ಗೃಹ ಸಚಿವ ಬಸವರಾಜ್ ಬೊಮ್ಮಾಯಿ 
ರಾಜ್ಯ

ಚೆನ್ನಮ್ಮ ಮೂರ್ತಿ ವಿವಾದ: ತಡೆಯಾಜ್ಞೆ ತೆರವುಗೊಳಿಸಿದ ಧಾರವಾಡ ಪೀಠ- ಬಸವರಾಜ್ ಬೊಮ್ಮಾಯಿ

ಶಿಗ್ಗಾಂವಿ ನಗರದಲ್ಲಿ ವೀರ ಕಿತ್ತೂರು ರಾಣಿ ಚೆನ್ನಮ್ಮ ಮೂರ್ತಿಯನ್ನು ಸ್ಥಾಪಿಸಲು ಇದ್ದ ತಡೆಯಾಜ್ಞೆಯನ್ನು ಧಾರವಾಡದ ಉಚ್ಚ ನ್ಯಾಯಾಲಯ ಇಂದು ತೆರವುಗೊಳಿಸಿ ಮೂರ್ತಿ ಸ್ಥಾಪನೆಗೆ ದಾರಿ ಸುಗಮವಾಗಿಸಿದೆ‌ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ಬೆಂಗಳೂರು: ಶಿಗ್ಗಾಂವಿ ನಗರದಲ್ಲಿ ವೀರ ಕಿತ್ತೂರು ರಾಣಿ ಚೆನ್ನಮ್ಮ ಮೂರ್ತಿಯನ್ನು ಸ್ಥಾಪಿಸಲು ಇದ್ದ ತಡೆಯಾಜ್ಞೆಯನ್ನು ಧಾರವಾಡದ ಉಚ್ಚ ನ್ಯಾಯಾಲಯ ಇಂದು ತೆರವುಗೊಳಿಸಿ ಮೂರ್ತಿ ಸ್ಥಾಪನೆಗೆ ದಾರಿ ಸುಗಮವಾಗಿಸಿದೆ‌ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ಈ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಅವರು, ಈ ಬಗ್ಗೆ ಹಾವೇರಿಯ ಜಿಲ್ಲಾಧಿಕಾರಿಗಳೊಂದಿಗೆ ಮಾತನಾಡಿ ಧಾರವಾಡ ಉಚ್ಚನ್ಯಾಯಾಲಯದಿಂದ ಆದೇಶ ತಲುಪಿದ ತಕ್ಷಣ ಶಿಗ್ಗಾಂವಿ ನಗರದಲ್ಲಿ ಮೂರ್ತಿ ಸ್ಥಾಪಿಸಲು ಅನುಮತಿಗೆ ಕ್ರಮಕೈಗೊಳ್ಳಬೇಕೆಂದು ಸೂಚಿಸಿದ್ದೇನೆ ಎಂದಿದ್ದಾರೆ.

ಈಗಾಗಲೇ ಕಿತ್ತೂರು ರಾಣಿ ಚೆನ್ನಮ್ಮ ಮೂರ್ತಿ ತಯಾರಿಸಿ ಶಿಗ್ಗಾಂವಿ ನಗರದ ಹೊರವಲಯದಲ್ಲಿ ಇಡಲಾಗಿದ್ದು ಅನುಮತಿ ಆದೇಶ ಬಂದ ತಕ್ಷಣ ನಗರದಲ್ಲಿ ಮೂರ್ತಿ ಸ್ಥಾಪನೆಗೆ ಕೂಡಲೇ ಎಲ್ಲ ಕ್ರಮ ಜರಗಿಸಲಾಗುವುದು ಎಂದಿದ್ದಾರೆ.

ಕಿತ್ತೂರು ರಾಣಿ ಚೆನ್ನಮ್ಮ ಒಬ್ಬ ಸ್ವಾತಂತ್ರ್ಯ ಸೇನಾನಿ ಮಹಿಳೆಯಾಗಿದ್ದು ಸ್ವಾತಂತ್ರ್ಯಕ್ಕಾಗಿ ಪ್ರಾಣವನ್ನೇ ತ್ಯಾಗ ಮಾಡಿದ್ದಾರೆ. ಅವರ ಹೋರಾಟ ತ್ಯಾಗ ಇಂದಿನ ಯುವಜನಾಂಗಕ್ಕೆ ಸ್ಪೂರ್ತಿಯಾಗಿದೆ. ಆದುದರಿಂದ ಎಲ್ಲ ಜನಸಮೂಹ ಒಟ್ಟಾಗಿ ಇದರಲ್ಲಿ ಪಾಲ್ಗೊಳ್ಳಲು ವಿನಂತಿಸುತ್ತೇನೆ ಎಂದು ಅವರು ಮನವಿ ಮಾಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥ ಹಿಂಗ್ಯಾಕಂದ್ರು?

ಸಶಸ್ತ್ರ ಪಡೆಗಳು ಮುಂದಿನ ಭದ್ರತಾ ಸವಾಲುಗಳಿಗೆ ಸಿದ್ಧರಾಗಿರಬೇಕು: ರಾಜನಾಥ್ ಸಿಂಗ್

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

'ಡೆವಿಲ್‌' ಸಿನಿಮಾದ '‘ಇದ್ರೆ ನೆಮ್ಮದಿಯಾಗ್ ಇರ್ಬೇಕ್' ಹಾಡಿಗೆ ಭರ್ಜರಿ ಸ್ಟೆಪ್ ಹಾಕಿದ ವಿನೋದ್ ರಾಜ್! Video

SCROLL FOR NEXT