ಸಾಂದರ್ಭಿಕ ಚಿತ್ರ 
ರಾಜ್ಯ

ಗಾಂಜಾ ಬೆಳೆಯುವವರಿಗೆ ಪಶ್ಚಿಮ ಘಟ್ಟದ ತಪ್ಪಲು ಸುರಕ್ಷಿತ ಸ್ವರ್ಗ: ಅಕ್ರಮ ಪತ್ತೆಗೆ ಸಜ್ಜಾಗಿದೆ ಅರಣ್ಯ ಇಲಾಖೆ

ಕರ್ನಾಟಕದಲ್ಲಿ ಗಾಂಜಾ ಬೆಳೆ ಬೆಳೆಯುವ ಬಗ್ಗೆ ಅಲ್ಲಲ್ಲಿ ವರದಿಯಾಗುತ್ತಲೇ ಇದೆ. ಡ್ರಗ್ ಕೇಸು ವ್ಯಾಪಕವಾಗಿ ಸದ್ದು ಮಾಡುತ್ತಿರುವ ಈ ಹೊತ್ತಿನಲ್ಲಿ ಅರಣ್ಯ ಇಲಾಖೆ ಅರಣ್ಯ ಪ್ರದೇಶಗಳ ಸುತ್ತಮುತ್ತ ತಪಾಸಣೆಗೆ ಮುಂದಾಗಿದೆ.

ಬೆಂಗಳೂರು: ಕರ್ನಾಟಕದಲ್ಲಿ ಗಾಂಜಾ ಬೆಳೆ ಬೆಳೆಯುವ ಬಗ್ಗೆ ಅಲ್ಲಲ್ಲಿ ವರದಿಯಾಗುತ್ತಲೇ ಇದೆ. ಡ್ರಗ್ ಕೇಸು ವ್ಯಾಪಕವಾಗಿ ಸದ್ದು ಮಾಡುತ್ತಿರುವ ಈ ಹೊತ್ತಿನಲ್ಲಿ ಅರಣ್ಯ ಇಲಾಖೆ ಅರಣ್ಯ ಪ್ರದೇಶಗಳ ಸುತ್ತಮುತ್ತ ತಪಾಸಣೆಗೆ ಮುಂದಾಗಿದೆ. ನಿನ್ನೆ ಬಿಳಿಗಿರಿ ರಂಗಸ್ವಾಮಿ ದೇವಸ್ಥಾನ ಹುಲಿ ಅಭಯಾರಣ್ಯ ಸುತ್ತಮುತ್ತ ಗಾಂಜಾ ಬೆಳೆಯುವ ಬಗ್ಗೆ ಅರಣ್ಯ ಇಲಾಖೆ ಬೆಳಕಿಗೆ ಬಂದ ಹಿನ್ನೆಲೆಯಲ್ಲಿ ಚುರುಕಾಗಿದೆ.

ಈ ಬಗ್ಗೆ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಪತ್ರಿಕೆಗೆ ಮಾಹಿತಿ ನೀಡಿದ ಅರಣ್ಯ ಇಲಾಖೆಯ ಹಿರಿಯ ಅಧಿಕಾರಿ, ಅಕ್ರಮ ಬೇಟೆ ನಿಗ್ರಹ ಸಿಬ್ಬಂದಿ ಮತ್ತು ಇತರ ಸಿಬ್ಬಂದಿಗಳು ಅಕ್ರಮವಾಗಿ ಗಾಂಜಾ ಬೆಳೆಯುವವರನ್ನು ಪತ್ತೆಹಚ್ಚಿದ್ದಾರೆ. ಪಶ್ಚಿಮ ಘಟ್ಟಗಳ ತಪ್ಪಲಿನಲ್ಲಿ ತೀವ್ರ ತಪಾಸಣೆ ಅತ್ಯಗತ್ಯವಾಗಿದೆ. ಗಾಂಜಾ ಬೆಳೆಯುವವರಿಗೆ ಅರಣ್ಯ ಪ್ರದೇಶ ಅತ್ಯಂತ ಸುರಕ್ಷಿತ ಸ್ವರ್ಗವೆನಿಸುತ್ತಿದೆ. ಅಲ್ಲಿ ತಪಾಸಣೆ ಮಾಡಬೇಕಾಗಿದೆ ಎಂದರು. 

ಕೇರಳ ಮತ್ತು ತಮಿಳು ನಾಡು ರಾಜ್ಯಗಳ ಜನರು ಗಾಂಜಾ ಬೆಳೆಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ ಎಂಬ ಮಾಹಿತಿ ಕೇಳಿಬರುತ್ತಿದೆ. ದಟ್ಟ ಅರಣ್ಯದೊಳಗೆ ಇದನ್ನು ಬೆಳೆಯಲಾಗುತ್ತಿದೆ. ವಾಣಿಜ್ಯ ಉದ್ದೇಶಕ್ಕೆ ಮತ್ತು ಖಾಸಗಿ ಬಳಕೆಗೆ ಗಾಂಜಾ ಬೆಳೆಗೆ ಜನರು ಒಲವು ತೋರಿಸುತ್ತಿದ್ದು ಅರಣ್ಯ ಪ್ರದೇಶಗಳ ಬುಡಕಟ್ಟು ಜನಾಂಗ ಮತ್ತು ಸ್ಥಳೀಯರು ಇದಕ್ಕೆ ಬೆಂಬಲ ಸೂಚಿಸುತ್ತಿದ್ದಾರೆ ಎಂದು ತಿಳಿದುಬಂದಿದೆ.

ಗಾಂಜಾವನ್ನು ಕಳೆಗಳಂತೆ ಬೆಳೆಯುವುದರಿಂದ ಇಲಾಖೆಯೂ ಆತಂಕಕ್ಕೊಳಗಾಗುತ್ತದೆ, ಒಂದು ಬೆಳೆ ತೆಗೆದರೆ ಉಳಿದವು ತಾನಾಗಿಯೇ ಬೆಳೆಯುತ್ತದೆ. ಅಕ್ರಮವಾಗಿ ಬೆಳೆಸುವ ಬಗ್ಗೆ ಸೂಕ್ತ ತನಿಖೆ ಮಾಡಬೇಕಿದೆ. ಕೆಲವು ಬುಡಕಟ್ಟು ಜನಾಂಗದವರು ತಮ್ಮ ಬಳಕೆಗಾಗಿ ಗಾಂಜಾವನ್ನು ಬೆಳೆಯುತ್ತಾರೆ ಎಂಬ ಮಾಹಿತಿಯೂ ಇದೆ, ಮತ್ತು ಅದನ್ನು ಎಲ್ಲಿ ಬೆಳೆಯಲಾಗುತ್ತಿದೆ ಎಂಬುದನ್ನು ಕಂಡುಹಿಡಿಯಲು ಕ್ರಮ ಕೈಗೊಳ್ಳಲಾಗುತ್ತಿದೆ. ಈ ದಂಧೆಯನ್ನು ತಳಮಟ್ಟದಲ್ಲಿಯೇ ಬೇಧಿಸಬೇಕಿದೆ ಎಂದು ಅಧಿಕಾರಿಗಳು ಹೇಳುತ್ತಾರೆ.

ಪೊಲೀಸರು ಬುಡಕಟ್ಟು ಜನಾಂಗದವರನ್ನು ಬಂಧಿಸಿ 26 ಕೆಜಿ ಗಾಂಜಾ ವಶ: ಚಾಮರಾಜನಗರ ತಾಲ್ಲೂಕಿನಲ್ಲಿ ತನ್ನ ಹೊಲಗಳಲ್ಲಿ 26.8 ಕೆಜಿ ಗಾಂಜಾ ಬೆಳೆದಿದ್ದ ಬೆಲವಥ ಗ್ರಾಮದ ಬುಡಕಟ್ಟು ಜನಾಂಗದ ವ್ಯಕ್ತಿಯನ್ನು ಬಂಧಿಸಲಾಗಿದೆ. ಅವರು 134 ಗಾಂಜಾ ಸಸಿಗಳನ್ನು ಬೆಳೆಸಿದ್ದರು, ಚಾಮರಾಜನಗರ ಪಶ್ಚಿಮ ಪೊಲೀಸರು ಸುಳಿವು ನೀಡಿ ಹೊಲಗಳ ಮೇಲೆ ದಾಳಿ ನಡೆಸಿ ಪೊಲೀಸರು ಜಡೆ ಗೌಡನನ್ನು ಬಂಧಿಸಿದ್ದಾರೆ. ಅಪರಾಧದಲ್ಲಿ ಜಡೇಗೌಡನಿಗೆ ಸಹಾಯ ಮಾಡಿದ ಮದಯ್ಯನನ್ನು ಹುಡುಕುತ್ತಿದ್ದಾರೆ. ಆರೋಪಿಗಳನ್ನು ನ್ಯಾಯಾಂಗ ಬಂಧನದಲ್ಲಿರಿಸಲಾಗಿದೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

ಮಿಲಿಟರಿ ದಾಳಿಗೆ ಟ್ರಂಪ್, ನೆತನ್ಯಾಹು ಸಜ್ಜು: ತಿರುಗೇಟು ನೀಡಿದ ಇರಾನ್! ಹೇಳಿದ್ದೇನು ಗೊತ್ತಾ?

SCROLL FOR NEXT