ವಿಚಾರಣೆಗೆ ಸಿಸಿಬಿ ಕಚೇರಿಗೆ ಆಗಮಿಸಿರುವ ನಟಿ ಐಂದ್ರಿತಾ ರೈ 
ರಾಜ್ಯ

ಸ್ಯಾಂಡಲ್'ವುಡ್ ಡ್ರಗ್ಸ್ ದಂಧೆ ಪ್ರಕರಣ: ಮತ್ತಷ್ಟು ನಟ-ನಟಿಯರು, ಗಣ್ಯರ ಮೇಲೆ ಸಿಸಿಬಿ ಕಣ್ಣು

ಚಿತ್ರರಂಗದಲ್ಲಿನ ಮಾದಕ ವಸ್ತು ಮಾರಾಟ ಜಾಲದ ನಂಟು ಸಂಬಂಧ ಇಬ್ಬರು ನಟಿಯರು ಹಾಗೂ ಸ್ಟಾರ್ ದಂಪತಿ ಬಳಿಕ ಮತ್ತಷ್ಟು ನಟ-ನಟಿಯರು ಹಾಗೂ ಗಣ್ಯರಿಗೂ ಶೀಘ್ರದಲ್ಲಿಯೇ ಸಂಕಷ್ಟ ಎದುರಾಗಲಿದೆ. 

ಬೆಂಗಳೂರು: ಚಿತ್ರರಂಗದಲ್ಲಿನ ಮಾದಕ ವಸ್ತು ಮಾರಾಟ ಜಾಲದ ನಂಟು ಸಂಬಂಧ ಇಬ್ಬರು ನಟಿಯರು ಹಾಗೂ ಸ್ಟಾರ್ ದಂಪತಿ ಬಳಿಕ ಮತ್ತಷ್ಟು ನಟ-ನಟಿಯರು ಹಾಗೂ ಗಣ್ಯರಿಗೂ ಶೀಘ್ರದಲ್ಲಿಯೇ ಸಂಕಷ್ಟ ಎದುರಾಗಲಿದೆ. 

ಪ್ರಕರಣ ಸಂಬಂಧ ಈಗಾಗಲೇ ಬಂಧನಕ್ಕೊಳಪಡಿಸಲಾಗಿರುವ ವೀರೇನ್ ಖನ್ನಾ ಎಂಬಾತನನ್ನು ಸಿಸಿಬಿ ಪೊಲೀಸರುವಿಚಾರಣೆ ನಡೆಸಿದ್ದು, ವಿಚಾರಣೆ ವೇಳೆ ಸ್ಫೋಟ ಮಾಹಿತಿಗಳನ್ನು ಬಾಯ್ಬಿಟ್ಟಿದ್ದಾನೆಂದು ಹೇಳಲಾಗುತ್ತಿದೆ. 

ಡ್ರಗ್ಸ್ ಪಾರ್ಟಿಗಳ ಕುರಿತು ವಿಐಪಿಗಳ ಮೊಬೈಲ್ ಗಳಿಗೆ ಆರೋಪಿ ಆಹ್ವಾನ ಸಂದೇಶಗಳನ್ನು ರವಾನಿಸುತ್ತಿದ್ದ. ಈವರೆಗೂ ಯಾರು ಯಾರು ಆ ಪಾರ್ಟಿಯಲ್ಲಿ ಭಾಗಿಯಾಗಿದ್ದರು ಎಂಬುದರ ಕುರಿತು ಆರೋಪಿ ಅಧಿಕಾರಿಗಳ ಬಳಿ ಬಾಯ್ಬಿಟ್ಟಿದ್ದಾನೆಂದು ಹೇಳಲಾಗುತ್ತಿದೆ. 

ಈಗಾಗಲೇ ಪ್ರಕರಣ ಸಂಬಂಧ ಹಿರಿಯ ನಟರೊಬ್ಬರಿಗೂ ನೋಟಿಸ್ ಜಾರಿ ಮಾಡಿದ್ದೇವೆ. ಪ್ರಸ್ತುತ ಪರಿಸ್ಥಿತಿಯಲ್ಲಿ ಅವರ ಹೆಸರನ್ನು ಬಹಿರಂಗಪಡಿಸಲು ಸಾಧ್ಯವಿಲ್ಲ ಎಂದು ಅಧಿಕಾರಿಯೊಬ್ಬರು ಹೇಳಿದ್ದಾರೆ. 

ಈ ನಡುವೆ ಈಗಾಗಲೇ ಸಿಸಿಬಿ ಪೊಲೀಸರಿಂದ ವಿಚಾರಣೆಗೊಳಪಟ್ಟ ಸ್ಟಾರ್ ದಂಪತಿಗಳ ಕುರಿತಂತೆ ಕೆಲ ಮಾಹಿತಿಗಳು ಬಹಿರಂಗಗೊಂಡಿವೆ. 2017ರಲ್ಲಿ ಜಯನಗರ ಪೊಲೀಸರಿಗೆ ಸ್ಟಾರ್ ದಂಪತಿಗಳು ಸಿಕ್ಕಿಬಿದ್ದಿದ್ದರು. ಆದರೆ, ಬಲವಾದ ಸಾಕ್ಷ್ಯಗಳು ಲಭ್ಯವಾಗದ ಹಿನ್ನೆಲೆಯಲ್ಲಿ ಅವರ ವಿರುದ್ಧ ಕ್ರಮ ಕೈಗೊಳ್ಳಲು ಸಾಧ್ಯವಾಗಿರಲಿಲ್ಲ ಎಂದು ಹೇಳಲಾಗುತ್ತಿದೆ. 

ಡ್ರಗ್ಸ್ ಸೇವನೆ ಮಾಡಿದ್ದ ಹಿನ್ನೆಲೆಯಲ್ಲಿ ಅಪಘಾತ ಸಂಭವಿಸಿದ ಸಣ್ಣಪುಟ್ಟ ಗಾಯಗಳಾಗಿದ್ದವು. ಆದರೆ, ಘಟನೆ ಸಂಬಂಧ ಪೊಲೀಸರು ಯಾವುದೇ ಪ್ರಕರಣಗಳನ್ನೂ ದಾಖಲಿಸಿಕೊಂಡಿರಲಿಲ್ಲ. ಈ ನಟರು ತನ್ನ ಸಹೋದರನನ್ನೂ ಕೂಡ ವಿಟ್ಠಲ್ ಮಲ್ಯಾ ರಸ್ತೆಯಲ್ಲಿ ನಡೆದಿದ್ದ ಪಾರ್ಟಿಗೆ ಕರೆದುಕೊಂಡು ಹೋಗಿದ್ದರು ಎಂದು ಪೊಲೀಸ್ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. 

ಈ ನಡುವೆ ವಿಚಾರಣೆ ವೇಳೆ ಆರೋಪಿ ರವಿಶಂಕರ್ ಕೂಡ ಪಾರ್ಟಿಯಲ್ಲಿ ಪಾಲ್ಗೊಳ್ಳುತ್ತಿದ್ದ ಕೆಲ ರಾಜಕೀಯ ನಾಯರ ಪುತ್ರರ ಹೆಸರನ್ನೂ ಬಾಯ್ಬಿಟ್ಟಿದ್ದಾನೆಂದು ತಿಳಿದುಬಂದಿದ್ದು, ಈಗಾಗಲೇ ಪೊಲೀಸರು ಅವರಿಗೋ ನೋಟಿಸ್ ಜಾರಿ ಮಾಡಿದ್ದು, ಈ ಕುರಿತು ಮಾಹಿತಿ ಕಲೆ ಹಾಕುತ್ತಿದ್ದಾರೆಂದು ತಿಳಿದುಬಂದಿದೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

CM ಬದಲಾವಣೆ ನಾಲ್ಕರಿಂದ ಐದು ಜನರ ನಡುವೆ ನಡೆದ "ರಹಸ್ಯ ಒಪ್ಪಂದ": ಡಿಕೆಶಿ​ ಸ್ಫೋಟಕ ಹೇಳಿಕೆ

ರಾಜ್ಯದಲ್ಲಿ ಸಿಎಂ ಗದ್ದುಗೆ ಗುದ್ದಾಟ: ಎಲ್ಲ ಗೊಂದಲಗಳಿಗೆ ಹೈಕಮಾಂಡ್ ತೆರೆ ಎಳೆಯಬೇಕು- ಸಿಎಂ ಸಿದ್ದರಾಮಯ್ಯ

ಸ್ಮೃತಿ ಮಂಧಾನ ಮದುವೆ ಮುಂದೂಡಿಕೆಗೆ ಅಸಲಿ ಕಾರಣ? ಮತ್ತೊಂದು ಹೆಣ್ಣಿನೊಂದಿಗೆ ಮೋಹ, ನಂಬಿಕೆ ದ್ರೋಹ; ಬಯಲಾಯ್ತು ಪಲಾಶ್'ನ ಅಸಲಿ ರಂಗಿನಾಟ!

ಪಶ್ಚಿಮ ಬಂಗಾಳದಲ್ಲಿ ವಿವಾದಿತ SIR ಕುರಿತು ಮಾತುಕತೆಗೆ ಟಿಎಂಸಿಗೆ ಚುನಾವಣಾ ಆಯೋಗ ಆಹ್ವಾನ

ಇದು ಕೇವಲ ಧ್ವಜವಲ್ಲ ಭಾರತೀಯ ನಾಗರಿಕತೆಯ ಪುನರ್‌ ಜಾಗೃತಿಯ ಧ್ವಜ, ಶತಮಾನಗಳಷ್ಟು ಹಳೆಯ ಗಾಯ ಈಗ ವಾಸಿಯಾಗುತ್ತಿದೆ: ಪ್ರಧಾನಿ ಮೋದಿ

SCROLL FOR NEXT