ವಿಧಾನಸಭೆ 
ರಾಜ್ಯ

ಐಸಿಯು ಉಪಕರಣ, ಪಿಪಿಇ ಕಿಟ್, ಎನ್-95 ಮಾಸ್ಕ್ ಖರೀದಿ ಸೇರಿ 4008.50 ಕೋಟಿ ರೂ. ಪೂರಕ ಅಂದಾಜು ಮಂಡನೆ

ಮಹಾಮಾರಿ ಕೋವಿಡ್ ಸೋಂಕು ನಿಯಂತ್ರಣ ಸಂಬಂಧ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಇಲಾಖೆಗೆ ಐಸಿಯು ಉಪಕರಣ, ಎನ್-೯೫, ಪಿಪಿಇ ಕಿಟ್ ಖರೀದಿಗೆ ಒಟ್ಟು ೧,೦೯೦.೬೧ ಕೋಟಿ ರೂ. ಹೆಚ್ಚುವರಿಯಾಗಿ ಒದಗಿಸುವುದು ಸೇರಿ ಒಟ್ಟು ೪೦೦೮.೫೦ ಕೋಟಿ ರೂಪಾಯಿಯನ್ನು ೨೦೨೦-೨೧ನೇ ಸಾಲಿನ ಪೂರಕ ಅಂದಾಜಿನಲ್ಲಿ (ಮೊದಲನೆ ಕಂತು) ಒದಗಿಸಲಾಗಿದೆ.

ಬೆಂಗಳೂರು: ಮಹಾಮಾರಿ ಕೋವಿಡ್ ಸೋಂಕು ನಿಯಂತ್ರಣ ಸಂಬಂಧ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಇಲಾಖೆಗೆ ಐಸಿಯು ಉಪಕರಣ, ಎನ್-೯೫, ಪಿಪಿಇ ಕಿಟ್ ಖರೀದಿಗೆ ಒಟ್ಟು ೧,೦೯೦.೬೧ ಕೋಟಿ ರೂ. ಹೆಚ್ಚುವರಿಯಾಗಿ ಒದಗಿಸುವುದು ಸೇರಿ ಒಟ್ಟು ೪೦೦೮.೫೦ ಕೋಟಿ ರೂಪಾಯಿಯನ್ನು ೨೦೨೦-೨೧ನೇ ಸಾಲಿನ ಪೂರಕ ಅಂದಾಜಿನಲ್ಲಿ (ಮೊದಲನೆ ಕಂತು)ಒದಗಿಸಲಾಗಿದೆ.

ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ವಿಧಾನ ಸಭೆಯಲ್ಲಿ ೨೦೨೦-೨೧ನೇ ಸಾಲಿನ ಪೂರಕ ಅಂದಾಜುಗಳ ಮೊದಲನೇ ಕಂತಿನ ಬೇಡಿಕೆಗಳನ್ನು ಮಂಡಿಸಿದರು.

ಪೂರಕ ಅಂದಾಜುಗಳಲ್ಲಿನ ಒಟ್ಟು ೪೦೦೮. ೫೦ ಕೋಟಿ ರು.ಗಳ ಪೈಕಿ ೨೭೮.೫೮ ಕೋಟಿ ರು.ಪ್ರಭೃತ ವೆಚ್ಚ ಮತ್ತು ೩,೭೨೯.೯೨ ಕೋಟಿ ರು. ಪರಿಷ್ಕತ ವೆಚ್ಚ ಸೇರಿದೆ.ಸಂಚಿತ ನಿಧಿಯಿಂದ ಹೊರ ಹೋಗುವ ನಿವ್ವಳ ಮೊತ್ತ ೩,೯೭೧.೫೮ ಕೋಟಿ ರು.ಗಳಾಗಿದೆ.ಇದರಲ್ಲಿ ೪೯೭.೮೭ ಕೋಟಿ ರು.ಕೇಂದ್ರ ಸಹಾಯಕ್ಕೆ ಸಂಬಂಧಪಟ್ಟಿವೆ ಎಂದು ಉಲ್ಲೇಖಿಸಲಾಗಿದೆ.  

ಕೋವಿಡ್ ಪ್ರಕರಣಕ್ಕೆ ಉಪಕರಣ,ಔಷಧಿ,ಕಿಟ್‌ಗಳು,ವೆಂಟಿಲೇಟರ್ ಖರೀದಿಗೆ ಆರೋಗ್ಯ ಇಲಾಖೆಗೆ ೧,೦೯೦.೬೧ ಕೋಟಿ ರೂ.,ವೈದ್ಯಕೀಯ ಶಿಕ್ಷಣ ಇಲಾಖೆ ಅಡಿಯ ವಿವಿಧ ವೈದ್ಯಕೀಯ ಸಂಸ್ಥೆಗಳಿಗೆ ಐಸಿಯು ಉಪಕರಣ, ಎನ್-೯೫ ಮಾಸ್ಕ್,ಪಿಪಿಇ ಕಿಟ್ ಖರೀದಿಗೆ ೧೩೬.೧೬ ಕೋಟಿ ರೂ. ನೀಡಲಾಗಿದೆ.

ಬೌರಿಂಗ್ ಮತ್ತು ಲೇಡಿ ಕರ್ಜನ್ ವೈದ್ಯಕೀಯ ಶಿಕ್ಷಣ ಸಂಸ್ಥೆಯಡಿ ಬರುವ ಬ್ರಾಡ್ ವೇ ಸೂಪರ್ ಸ್ಪೇಷಾಲಿಟಿ ಆಸ್ಪತ್ರೆ ನಿರ್ವಹಣೆಗೆ ತಾತ್ಕಾಲಿಕವಾಗಿ ಸೃಜಿಸಿರುವ ಹುದ್ದೆಗಳಿಗೆ ವೇತನ ಪಾವತಿಗೆ ೨.೩೮ ಕೋಟಿ ರೂ.ಹಾಗೂ ಕೋವಿಡ್ ನಿರ್ವಹಣೆಗೆ ಆರೋಗ್ಯ ಇಲಾಖೆ ಗುತ್ತಿಗೆ, ಹೊರ ಗುತ್ತಿಗೆ ವೈದ್ಯಾಧಿಕಾರಿಗಳಿಗೆ ವೇತನ ನೀಡಲು ೧೨.೯೦ ಕೋಟಿ ರೂ.ಗಳನ್ನು ಒದಗಿಸಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT