ಸಂಗ್ರಹ ಚಿತ್ರ 
ರಾಜ್ಯ

ವಿವಾದಿತ ಭೂಸುಧಾರಣೆಗಳ ತಿದ್ದುಪಡಿ ವಿಧೇಯಕ ಮಂಡನೆ: ಸರ್ಕಾರದ ವಿರುದ್ಧ ಹರಿಹಾಯ್ದ ವಿಪಕ್ಷಗಳು

ರೈತರ ಮತ್ತು ಪ್ರತಿಪಕ್ಷಗಳ ತೀವ್ರ ವಿರೋಧಕ್ಕೆ ಎಡೆಮಾಡಿಕೊಟ್ಟಿರುವ ಕೃಷಿಕರಲ್ಲದವರು ಕೃಷಿ ಜಮೀನು ಖರೀದಿಸುವ ವಿವಾದಿಕ ಕರ್ನಾಟಕ ಭೂ ಸುಧಾರಣೆಗಳ (ಎರಡನೇ ತಿದ್ದುಪಡಿ)ವಿಧೇಯಕವನ್ನು ಸರ್ಕಾರ ಸದನದಲ್ಲಿ ಮಂಡನೆ ಮಂಡಿಸಿತು. 

ಬೆಂಗಳೂರು: ರೈತರ ಮತ್ತು ಪ್ರತಿಪಕ್ಷಗಳ ತೀವ್ರ ವಿರೋಧಕ್ಕೆ ಎಡೆಮಾಡಿಕೊಟ್ಟಿರುವ ಕೃಷಿಕರಲ್ಲದವರು ಕೃಷಿ ಜಮೀನು ಖರೀದಿಸುವ ವಿವಾದಿಕ ಕರ್ನಾಟಕ ಭೂ ಸುಧಾರಣೆಗಳ (ಎರಡನೇ ತಿದ್ದುಪಡಿ)ವಿಧೇಯಕವನ್ನು ಸರ್ಕಾರ ಸದನದಲ್ಲಿ ಮಂಡನೆ ಮಂಡಿಸಿತು. 

ಕಂದಾಯ ಸಚಿವ ಆರ್.ಅಶೋಕ್ ಮಂಗಳವಾರ ವಿಧೇಯಕವನ್ನು ಮಂಡಿಸಿದರು. ಕೃಷಿ ಚಟುವಟಿಕೆಯಲ್ಲಿ ತೊಡಗಿಸಿಕೊಳ್ಳುವ ಆಸಕ್ತರಿಗೆ ಅನುಕೂಲ ಮಾಡಿಕೊಡುವ ಉದ್ದೇಶದಿಂದ 1974ರ ಕರ್ನಾಟಕ ಭೂ ಸುಧಾರಣಾ ಕಾಯ್ದೆಗೆ ತಿದ್ದುಪಡಿ ಮಾಡುವ ಮಹತ್ವದ ತೀರ್ಮಾನ ಕೈಗೊಂಡಿದೆ. ಕೃಷಿಯೇತರರು ಕೃಷಿ ಭೂಮಿ ಖರೀದಿಸಲು ಅನುವು ಮಾಡಿಕೊಡ್ಡಿದೆ ಎಂದರು. 

2020ನೇ ಸಾಲಿನ ಕರ್ನಾಟಕ ಭೂ ಸುಧಾರಣೆಗಳ ವಿಧೇಯಕವು 1961ರ ಅಧಿನಿಯಮ 79ಎ, 79ಬಿ, 79ಸಿ ಪ್ರಕರಣಗಳನ್ನು ಬಿಟ್ಟುಬಿಡುವ ಪ್ರಸ್ತಾಪ ಮಾಡಲಾಗಿದೆ. ಎ ವರ್ಗದ ನೀರಾವರಿ ಭೂಮಿಯು ಕೃಷಿ ಉದ್ದೇಶಕ್ಕೆ ಮಾತ್ರ ಮಾರಾಟ ಮಾಡುವ ಪ್ರಸ್ತಾಪ ಮಾಡಲಾಗಿದೆ. ಕೃಷಿ ಭೂಮಿಯ ಖರೀದಿಗಾಗಿ ಇರುವ ನಿರ್ಬಂಧವನ್ನು ತೆಗೆದುಹಾಕಲಾಗಿದೆ. ಕೃಷಿ ಉದ್ದೇಶಕ್ಕಾಗಿ ಮಾತ್ರ ಬಳಸುವುದರ ಮೇಲಿನ ನಿರ್ಬಂಧವನ್ನು ತೆಗೆದುಹಾಕಲಾಗುತ್ತಿದೆ ಎಂದು ತಿಳಿಸಿದರು. 

ಈ ವೇಳೆ ಇದಕ್ಕೆ ವಿರೋಧ ವ್ಯಕ್ತಪಡಿಸಿದ ವಿರೋಧ ಪಕ್ಷಗಳ ನಾಯಕರು, ಮಸೂದೆ ಕುರಿತು ಮತ್ತೊಂದು ದಿನ ಸುದೀರ್ಘ ಚರ್ಚೆ ನಡೆಸುವ ಅಗತ್ಯವಿದೆ ಎಂದು ಆಗ್ರಹಿಸಿದರು.

ಮಂಡನೆಯಾದ ಇತರ ಮಸೂದೆಗಳು ಇಂತಿವೆ...
ಕರ್ನಾಟಕ ಪಟ್ಟಣ ಮತ್ತು ಗ್ರಾಮಾಂತರ ಯೋಜನೆ ಮಸೂದೆ, ಕರ್ನಾಟಕ ರಾಜ್ಯ ಸಿವಿಲ್ ಸೇವೆಗಳ ಮಸೂದೆ, ಕರ್ನಾಟಕ ಭಿಕ್ಷಾಟನೆ ನಿಷೇಧ (ತಿದ್ದುಪಡಿ) ಮಸೂದೆ,  ಕನ್ನಡ ವಿಶ್ವವಿದ್ಯಾಲಯ ಮತ್ತು ಇತರ ಕೆಲವು ಕಾನೂನುಗಳ (ತಿದ್ದುಪಡಿ) ಮಸೂದೆ,  ನಿವೃತ್ತಿ ವೇತನಗಳು ಮತ್ತು ಭತ್ಯೆಗಳು ಹಾಗೂ ಇತರ ಕಾನೂನು (ತಿದ್ದುಪಡಿ) ಮಸೂದೆ, 2020 ನೇ ಸಾಲಿನ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯ(ತಿದ್ದುಪಡಿ) ಮಸೂದೆ, 2020ನೇ ಸಾಲಿನ ಕರ್ನಾಟಕ ವಿಧಾನ ಮಂಡಲ ಸಂಬಳಗಳು ಮಸೂದೆ, 2020ನೇ ಸಾಲಿನ ಕರ್ನಾಟಕ ಕೈಗಾರಿಕೆಗಳ (ಸೌಲಭ್ಯ) (ತಿದ್ದುಪಡಿ) ಮಸೂದೆ, 2020ನೇ ಸಾಲಿನ ಕರ್ನಾಟಕ ಪೌರಸಭೆಗಳ (ತಿದ್ದುಪಡಿ) ಮಸೂದೆ, ಖಾಸಗಿ ವೈದ್ಯಕೀಯ ಸಂಸ್ಥೆಗಳ(ತಿದ್ದುಪಡಿ) ಮಸೂದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಪ್ಯಾಕ್ಸ್ ಸಿಲಿಕಾ ಅಲೈಯನ್ಸ್‌ನ ಸದಸ್ಯ ದೇಶವಾಗಲಿದೆ; ಅಮೆರಿಕಕ್ಕೆ ಭಾರತಕ್ಕಿಂತ ಮುಖ್ಯ ದೇಶ ಮತ್ತೊಂದಿಲ್ಲ: ಸೆರ್ಗಿಯೊ ಗೋರ್

ಬಿಗ್ ಬಾಸ್ 12 ಫಿನಾಲೆ ಹೊತ್ತಲ್ಲಿ ಕಿಚ್ಚ ಸುದೀಪ್‌ಗೆ ಸಂಕಷ್ಟ ತಂದ 'ರಣಹದ್ದು'!

CM ಕುರ್ಚಿ ಗುದ್ದಾಟ: ಅಗತ್ಯವಿದ್ದಾಗ ಸಿದ್ದರಾಮಯ್ಯ, ಶಿವಕುಮಾರ್‌ರನ್ನು ಮಾತುಕತೆಗೆ ಕರೆಯಲಾಗುವುದು; ಮಲ್ಲಿಕಾರ್ಜುನ ಖರ್ಗೆ

ಉತ್ತರ ಪ್ರದೇಶ: "ಆಕ್ಷೇಪಾರ್ಹ" ಸ್ಥಿತಿಯಲ್ಲಿದ್ದ ಪ್ರೇಮಿಗಳನ್ನು ಹೊಡೆದು ಕೊಂದ ಕುಟುಂಬಸ್ಥರು!

ಮಹಾತ್ಮ ಗಾಂಧಿ ಸಂದೇಶಗಳು ಹಿಂದೆಂದಿಗಿಂತಲೂ ಈಗ ಹೆಚ್ಚು ಪ್ರಸ್ತುತ: ಸಬರಮತಿ ಆಶ್ರಮದಲ್ಲಿ ಜರ್ಮನ್ ಚಾನ್ಸೆಲರ್!

SCROLL FOR NEXT