ರಾಜ್ಯ

ಬೆಳಗಾವಿ: ಸಾಮಾಜಿಕ ಕಾರ್ಯಕರ್ತ, ಕಾಂಗ್ರೆಸ್ ಮುಖಂಡ ಆನಂದ್ ಚೋಪ್ರಾ ವಿಧಿವಶ

Manjula VN

ಬೆಳಗಾವಿ: ಹಿರಿಯ ಕಾಂಗ್ರೆಸ್ ಮುಖಂಡ ಮತ್ತು ಸಮಾಜ ಸೇವಕ ಆನಂದ್ ಚೋಪ್ರಾ ಅವರು ಶನಿವಾರ ಹೃದಯಾಘಾತದಿಂದ ನಿಧನರಾದರು ಎಂದು ಕುಟುಂಬ ಮೂಲಗಳು ತಿಳಿಸಿವೆ.

ಪ್ರಮುಖ ಉದ್ಯಮಿಯಾಗಿದ್ದ ಐವತ್ತನಾಲ್ಕು ವರ್ಷ ವಯಸ್ಸಿನ ಚೋಪ್ರಾ, ಸವದತ್ತಿ ವಿಧಾನಸಭಾ ಕ್ಷೇತ್ರದಿಂದ ಕಾಂಗ್ರೆಸ್ ಟಿಕೆಟ್‌ನಲ್ಲಿ ಎರಡು ಬಾರಿ ಬಿಜೆಪಿ ಅಭ್ಯರ್ಥಿ ಆನಂದ್ ಮಾಮನಿ ವಿರುದ್ಧ ಸ್ಪರ್ಧಿಸಿದ್ದರು.

ಆನಂದ್ ಛೋಪ್ರಾ ನಿಧನಕ್ಕೆ ಜಲಸಂಪನ್ಮೂಲ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ರಮೇಶ್ ಜಾರಕಿಹೊಳಿ ಮತ್ತು ಬೆಳಗಾವಿ ಗ್ರಾಮೀಣ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಸಂತಾಪ ಸೂಚಿಸಿದ್ದಾರೆ.

SCROLL FOR NEXT