ರಾಜ್ಯ

ಡಿಸಿಎಂ ಗೋವಿಂದ ಕಾರಜೋಳಗೆ ಕೊರೋನಾ ಪಾಸಿಟಿವ್: ಕಲಾಪದಲ್ಲಿ ಪಾಲ್ಗೊಂಡಿದ್ದ ಸಚಿವರಲ್ಲಿ ಆತಂಕ 

Nagaraja AB

ಬೆಂಗಳೂರು: ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ ಅವರಿಗೆ ಕೊರೊನಾ ಸೋಂಕು ದೃಢಪಟ್ಟಿದೆ.ವಿಧಾನಮಂಡಲ ಅಧಿವೇಶನದಲ್ಲಿ ಎರಡು ದಿನ ಪಾಲ್ಗೊಂಡಿದ್ದ ಅವರಿಗೆ ಈಗ ಸೋಂಕು ದೃಢಪಟ್ಟಿರುವುದು ಆತಂಕಕ್ಕೆ ಕಾರಣವಾಗಿದೆ.

ಗೋವಿಂದ ಕಾರಜೋಳ ಅವರು ವಿಧಾನಸಭೆಯ ಮೊದಲ ಆಸನ, ಮೊಗಸಾಲೆ, ಕ್ಯಾಂಟೀನ್ ಮುಂತಾದ ಕಡೆಗಳಲ್ಲಿ ಕುಳಿತಿದ್ದು, ಹಲವು ಸಚಿವರು, ಅಧಿಕಾರಿಗಳೊಂದಿಗೆ ಸಮಾಲೋಚನೆ ಕೂಡ ನಡೆಸಿದ್ದಾರೆ.

ಈ ಬಗ್ಗೆ ಸ್ವತಃ ಟ್ವೀಟ್ ಮಾಡಿರುವ ಅವರು, ಕೋವಿಡ್ 19 ಪರೀಕ್ಷೆಯಲ್ಲಿ ನನಗೆ ಪಾಸಿಟಿವ್ ಎಂದು ದೃಢ ಪಟ್ಟಿದ್ದು, ನನಗೆ ಯಾವುದೇ ರೋಗಲಕ್ಷಣಗಳು ಇಲ್ಲದಿದ್ದರೂ ವೈದ್ಯರ ಸಲಹೆಯಂತೆ ಆಸ್ಪತ್ರೆಗೆ ದಾಖಲಾಗುತ್ತಿದ್ದೇನೆ. ನನ್ನ ಸಂಪರ್ಕದಲ್ಲಿದ್ದವರು ಮುಂಜಾಗ್ರತೆವಹಿಸಿ, ಕೋವಿಡ್ ಪರೀಕ್ಷೆಗೊಳಪಟ್ಟು ಕ್ವಾರಂಟೈನ್ ನಲ್ಲಿರುವಂತೆ ಎಂದು‌ ಕೋರುತ್ತೇನೆ ಎಂದು ಮನವಿ ಮಾಡಿದ್ದಾರೆ.

SCROLL FOR NEXT