ಸುರೇಶ್ ಅಂಗಡಿ 
ರಾಜ್ಯ

ಪಾರ್ಥೀವ ಶರೀರ ತರಲು ನಿಯಮ ಅಡ್ಡಿ: ದೆಹಲಿಯಲ್ಲಿಯೇ ಸುರೇಶ್ ಅಂಗಡಿ ಅಂತ್ಯಕ್ರಿಯೆ

ಕೋವಿಡ್‌ನಿಂದ ನವದೆಹಲಿಯ ಏಮ್ಸ್‌ ಅಸ್ಪತ್ರೆಯಲ್ಲಿ ಬುಧವಾರ ನಿಧನರಾದ ಸಂಸದ, ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ ಅಂಗಡಿ ಅವರ ಅಂತ್ಯಕ್ರಿಯೆಯನ್ನು ದೆಹಲಿಯಲ್ಲೇ ನಡೆಸಲು ನಿರ್ಧರಿಸಲಾಗಿದೆ

ಬೆಳಗಾವಿ: ಕೋವಿಡ್‌ನಿಂದ ನವದೆಹಲಿಯ ಏಮ್ಸ್‌ ಅಸ್ಪತ್ರೆಯಲ್ಲಿ ಬುಧವಾರ ನಿಧನರಾದ ಸಂಸದ, ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ ಅಂಗಡಿ ಅವರ ಅಂತ್ಯಕ್ರಿಯೆಯನ್ನು ದೆಹಲಿಯಲ್ಲೇ ನಡೆಸಲು ನಿರ್ಧರಿಸಲಾಗಿದೆ.

ಹಲಿಯಲ್ಲಿ ಮೃತರಾಗಿರುವ ಸಚಿವರ ದೇಹವನ್ನು  ಬೆಳಗಾವಿಗೆ ತರಲು ಈಗ ಕೊರೋನಾ ನಿಯಮಗಳು ಅಡ್ಡಿಯಾಗಿದೆ. ಸೋಂಕಿತರು ಎಲ್ಲಿ ಸಾವನ್ನಪ್ಪುತ್ತಾರೋ ಅಲ್ಲಿಯೇ ಅಂತ್ಯ ಸಂಸ್ಕಾರ ಮಾಡಬೇಕು ಎಂಬ ನಿಯಮವಿರುವ ಹಿನ್ನಲೆ ಅವರ ಶರೀರವನ್ನು ಹುಟ್ಟೂರಿಗೆ ಸಾಗಿಸಲು ಅಡ್ಡಿಯಾಗಿದೆ

ರಾಜ್ಯ ಸರ್ಕಾರದಿಂದಲೂ ಪ್ರಕ್ರಿಯೆ ನಡೆಸಲಾಗಿತ್ತು. ಆದರೆ, ಕೋವಿಡ್ ನಿಯಮಾವಳಿ ಪ್ರಕಾರ ಪಾರ್ಥಿವ ಶರೀರವನ್ನು ಬೆಳಗಾವಿಗೆ ತರಲು ಅವಕಾಶ ಆಗುತ್ತಿಲ್ಲ ಎಂದು ತಿಳಿದುಬಂದಿದೆ.

ಪಾರ್ಥಿವ ಶರೀರವನ್ನು ಕೊಂಡೊಯ್ಯವುದಕ್ಕೆ ಏಮ್ಸ್​ ವೈದ್ಯರು ಸಾಧ್ಯವಿಲ್ಲ ಎಂದಿದ್ದಾರೆ. ಅಲ್ಲದೇ ಈ ಕುರಿತು ಪಿಯೂಷ್​ ಗೋಯೆಲ್​ ಕೂಡ ನಿಬಂಧನೆ ಸಡಿಲಿಸಲು ಸಾಧ್ಯವಾಗುತ್ತಿಲ್ಲ ಎಂಬ ಅಸಹಾಯಕತೆ ವ್ಯಕ್ತಪಡಿಸಿದ್ದಾರೆ. ಈ ಹಿನ್ನಲೆ ಈ ಕುರಿತು ಕುಟುಂಬ ವರ್ಗ ಸಚಿವರೊಂದಿಗೆ ಚರ್ಚೆ ನಡೆಸಿದ್ದಾರೆ. ಆದರೆ, ಇದು ಫಲಪ್ರದವಾಗದ ಹಿನ್ನಲೆ ಅವರ ಅಂತ್ಯಸಂಸ್ಕಾರ ದೆಹಲಿಯಲ್ಲೇ ನಡೆಯಲಿದೆ. ದೆಹಲಿ ಲೋಧಿ ಎಸ್ಟೇಟ್​ನಲ್ಲಿ ಚಿತಾಗಾರದಲ್ಲಿ ಅಂತ್ಯ ಸಂಸ್ಕಾರ ನಡೆಯಲಿದ್ದು, ಸಂಬಂಧಿಕರಿಗೆ ದೆಹಲಿಗೆ ಬರಲು ಸೂಚಿಸಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ'.. 'ಅಧಿಕಾರದಲ್ಲಿ ಉಳಿಯಲು DK Shivakumar ಕ್ಷಮೆಯಾಚನೆ': BJP-JDS ಟೀಕಾ ಪ್ರಹಾರ!

RSS ಗೀತೆ ಪಠಿಸಿದ ಡಿ.ಕೆ ಶಿವಕುಮಾರ್: ನಮಗೆ ಹೈಕಮಾಂಡ್ ಇದೆ, ನಾನು ಪ್ರತಿಕ್ರಿಯಿಸುವುದಿಲ್ಲ; ಜಿ ಪರಮೇಶ್ವರ

Indian Navy ಗೆ ಮತ್ತಷ್ಟು ಬಲ: INS Udaygiri, INS Himgiri ಯುದ್ಧನೌಕೆಗಳು ಸೇರ್ಪಡೆ! Video

ಜಮ್ಮುವಿನಾದ್ಯಂತ ಭಾರೀ ಮಳೆ: ಪ್ರವಾಹ, ಭೂಕುಸಿತದಿಂದ ಐವರು ಸಾವು; ಕೊಚ್ಚಿ ಹೋದ ಸೇತುವೆ; Video

Indre Nemdiyag Irbek: ಯೂ ಟ್ಯೂಬ್ ನಲ್ಲಿ ಧೂಳೆಬ್ಬಿಸುತ್ತಿರುವಂತೆ ವಿವಾದಕ್ಕೆ ಗುರಿಯಾದ Devil ಸಾಂಗ್! ಟ್ಯೂನ್ ಕದ್ದ ಆರೋಪ!

SCROLL FOR NEXT