ಸಂಗ್ರಹ ಚಿತ್ರ 
ರಾಜ್ಯ

ಸರ್ಕಾರದ ವಿವಾದಿತ ನಿರ್ಣಯದ ವಿರುದ್ಧ ತಿರುಗಿ ಬಿದ್ದ ವೈದ್ಯರು, ಸಚಿವರಿಗೆ ಮನವಿ

ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವ ಆಯುಷ್ ವೈದ್ಯರ ಮೇಲೆ ಎಸೆನ್ಷಿಯಲ್ ಮಾಡರ್ನ್ ಮೆಡಿಸಿನ್ (ಇಂಟಗ್ರೇಟೆಡ್ ಸಿಸ್ಟಮ್) ಅಭ್ಯಾಸ ಮಾಡುವ ಸರ್ಕಾರದ ನಿರ್ಧಾರಕ್ಕೆ ನಿಮಾ (ರಾಷ್ಟ್ರೀಯ ಸಮಗ್ರ ವೈದ್ಯಕೀಯ ಸಂಘ-ನಿಮಾ) ವಿರೋಧ ವ್ಯಕ್ತಪಡಿಸಿದೆ.

ಬೆಂಗಳೂರು: ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವ ಆಯುಷ್ ವೈದ್ಯರ ಮೇಲೆ ಎಸೆನ್ಷಿಯಲ್ ಮಾಡರ್ನ್ ಮೆಡಿಸಿನ್ (ಇಂಟಗ್ರೇಟೆಡ್ ಸಿಸ್ಟಮ್) ಅಭ್ಯಾಸ ಮಾಡುವ ಸರ್ಕಾರದ ನಿರ್ಧಾರಕ್ಕೆ ನಿಮಾ (ರಾಷ್ಟ್ರೀಯ ಸಮಗ್ರ ವೈದ್ಯಕೀಯ ಸಂಘ-ನಿಮಾ) ವಿರೋಧ ವ್ಯಕ್ತಪಡಿಸಿದೆ.

ಈ ಕುರಿತಂತೆ ಸಂಘದ ವೈದ್ಯರು ಆರೋಗ್ಯ ಸಚಿವ ಬಿ ಶ್ರೀರಾಮುಲು ಅವರನ್ನು ಭೇಟಿ ಮಾಡಿದ್ದು, ಮನವಿ ಪತ್ರ ಸಲ್ಲಿಕೆ ಮಾಡಿದ್ದಾರೆ. ವೈದ್ಯರ ಕುರಿತ ವಿವಾದಿತ ಆದೇಶವನ್ನು ಹಿಂದಕ್ಕೆ ಪಡೆಯುವಂತೆ ಮನವಿ ಮಾಡಿದ್ದಾರೆ.

ಸರ್ಕಾರ ಆದೇಶವು ಸುಪ್ರೀಂ ಕೋರ್ಟ್‌ನ ಇಂಟರ್ಲೋಕ್ಯೂಟರಿ ತೀರ್ಪಿನ ಎಸ್‌ಎಲ್‌ಪಿ (2016 ರ ಸಿವಿಲ್ 26145) ಉಲ್ಲಂಘನೆಯಾಗಿದೆ. ಕೂಡಲೇ ಅದನ್ನು ಹಿಂತೆಗೆದುಕೊಳ್ಳುವಂತೆ ಸರ್ಕಾರವನ್ನು ಕೇಳಲಾಗಿದೆ ಎಂದು ನಿಮಾ ಹೇಳಿದೆ. ಈ ಬಗ್ಗೆ ಮಾತನಾಡಿದ ನಿಮಾ ಉಪಾಧ್ಯಕ್ಷ ಡಾ.ಭೂಸ್ನೂರ್ಮತ್  ಆರ್.ಜಿ ಅವರು ಮಾತನಾಡಿ, 'ಕೋವಿಡ್ -19 ಸಾಂಕ್ರಾಮಿಕ ರೋಗದಲ್ಲಿ ನಿಮಾ ಸದಸ್ಯರು ತಮ್ಮ ವೈದ್ಯಕೀಯ ಅಭ್ಯಾಸವನ್ನು ಮುಂದುವರಿಸಲು ಮತ್ತು ಸಾರ್ವಜನಿಕರಿಗೆ ಸೇವೆ ಸಲ್ಲಿಸಲು ಯಾವುದೇ ಕಾನೂನು ತಡೆ ಇಲ್ಲ. ಸಮಗ್ರ ಔಷಧಿ ವ್ಯವಸ್ಥೆಯನ್ನು ಅಭ್ಯಾಸ ಮಾಡುವ ಕುರಿತ ನಿಮಾ ಅರ್ಜಿಯ ವಿಚಾರಣೆ  ಸುಪ್ರೀಂ ಕೋರ್ಟ್‌ನಲ್ಲಿದೆ. ಸರ್ಕಾರ ಸುಪ್ರೀಂ ಕೋರ್ಟ್ ನ ಮಧ್ಯಂತರ ತೀರ್ಪನ್ನು ಗೌರವಿಸಬೇಕು. ಹಠದ ಆದೇಶದ ಮಾಡಿ ನ್ಯಾಯಾಂಗ ನಿಂದನೆ ಮಾಡಬಾರದು ಎಂದು ಹೇಳಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 13 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಬೂಕರ್ ಪ್ರಶಸ್ತಿ ಮಹತ್ವ ತಿಳಿದಿದ್ದರೆ ನನ್ನನ್ನು ಟೀಕಿಸುತ್ತಿರಲಿಲ್ಲ, ಸಾಹಿತ್ಯ ಸಮ್ಮೇಳನದ ವಿಡಿಯೋ ತಿರುಚಲಾಗಿದೆ: ಬಾನು ಮುಷ್ತಾಕ್

ಡಿಕೆಶಿ RSS ಗೀತೆ ಹೇಳಿದ್ದೂ ರಾಹುಲ್‌ ಗಾಂಧಿಗೆ ತಲುಪಲಿ: ಶಾಕ್ ಕೊಟ್ಟ ಸತೀಶ್‌ ಜಾರಕಿಹೊಳಿ ಹೇಳಿಕೆ

ಧರ್ಮಸ್ಥಳ ಕೇಸ್: ತನಿಖೆ ಶೀಘ್ರಗತಿ ಪೂರ್ಣಗೊಳಿಸಲು SIT ಪ್ರಯತ್ನ; ಗೃಹ ಸಚಿವ ಡಾ.ಜಿ.ಪರಮೇಶ್ವರ್

SCROLL FOR NEXT