ಯುವರಾಜ್ - ಅಕುಲ್ ಬಾಲಾಜಿ - ಸಂತೋಷ್ 
ರಾಜ್ಯ

ಡ್ರಗ್ ಕೇಸ್: ಅಕುಲ್ ಬಾಲಾಜಿ, ಸಂತೋಷ್, ಯುವರಾಜ್ ಗೆ ಸತತ 8 ಗಂಟೆಗಳ ಕಾಲ ಸಿಸಿಬಿ ಡ್ರಿಲ್

ಸ್ಯಾಂಡಲ್ ವುಡ್ ಡ್ರಗ್ಸ್ ನಂಟು ಪ್ರಕರಣಕ್ಕೆ ಸಂಬಂಧಿಸಿದಂತೆ ನಿರೂಪಕ ಅಕುಲ್ ಬಾಲಾಜಿ, ನಟ ಸಂತೋಷ್ ಹಾಗೂ ಮಾಜಿ ಶಾಸಕರ ಪುತ್ರ ಆರ್ ವಿ ಯುವರಾಜ್ ಅವರಿಗೆ ಶನಿವಾರ ಸಿಸಿಬಿ ಸತತ ಎಂಟು ಗಂಟೆಗಳ ಕಾಲ ವಿಚಾರಣೆ ನಡೆಸಿದೆ.

ಬೆಂಗಳೂರು: ಸ್ಯಾಂಡಲ್ ವುಡ್ ಡ್ರಗ್ಸ್ ನಂಟು ಪ್ರಕರಣಕ್ಕೆ ಸಂಬಂಧಿಸಿದಂತೆ ನಿರೂಪಕ ಅಕುಲ್ ಬಾಲಾಜಿ, ನಟ ಸಂತೋಷ್ ಹಾಗೂ ಮಾಜಿ ಶಾಸಕರ ಪುತ್ರ ಆರ್ ವಿ ಯುವರಾಜ್ ಅವರಿಗೆ ಶನಿವಾರ ಸಿಸಿಬಿ ಸತತ ಎಂಟು ಗಂಟೆಗಳ ಕಾಲ ವಿಚಾರಣೆ ನಡೆಸಿದೆ.

ಕಾಟನ್ ಪೇಟೆ ಪೊಲೀಸ್ ಠಾಣೆಯಲ್ಲಿ ದಾಖಲಾದ ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗುವಂತೆ ಸಿಸಿಬಿ ಪೊಲೀಸರು ಶುಕ್ರವಾರ ನೋಟಿಸ್ ನೀಡಿದ್ದ ಹಿನ್ನೆಲೆಯಲ್ಲಿ ಈ ಮೂವರು ಇಂದು ಚಾಮರಾಜಪೇಟೆಯಲ್ಲಿರುವ ಸಿಸಿಬಿ ಕಚೇರಿಗೆ ಬಂದಿದ್ದರು.

ಸತತ 8 ಗಂಟೆಗಳ ವಿಚಾರಣೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅಕುಲ್ ಬಾಲಾಜಿ, ಸಿಸಿಬಿ ತನಿಖೆಗೆ ಸಂಪೂರ್ಣ ಸಹಕಾರ ನೀಡುತ್ತೇವೆ. ಮತ್ತೆ ವಿಚಾರಣೆಗೆ ಕರೆದರೇ ಹಾಜರಾಗುತ್ತೇವೆ ಎಂದಿದ್ದಾರೆ.

ಸಿಸಿಬಿ ವಿಚಾರಣೆ ಎದುರಿಸಿದ ಬಳಿಕ ನಟ ಸಂತೋಷ್ ಹಾಗೂ ಅಕುಲ್ ಬಾಲಾಜಿ ಮಾಧ್ಯಮಗಳ ಜೊತೆ ಮಾತನಾಡಿ, ವಿಚಾರಣೆಗೆ ಕರೆದರೆ ಮತ್ತೆ ಬರುವುದಾಗಿ ಹೇಳಿದ್ದಾರೆ. ಆದರೆ ಯುವರಾಜ್ ಅವರನ್ನು ಮಾತ್ರ ಅವರ ಬೆಂಬಲಿಗರು ಮಾಧ್ಯಮಗಳಿಗೆ ಹೇಳಿಕೆ ನೀಡದಂತೆ ಬಂದು ಕರೆದೊಯ್ದಿದ್ದಾರೆ. ಮಾಧ್ಯಮಗಳ ಕ್ಯಾಮೆರಾ ಮ್ಯಾನ್ ಗಳನ್ನು ತಳ್ಳಿ ಯುವರಾಜ್ ನನ್ನು ಬೆಂಬಲಿಗರು ಕರೆದುಕೊಂಡು ಹೋಗಿದ್ದಾರೆ. ಈ ಹಿನ್ನೆಲೆಯಲ್ಲಿ ಮಾಧ್ಯಮಗಳಿಗೆ ಯಾವುದೇ ಮಾಹಿತಿಯನ್ನು ಯುವರಾಜ್ ನೀಡಿಲ್ಲ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಸಿದ್ದರಾಮಯ್ಯ ಮೇಲೆ ತೂಗುಗತ್ತಿ: ಅಧಿಕಾರದಲ್ಲಿ ಉಳಿಯಲು ಸಂಪುಟ ಪುನಾರಚನೆ ಕಸರತ್ತು; ಬಿಹಾರ-ಕೇರಳ ಚುನಾವಣೆಯತ್ತ ಡಿಕೆಶಿ ಚಿತ್ತ!

ವೀರೇಂದ್ರ ಪಪ್ಪಿ ಕರ್ಮಕಾಂಡ ನೋಡುತ್ತಿದ್ದರೆ CM- DCM ಇನ್ಯಾವ ಪರಿ ಲೂಟಿ ಮಾಡಿ ಹೈಕಮಾಂಡ್ ಗೆ ಕಪ್ಪ ನೀಡುತ್ತಿರಬೇಡಾ?

BDA ಯೋಜನಾ ಪ್ರಾಧಿಕಾರದ ಜವಾಬ್ದಾರಿ ಹಸ್ತಾಂತರ: GBA ವಿರೋಧಿಸುವವರು ಪಾಲಿಕೆ ಚುನಾವಣೆ ಬಹಿಷ್ಕರಿಸಲಿ; ಡಿಕೆಶಿ ಸವಾಲು

ಮೈಸೂರು ಪೊಲೀಸರಿಗೆ CM ಪುತ್ರನ ಕಾಟ: ಯಾವುದೇ ವರ್ಗಾವಣೆಯಾಗಬೇಕಾದರೂ ಯತೀಂದ್ರಗೆ ಟ್ಯಾಕ್ಸ್ ಕಟ್ಟಬೇಕು; ಪ್ರತಾಪ್ ಸಿಂಹ

ಬಾಂಬೆ ಮಾದರಿಯಲ್ಲಿ ಕೊಳಗೇರಿ ಪುನಶ್ಚೇತನಕ್ಕೆ ಸಮಿತಿ ರಚನೆ: GBA ವ್ಯಾಪ್ತಿಗೆ ಆನೇಕಲ್ ಸೇರಿಸುವುದು ಕಷ್ಟ; ಡಿಕೆ ಶಿವಕುಮಾರ್

SCROLL FOR NEXT