ಸಂಪತ್ ರಾಜ್ 
ರಾಜ್ಯ

ಬೆಂಗಳೂರು ಗಲಭೆ ಪ್ರಕರಣ: ಕೊರೋನಾ ಸೋಂಕು ಕಾರಣ ನೀಡಿ ವಿಚಾರಣೆಗೆ ಮಾಜಿ ಮೇಯರ್ ಸಂಪತ್ ರಾಜ್ ಗೈರು

ಬೆಂಗಳೂರು ಗಲಭೆ ಪ್ರಕರಣ ಸಂಬಂಧ ವಿಚಾರಣೆ ಹಾಜರಾಗುವಂತೆ ಸಿಸಿಬಿ ಪೊಲೀಸರು ಎರಡನೇ ಬಾರಿಗೆ ಬಿಬಿಎಂಪಿ ಮಾಜಿ ಮೇಯರ್ ಸಂಪತ್ ಕುಮಾರ್ ಅವರಿಗೆ ನೋಟಿಸ್ ಜಾರಿ ಮಾಡಿದ್ದು, ವಿಚಾರಣೆಗೆ ಸಂಪತ್ ರಾಜ್ ಅವರು ಗೈರು ಹಾಜರಾಗಿದ್ದಾರೆಂದು ತಿಳಿದುಬಂದಿದೆ. 

ಬೆಂಗಳೂರು: ಬೆಂಗಳೂರು ಗಲಭೆ ಪ್ರಕರಣ ಸಂಬಂಧ ವಿಚಾರಣೆ ಹಾಜರಾಗುವಂತೆ ಸಿಸಿಬಿ ಪೊಲೀಸರು ಎರಡನೇ ಬಾರಿಗೆ ಬಿಬಿಎಂಪಿ ಮಾಜಿ ಮೇಯರ್ ಸಂಪತ್ ಕುಮಾರ್ ಅವರಿಗೆ ನೋಟಿಸ್ ಜಾರಿ ಮಾಡಿದ್ದು, ವಿಚಾರಣೆಗೆ ಸಂಪತ್ ರಾಜ್ ಅವರು ಗೈರು ಹಾಜರಾಗಿದ್ದಾರೆಂದು ತಿಳಿದುಬಂದಿದೆ. 

ತೀವ್ರ ಸಂಚಲನ ಸೃಷ್ಟಿಸಿದ್ದ ಡಿಜೆ ಹಳ್ಳಿ ಹಾಗೂ ಕೆಜಿ ಹಳ್ಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ತನಿಖೆಯನ್ನು ಚುರುಕುಗೊಳಿಸಿದ್ದಾರೆ. ಈ ನಡುವೆ ಪ್ರಕರಣಕ್ಕೆ ಮಹತ್ವದ ತಿರುವು ಸಿಕ್ಕಿದೆ ಎಂದು ಹೇಳಲಾಗುತ್ತಿದ್ದು, ಇದರಂತೆ ವಿಚಾರಣೆಗೆ ಹಾಜರಾಗುವಂತೆ ಶುಕ್ರವಾರವಷ್ಟೇ ಸಂಪತ್ ರಾಜ್ ಅವರಿಗೆ ಎರಡನೇ ಬಾರಿಗೆ ನೋಟಿಸ್ ಜಾರಿ ಮಾಡಿದ್ದರು. 

ಆದರೆ, ಕೊರೋನಾ ಸೋಂಕು ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದು, ವಿಚಾರಣೆಗೆ ಹಾಜರಾಗಲು ಸಾಧ್ಯವಿಲ್ಲ ಎಂದು ತಮ್ಮ ವಕೀಲರಿಂದ ಸಂಪತ್ ಕುಮಾರ್ ಅವರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆಂದು ತಿಳಿದುಬಂದಿದೆ. 

ಪ್ರಕರಣ ಸಂಬಂಧ ಸಂಪತ್ ರಾಜ್ ಅವರು ಆರೋಪಿಗಳೊಂದಿಗೆ ದೂರವಾಣಿ ಕರೆಗಳೊಂದಿಗೆ ಸಂಪರ್ಕದಲ್ಲಿದ್ದರು ಎಂದು ಹೇಳಲಾಗುತ್ತಿದೆ. ಈ ಕುರಿತು ಬಂಧನಕ್ಕೊಳಗಾಗಿರುವ ಆರೋಪಿ ಅರುಣ್ ಕುಮಾರ್ ಪೊಲೀಸರಿಗೆ ಮಾಹಿತಿ ನೀಡಿದ್ದಾನೆಂದು ಹೇಳಲಾಗುತ್ತಿದೆ. ಸಂಪತ್ ರಾಜ್ ಅವರು ಕರೆ ಮಾಡುವಾಗ ತನ್ನ ಫೋನ್ ಬಳಕೆ ಮಾಡುತ್ತಿದ್ದ ಎಂದು ಹೇಳಿಕೊಂಡಿದ್ದಾನೆಂದು ವರದಿಗಳು ತಿಳಿಸಿವೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 13 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

SCROLL FOR NEXT