಸೂಚಿ ಹಿನ್ನಲೆಯಲ್ಲಿ ಬೆಂಬಲಿಗರಿಗೆ ದೂರದಿಂದಲೇ ಅಂತಿಮ ದರ್ಶನಕ್ಕೆ ಅವಕಾಶ ಮಾಡಿಕೊಡಲಾಗಿತ್ತು. 

ಸೆಪ್ಟೆಂಬರ್ 2ರಂದು ಗಸ್ತಿ ಅವರಿಗೆ ಕೋವಿಡ್-19 ಪಾಸಿಟಿವ್ ದೃಢಪಟ್ಟಿತ್ತು. ಈ ಹಿನ್ನೆಲೆ ಅವರು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದರು, ಆದರೆ ಗುರುವಾರ ಚಿಕಿತ್ಸೆ ಫಲಿಸದೆ ಸಾವನಪ್ಪಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

SCROLL FOR NEXT