ಅಶೋಕ್ ಗಸ್ತಿ 
ರಾಜ್ಯ

ಸರ್ಕಾರಿ ಗೌರವಗಳೊಂದಿಗೆ ಅಶೋಕ್ ಗಸ್ತಿ ಅಂತ್ಯ ಸಂಸ್ಕಾರ

ಕೊರೋನಾ ಸೋಂಕಿಗೆ ತುತ್ತಾಗಿ ಗುರುವಾರ ರಾತ್ರಿ ನಿಧನರಾದ ಬಿಜೆಪಿಯ ಹಿರಿಯ ಮುಖಂಡ ರಾಜ್ಯಸಭಾ ಸದಸ್ಯ ಅಶೋಕ್ ಗಸ್ತಿ ಅವರ ಪಾರ್ಥೀವ ಶರೀರದ ಅಂತ್ಯ ಸಂಸ್ಕಾರ ಸರ್ಕಾರಿ ಗೌರವಗಳೊಂದಿಗೆ ರಾಯಚೂರಿನಲ್ಲಿ ನೆರವೇರಿತು.

ಪೋತಗಲ್: ಕೊರೋನಾ ಸೋಂಕಿಗೆ ತುತ್ತಾಗಿ ಗುರುವಾರ ರಾತ್ರಿ ನಿಧನರಾದ ಬಿಜೆಪಿಯ ಹಿರಿಯ ಮುಖಂಡ ರಾಜ್ಯಸಭಾ ಸದಸ್ಯ ಅಶೋಕ್ ಗಸ್ತಿ ಅವರ ಪಾರ್ಥೀವ ಶರೀರದ ಅಂತ್ಯ ಸಂಸ್ಕಾರ ಸರ್ಕಾರಿ ಗೌರವಗಳೊಂದಿಗೆ ರಾಯಚೂರಿನಲ್ಲಿ ನೆರವೇರಿತು.

ಅಶೋಕ್ ಗಸ್ತಿ ಅವರ ಹುಟ್ಟೂರಾದ ರಾಯಚೂರು ಜಿಲ್ಲೆಯ ಪೋತಗಲ್‌ನಲ್ಲಿ ಇಂದು ಅಶೋಕ್ ಗಸ್ತಿ ಅವರ ಪಾರ್ಥೀವ ಶರೀರದ ಅಂತ್ಯ ಸಂಸ್ಕಾರ ಸರ್ಕಾರಿ ಗೌರವಗಳೊಂದಿಗೆ ನೆರವೇರಿತು. ರಾಯಚೂರಿನ ಪೋತಗಲ್ ರಸ್ತೆಯಲ್ಲಿರುವ ಕೊರೊನಾದಿಂದ ಮೃತರಿಗೆ ಮೀಸಲಿರಿಸಿದ ರುದ್ರಭೂಮಿಯಲ್ಲಿ ಗಸ್ತಿ ಅವರ  ಅಂತಿಮ ಸಂಸ್ಕಾರ ನೆರವೇರಿಸಲಾಯಿತು.

ಗಸ್ತಿ ಅವರು ಕೊರೊನಾದಿಂದಾಗಿ ಮೃತಪಟ್ಟ ಹಿನ್ನೆಲೆ ಕೊರೊನಾ ನಿಯಮದಂತೆ ಎಲ್ಲಾ ರೀತಿಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವುದಾಗಿ ಜಿಲ್ಲಾಡಳಿತ ತಿಳಿಸಿತ್ತು. ಅದರಂತೆ ಬೆಂಗಳೂರಿನಿಂದ ಗಸ್ತಿ ಅವರ ಪಾರ್ಥಿವ ಶರೀರ ರಾಯಚೂರಿನ ಅವರ ನಿವಾಸಕ್ಕೆ ಆಗಮಿಸಿತು. ನಿವಾಸದಲ್ಲಿ ಅಂತಿಮ ದರ್ಶನದ  ಬಳಿಕ ಅಂಬ್ಯುಲೆನ್ಸ್‌ ಮೂಲಕವೇ ಪೋತಗಲ್‌ನ ಸ್ಮಶಾನಕ್ಕೆ ರವಾನೆ ಮಾಡಲಾಯಿತು. ಕೊರೋನಾ ಮಾರ್ಗಸೂಚಿ ಹಿನ್ನಲೆಯಲ್ಲಿ ಬೆಂಬಲಿಗರಿಗೆ ದೂರದಿಂದಲೇ ಅಂತಿಮ ದರ್ಶನಕ್ಕೆ ಅವಕಾಶ ಮಾಡಿಕೊಡಲಾಗಿತ್ತು. 

ಸೆಪ್ಟೆಂಬರ್ 2ರಂದು ಗಸ್ತಿ ಅವರಿಗೆ ಕೋವಿಡ್-19 ಪಾಸಿಟಿವ್ ದೃಢಪಟ್ಟಿತ್ತು. ಈ ಹಿನ್ನೆಲೆ ಅವರು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದರು, ಆದರೆ ಗುರುವಾರ ಚಿಕಿತ್ಸೆ ಫಲಿಸದೆ ಸಾವನಪ್ಪಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೊಸದಾಗಿ ನೇಮಕಗೊಂಡಿದ್ದ Hamas ಮಿಲಿಟರಿ ನಾಯಕನನ್ನೂ ಹೊಡೆದುರುಳಿಸಿದ Israel!

ಸಿದ್ದರಾಮಯ್ಯ 2 ಬಾರಿ ಸಿಎಂ ಆಗಿದ್ದಾರೆ; ಡಿಕೆಶಿ ಹಲವು ಮುಖ್ಯಮಂತ್ರಿಗಳ ಜತೆ ಸಚಿವರಾಗಿ ಕೆಲಸ ಮಾಡಿದ್ದಾರೆ: ಸುರ್ಜೇವಾಲ ಮಾತಿನ ಅರ್ಥವೇನು?

ಇಲ್ಲಿಂದ ತೊಲಗಿ; ಭಾರತೀಯ ದಂಪತಿಗೆ ಅಮೆರಿಕಾದಲ್ಲಿ ಜನಾಂಗೀಯ ನಿಂದನೆ

IPL 2026: SRH ವಿರುದ್ಧ RR ಗೆ 47 ರನ್ ಗಳ ಭರ್ಜರಿ ಗೆಲುವು

IPL 2026 Eliminator: ವೈಭವ್ ಸೂರ್ಯವಂಶಿ ಸ್ಫೋಟಕ ಬ್ಯಾಟಿಂಗ್, SRHಗೆ 244 ರನ್ ಬೃಹತ್ ಗುರಿ ನೀಡಿದ RR

SCROLL FOR NEXT