ಸುರೇಶ್ ಅಂಗಡಿ 
ರಾಜ್ಯ

ಪಾರ್ಥೀವ ಶರೀರ ತರಲು ನಿಯಮ ಅಡ್ಡಿ: ದೆಹಲಿಯಲ್ಲಿಯೇ ಸುರೇಶ್ ಅಂಗಡಿ ಅಂತ್ಯಕ್ರಿಯೆ

ಕೋವಿಡ್‌ನಿಂದ ನವದೆಹಲಿಯ ಏಮ್ಸ್‌ ಅಸ್ಪತ್ರೆಯಲ್ಲಿ ಬುಧವಾರ ನಿಧನರಾದ ಸಂಸದ, ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ ಅಂಗಡಿ ಅವರ ಅಂತ್ಯಕ್ರಿಯೆಯನ್ನು ದೆಹಲಿಯಲ್ಲೇ ನಡೆಸಲು ನಿರ್ಧರಿಸಲಾಗಿದೆ

ಬೆಳಗಾವಿ: ಕೋವಿಡ್‌ನಿಂದ ನವದೆಹಲಿಯ ಏಮ್ಸ್‌ ಅಸ್ಪತ್ರೆಯಲ್ಲಿ ಬುಧವಾರ ನಿಧನರಾದ ಸಂಸದ, ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ ಅಂಗಡಿ ಅವರ ಅಂತ್ಯಕ್ರಿಯೆಯನ್ನು ದೆಹಲಿಯಲ್ಲೇ ನಡೆಸಲು ನಿರ್ಧರಿಸಲಾಗಿದೆ.

ಹಲಿಯಲ್ಲಿ ಮೃತರಾಗಿರುವ ಸಚಿವರ ದೇಹವನ್ನು  ಬೆಳಗಾವಿಗೆ ತರಲು ಈಗ ಕೊರೋನಾ ನಿಯಮಗಳು ಅಡ್ಡಿಯಾಗಿದೆ. ಸೋಂಕಿತರು ಎಲ್ಲಿ ಸಾವನ್ನಪ್ಪುತ್ತಾರೋ ಅಲ್ಲಿಯೇ ಅಂತ್ಯ ಸಂಸ್ಕಾರ ಮಾಡಬೇಕು ಎಂಬ ನಿಯಮವಿರುವ ಹಿನ್ನಲೆ ಅವರ ಶರೀರವನ್ನು ಹುಟ್ಟೂರಿಗೆ ಸಾಗಿಸಲು ಅಡ್ಡಿಯಾಗಿದೆ

ರಾಜ್ಯ ಸರ್ಕಾರದಿಂದಲೂ ಪ್ರಕ್ರಿಯೆ ನಡೆಸಲಾಗಿತ್ತು. ಆದರೆ, ಕೋವಿಡ್ ನಿಯಮಾವಳಿ ಪ್ರಕಾರ ಪಾರ್ಥಿವ ಶರೀರವನ್ನು ಬೆಳಗಾವಿಗೆ ತರಲು ಅವಕಾಶ ಆಗುತ್ತಿಲ್ಲ ಎಂದು ತಿಳಿದುಬಂದಿದೆ.

ಪಾರ್ಥಿವ ಶರೀರವನ್ನು ಕೊಂಡೊಯ್ಯವುದಕ್ಕೆ ಏಮ್ಸ್​ ವೈದ್ಯರು ಸಾಧ್ಯವಿಲ್ಲ ಎಂದಿದ್ದಾರೆ. ಅಲ್ಲದೇ ಈ ಕುರಿತು ಪಿಯೂಷ್​ ಗೋಯೆಲ್​ ಕೂಡ ನಿಬಂಧನೆ ಸಡಿಲಿಸಲು ಸಾಧ್ಯವಾಗುತ್ತಿಲ್ಲ ಎಂಬ ಅಸಹಾಯಕತೆ ವ್ಯಕ್ತಪಡಿಸಿದ್ದಾರೆ. ಈ ಹಿನ್ನಲೆ ಈ ಕುರಿತು ಕುಟುಂಬ ವರ್ಗ ಸಚಿವರೊಂದಿಗೆ ಚರ್ಚೆ ನಡೆಸಿದ್ದಾರೆ. ಆದರೆ, ಇದು ಫಲಪ್ರದವಾಗದ ಹಿನ್ನಲೆ ಅವರ ಅಂತ್ಯಸಂಸ್ಕಾರ ದೆಹಲಿಯಲ್ಲೇ ನಡೆಯಲಿದೆ. ದೆಹಲಿ ಲೋಧಿ ಎಸ್ಟೇಟ್​ನಲ್ಲಿ ಚಿತಾಗಾರದಲ್ಲಿ ಅಂತ್ಯ ಸಂಸ್ಕಾರ ನಡೆಯಲಿದ್ದು, ಸಂಬಂಧಿಕರಿಗೆ ದೆಹಲಿಗೆ ಬರಲು ಸೂಚಿಸಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಧಮ್ ಇದ್ರೆ ನನ್ನ ಕೊಲ್ಲಿ.. ಕನಿಷ್ಠ 1 ಸಾವಿರ ಕ್ಷಿಪಣಿಗಳು ಲೋಡ್ ಆಗಿ ನಿಂತಿವೆ': ಇರಾನ್ ಗೆ Donald Trump ಎಚ್ಚರಿಕೆ

ಭಾರತ–ನ್ಯೂಜಿಲ್ಯಾಂಡ್ ಸಂಬಂಧ ಕಾರ್ಯತಂತ್ರ ಪಾಲುದಾರಿಕೆಗೆ ಉನ್ನತಿ; 5 ವರ್ಷಗಳಲ್ಲಿ 35,000 ಕೋಟಿ ರೂ. ವ್ಯಾಪಾರದ ಗುರಿ

ಕದನ ವಿರಾಮ ಅಂತ್ಯ; ಹೊಸ ಮಾತುಕತೆಗೆ ಡೊನಾಲ್ಡ್ ಟ್ರಂಪ್ ಒಪ್ಪಿಗೆ – 'ಶರಣಾಗುವುದಿಲ್ಲ' ಎಂದ ಇರಾನ್

ಬೆಂಗಳೂರು: ತಾಯಿ, ಅಜ್ಜಿ, ಮಾವನನ್ನು ಕೊಂದು ಆರೋಪಿ ಆತ್ಮಹತ್ಯೆ!

ಪ್ರಿಯಾಂಕ್ ಖರ್ಗೆ RSS ಸಚಿವರು- ಪರಮೇಶ್ವರ್ 'ಗೊತ್ತಿಲ್ಲ' ಸಚಿವರು: ಶೋಭಾ ಕರಂದ್ಲಾಜೆ