ಅಶೋಕ್ ಗಸ್ತಿ 
ರಾಜ್ಯ

ಸರ್ಕಾರಿ ಗೌರವಗಳೊಂದಿಗೆ ಅಶೋಕ್ ಗಸ್ತಿ ಅಂತ್ಯ ಸಂಸ್ಕಾರ

ಕೊರೋನಾ ಸೋಂಕಿಗೆ ತುತ್ತಾಗಿ ಗುರುವಾರ ರಾತ್ರಿ ನಿಧನರಾದ ಬಿಜೆಪಿಯ ಹಿರಿಯ ಮುಖಂಡ ರಾಜ್ಯಸಭಾ ಸದಸ್ಯ ಅಶೋಕ್ ಗಸ್ತಿ ಅವರ ಪಾರ್ಥೀವ ಶರೀರದ ಅಂತ್ಯ ಸಂಸ್ಕಾರ ಸರ್ಕಾರಿ ಗೌರವಗಳೊಂದಿಗೆ ರಾಯಚೂರಿನಲ್ಲಿ ನೆರವೇರಿತು.

ಪೋತಗಲ್: ಕೊರೋನಾ ಸೋಂಕಿಗೆ ತುತ್ತಾಗಿ ಗುರುವಾರ ರಾತ್ರಿ ನಿಧನರಾದ ಬಿಜೆಪಿಯ ಹಿರಿಯ ಮುಖಂಡ ರಾಜ್ಯಸಭಾ ಸದಸ್ಯ ಅಶೋಕ್ ಗಸ್ತಿ ಅವರ ಪಾರ್ಥೀವ ಶರೀರದ ಅಂತ್ಯ ಸಂಸ್ಕಾರ ಸರ್ಕಾರಿ ಗೌರವಗಳೊಂದಿಗೆ ರಾಯಚೂರಿನಲ್ಲಿ ನೆರವೇರಿತು.

ಅಶೋಕ್ ಗಸ್ತಿ ಅವರ ಹುಟ್ಟೂರಾದ ರಾಯಚೂರು ಜಿಲ್ಲೆಯ ಪೋತಗಲ್‌ನಲ್ಲಿ ಇಂದು ಅಶೋಕ್ ಗಸ್ತಿ ಅವರ ಪಾರ್ಥೀವ ಶರೀರದ ಅಂತ್ಯ ಸಂಸ್ಕಾರ ಸರ್ಕಾರಿ ಗೌರವಗಳೊಂದಿಗೆ ನೆರವೇರಿತು. ರಾಯಚೂರಿನ ಪೋತಗಲ್ ರಸ್ತೆಯಲ್ಲಿರುವ ಕೊರೊನಾದಿಂದ ಮೃತರಿಗೆ ಮೀಸಲಿರಿಸಿದ ರುದ್ರಭೂಮಿಯಲ್ಲಿ ಗಸ್ತಿ ಅವರ  ಅಂತಿಮ ಸಂಸ್ಕಾರ ನೆರವೇರಿಸಲಾಯಿತು.

ಗಸ್ತಿ ಅವರು ಕೊರೊನಾದಿಂದಾಗಿ ಮೃತಪಟ್ಟ ಹಿನ್ನೆಲೆ ಕೊರೊನಾ ನಿಯಮದಂತೆ ಎಲ್ಲಾ ರೀತಿಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವುದಾಗಿ ಜಿಲ್ಲಾಡಳಿತ ತಿಳಿಸಿತ್ತು. ಅದರಂತೆ ಬೆಂಗಳೂರಿನಿಂದ ಗಸ್ತಿ ಅವರ ಪಾರ್ಥಿವ ಶರೀರ ರಾಯಚೂರಿನ ಅವರ ನಿವಾಸಕ್ಕೆ ಆಗಮಿಸಿತು. ನಿವಾಸದಲ್ಲಿ ಅಂತಿಮ ದರ್ಶನದ  ಬಳಿಕ ಅಂಬ್ಯುಲೆನ್ಸ್‌ ಮೂಲಕವೇ ಪೋತಗಲ್‌ನ ಸ್ಮಶಾನಕ್ಕೆ ರವಾನೆ ಮಾಡಲಾಯಿತು. ಕೊರೋನಾ ಮಾರ್ಗಸೂಚಿ ಹಿನ್ನಲೆಯಲ್ಲಿ ಬೆಂಬಲಿಗರಿಗೆ ದೂರದಿಂದಲೇ ಅಂತಿಮ ದರ್ಶನಕ್ಕೆ ಅವಕಾಶ ಮಾಡಿಕೊಡಲಾಗಿತ್ತು. 

ಸೆಪ್ಟೆಂಬರ್ 2ರಂದು ಗಸ್ತಿ ಅವರಿಗೆ ಕೋವಿಡ್-19 ಪಾಸಿಟಿವ್ ದೃಢಪಟ್ಟಿತ್ತು. ಈ ಹಿನ್ನೆಲೆ ಅವರು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದರು, ಆದರೆ ಗುರುವಾರ ಚಿಕಿತ್ಸೆ ಫಲಿಸದೆ ಸಾವನಪ್ಪಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?