ನಾರಾಯಣರಾವ್ 
ರಾಜ್ಯ

ಕೊರೋನಾ ಸೋಂಕು: ಬಸವಕಲ್ಯಾಣ ಕ್ಷೇತ್ರದ ಶಾಸಕ ನಾರಾಯಣರಾವ್ ಸ್ಥಿತಿ ಗಂಭೀರ

ಕೊರೋನಾ ಸೋಂಕು ತಗುಲಿರುವ ಬೀದರ್ ಜಿಲ್ಲೆಯ ಬಸವಕಲ್ಯಾಣ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕ ನಾರಾಯಣರಾವ್ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂದು ಹೇಳಲಾಗುತ್ತಿದೆ. 

ಬೆಂಗಳೂರು: ಕೊರೋನಾ ಸೋಂಕು ತಗುಲಿರುವ ಬೀದರ್ ಜಿಲ್ಲೆಯ ಬಸವಕಲ್ಯಾಣ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕ ನಾರಾಯಣರಾವ್ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂದು ಹೇಳಲಾಗುತ್ತಿದೆ. 

ಕೊರೋನಾ ಸೋಂಕು ಹಿನ್ನೆಲೆಯಲ್ಲಿ ನಾರಾಯಣರಾವ್ ಅವರು ನಗರದ ಮಣಿಪಾಲ್ ಆಸ್ಪತ್ರೆಯಲ್ಲಿ ಕಳೆದ ಒಂದು ತಿಂಗಳಿಂದ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದೀಗ ನಾರಾಯಣರಾವ್ ಅವರು ಬಹುಅಂಗಾಂಗ ವೈಫಲ್ಯದಿಂದ ಬಳಲುತ್ತಿದ್ದು, ಆರೋಗ್ಯ ಸ್ಥಿತಿ ಚಿಂತಾಜನಕವಾಗಿದೆ ಎಂದು ವರದಿಗಳು ತಿಳಿಸಿವೆ. 

ನಾರಾಯಣರಾವ್ ಅವರು ಬಹುಅಂಗಾಂಗ ವೈಫಲ್ಯದಿಂದ ಬಳಲುತ್ತಿದ್ದು, ವೈದ್ಯರ ತಂಡ ಅವರ ಆರೋಗ್ಯದ ಮೇಲೆ ಮೇಲ್ವಿಚಾರಣೆ ಮಾಡುತ್ತಿದೆ ಎಂದು ಮಣಿಪಾಲ್ ಆಸ್ಪತ್ರೆಯ ನಿರ್ದೇಶಕ ಮನೀಶ್ ರೈ ಅವರು ಹೇಳಿದ್ದಾರೆ. 

ನಾರಾಯಣರಾವ್ ಅವರು ಕಂದಾಯ ಸಚಿವ ಆರ್.ಅಶೋಕ್ ಅವರೊಂದಿಗೆ ಕೆಲ ವಾರಗಳ ಹಿಂದೆ ಸಭೆಯಲ್ಲಿ ಪಾಲ್ಗೊಂಡಿದ್ದರು. ಸಭೆ ಬಳಿಕ ಜ್ವರದಿಂದ ಬಳಲುತ್ತಿದ್ದರು. 

ಬೀದರ್ ಜಿಲ್ಲೆಯ ಬಸವಕಲ್ಯಾಣದ ಶಾಸಕರಾದ ರಾವ್ ಅವರು 2018 ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯ ಮಲ್ಲಿಕಾರ್ಜುನ್ ಖೂಬಾ ಮತ್ತು ಜೆಡಿಎಸ್‌ನ ಪಿಜಿಆರ್ ಸಿಂಧಿಯಾ ಅವರನ್ನು ಸೋಲಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೀಟ್​ ವೇವ್​ ಅಬ್ಬರ: ಇಡೀ ದೇಶವನ್ನೇ ಸುಡುತ್ತಿದೆ ಬೆಂಕಿ ಬಿಸಿಲು; ಜಗತ್ತಿನ 100 ಹಾಟ್ ನಗರಗಳ ಪೈಕಿ ಭಾರತದಲ್ಲೇ 98!

ಟ್ರಂಪ್ ಆಡಳಿತದಲ್ಲಿ ಮತ್ತೊಂದು ವಿಕೆಟ್ ಪತನ?: FBI ಮುಖ್ಯಸ್ಥ ಕಾಶ್ ಪಟೇಲ್ ವಜಾ ಸಾಧ್ಯತೆ

IPL 2026: LSG ವಿರುದ್ಧ ಸೂಪರ್​ ಓವರ್​ನಲ್ಲಿ ಗೆದ್ದು ಬೀಗಿದ KKR

IPL 2026: RCBಗೆ ದೊಡ್ಡ ಆಘಾತ; ಡೆಲ್ಲಿ ವಿರುದ್ಧದ ಪಂದ್ಯಕ್ಕೂ ಫಿಲ್ ಸಾಲ್ಟ್​ ಅಲಭ್ಯ

ಹರ್ಭಜನ್ ಸಿಂಗ್‌ಗೆ ಸಂಕಷ್ಟ: ಭದ್ರತೆ ಹಿಂಪಡೆದ ಪಂಜಾಬ್ ಸರ್ಕಾರ; ಕೇಂದ್ರದಿಂದ CRPF ಭದ್ರತೆ ನಿಯೋಜನೆ!

SCROLL FOR NEXT