ಬಿಸಿ ಪಾಟೀಲ್ 
ರಾಜ್ಯ

ರೈತರ ಹಿತದೃಷ್ಟಿಯಿಂದ ಕೃಷಿ ಕ್ಷೇತ್ರ ಸುಧಾರಣೆ ಮಾಡಲಾಗಿದೆ: ಸಚಿವ ಬಿ.ಸಿ. ಪಾಟೀಲ್

ರೈತರ ಹಿತದೃಷ್ಟಿಯಿಂದ ಭೂ ಸುಧಾರಣಾ ತಿದ್ದುಪಡಿ ಹಾಗೂ ಎಪಿಎಂಸಿ ಮಸೂದೆಗಳನ್ನು ಜಾರಿಗೆ ತರಲಾಗಿದ್ದು, ಹೀಗಾಗಿ ಈ ಸಂಬಂಧ ಸರ್ಕಾರ ಯಾವುದೇ ಬದಲಾವಣೆಗಳನ್ನೂ ಮಾಡುವುದಿಲ್ಲ ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ಅವರು ಶುಕ್ರವಾರ ಹೇಳಿದ್ದಾರೆ. 

ಬೆಂಗಳೂರು: ರೈತರ ಹಿತದೃಷ್ಟಿಯಿಂದ ಭೂ ಸುಧಾರಣಾ ತಿದ್ದುಪಡಿ ಹಾಗೂ ಎಪಿಎಂಸಿ ಮಸೂದೆಗಳನ್ನು ಜಾರಿಗೆ ತರಲಾಗಿದ್ದು, ಹೀಗಾಗಿ ಈ ಸಂಬಂಧ ಸರ್ಕಾರ ಯಾವುದೇ ಬದಲಾವಣೆಗಳನ್ನೂ ಮಾಡುವುದಿಲ್ಲ ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ಅವರು ಶುಕ್ರವಾರ ಹೇಳಿದ್ದಾರೆ. 

ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ಭೂ ಸುಧಾರಣಾ ತಿದ್ದುಪಡಿ ಹಾಗೂ ಎಪಿಎಂಸಿ ಮಸೂದೆಗಳಲ್ಲಿ ಬದಲಾವಣೆ ಮಾಡುವ ಯಾವುದೇ ಪ್ರಶ್ನೆಗಳೂ ಏಳುವುದಿಲ್ಲ. ರೈತರ ಹಿತದೃಷ್ಟಿಯಿಂದ ಸರ್ಕಾರ ಈ ಕ್ರಮಗಳನ್ನು ಕೈಗೊಂಡಿದೆ. ಮಸೂದೆಯಿಂದ ರೈತರಿಗೆ ಲಾಭವಾಗಲಿದೆ ಎಂದು ಹೇಳಿದ್ದಾರೆ. 

ರೈತರ ಸಂಘಟನೆಗಳು ಮಸೂದೆಗೆ ಬೆಂಬಲ ವ್ಯಕ್ತಪಡಿಸಬೇಕು. ಪ್ರಸ್ತುತ ಮಸೂದೆ ವಿರುದ್ಧ ಪ್ರತಿಭಟನೆ ನಡೆಸುತ್ತಿರುವ ಸಂಘಟನೆಗಳು, ಪ್ರತಿಭಟನೆಯಲ್ಲಿ ಭಾಗಿಯಾಗಿರುವವರು ರೈತರೇ ಅಲ್ಲ. ರಾಜ್ಯದ 30 ಜಿಲ್ಲೆಗಳಿಗೆ ಭೇಟಿ ನೀಡಲಾಗಿತ್ತು, ಮಸೂದೆ ಕುರಿತು ಮಾಹಿತಿ ನೀಡಿದ್ದೇವೆ. ಈ ವೇಳೆ ರೈತರು ಮಸೂದೆಗೆ ಒಪ್ಪಿಗೆ ನೀಡಿದ್ದಾರೆ. ರಾಜ್ಯದಲ್ಲಿ ಪ್ರತಿಭಟನೆ ನಡೆಸುತ್ತಿರುವ ಸಂಘಟನೆಗಳು ರೈತ ಸಂಘಟನೆಗಳಲ್ಲ. ರೈತರು ಮಸೂದೆಗೆ ಬೆಂಬಲ ನೀಡುವಂತೆ ಮೂಲಕ ಮನವಿ ಮಾಡಿಕೊಳ್ಳುತ್ತಿದ್ದೇನೆಂದು ತಿಳಿಸಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT