ಬಿಸಿ ಪಾಟೀಲ್ 
ರಾಜ್ಯ

ರೈತರ ಹಿತದೃಷ್ಟಿಯಿಂದ ಕೃಷಿ ಕ್ಷೇತ್ರ ಸುಧಾರಣೆ ಮಾಡಲಾಗಿದೆ: ಸಚಿವ ಬಿ.ಸಿ. ಪಾಟೀಲ್

ರೈತರ ಹಿತದೃಷ್ಟಿಯಿಂದ ಭೂ ಸುಧಾರಣಾ ತಿದ್ದುಪಡಿ ಹಾಗೂ ಎಪಿಎಂಸಿ ಮಸೂದೆಗಳನ್ನು ಜಾರಿಗೆ ತರಲಾಗಿದ್ದು, ಹೀಗಾಗಿ ಈ ಸಂಬಂಧ ಸರ್ಕಾರ ಯಾವುದೇ ಬದಲಾವಣೆಗಳನ್ನೂ ಮಾಡುವುದಿಲ್ಲ ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ಅವರು ಶುಕ್ರವಾರ ಹೇಳಿದ್ದಾರೆ. 

ಬೆಂಗಳೂರು: ರೈತರ ಹಿತದೃಷ್ಟಿಯಿಂದ ಭೂ ಸುಧಾರಣಾ ತಿದ್ದುಪಡಿ ಹಾಗೂ ಎಪಿಎಂಸಿ ಮಸೂದೆಗಳನ್ನು ಜಾರಿಗೆ ತರಲಾಗಿದ್ದು, ಹೀಗಾಗಿ ಈ ಸಂಬಂಧ ಸರ್ಕಾರ ಯಾವುದೇ ಬದಲಾವಣೆಗಳನ್ನೂ ಮಾಡುವುದಿಲ್ಲ ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ಅವರು ಶುಕ್ರವಾರ ಹೇಳಿದ್ದಾರೆ. 

ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ಭೂ ಸುಧಾರಣಾ ತಿದ್ದುಪಡಿ ಹಾಗೂ ಎಪಿಎಂಸಿ ಮಸೂದೆಗಳಲ್ಲಿ ಬದಲಾವಣೆ ಮಾಡುವ ಯಾವುದೇ ಪ್ರಶ್ನೆಗಳೂ ಏಳುವುದಿಲ್ಲ. ರೈತರ ಹಿತದೃಷ್ಟಿಯಿಂದ ಸರ್ಕಾರ ಈ ಕ್ರಮಗಳನ್ನು ಕೈಗೊಂಡಿದೆ. ಮಸೂದೆಯಿಂದ ರೈತರಿಗೆ ಲಾಭವಾಗಲಿದೆ ಎಂದು ಹೇಳಿದ್ದಾರೆ. 

ರೈತರ ಸಂಘಟನೆಗಳು ಮಸೂದೆಗೆ ಬೆಂಬಲ ವ್ಯಕ್ತಪಡಿಸಬೇಕು. ಪ್ರಸ್ತುತ ಮಸೂದೆ ವಿರುದ್ಧ ಪ್ರತಿಭಟನೆ ನಡೆಸುತ್ತಿರುವ ಸಂಘಟನೆಗಳು, ಪ್ರತಿಭಟನೆಯಲ್ಲಿ ಭಾಗಿಯಾಗಿರುವವರು ರೈತರೇ ಅಲ್ಲ. ರಾಜ್ಯದ 30 ಜಿಲ್ಲೆಗಳಿಗೆ ಭೇಟಿ ನೀಡಲಾಗಿತ್ತು, ಮಸೂದೆ ಕುರಿತು ಮಾಹಿತಿ ನೀಡಿದ್ದೇವೆ. ಈ ವೇಳೆ ರೈತರು ಮಸೂದೆಗೆ ಒಪ್ಪಿಗೆ ನೀಡಿದ್ದಾರೆ. ರಾಜ್ಯದಲ್ಲಿ ಪ್ರತಿಭಟನೆ ನಡೆಸುತ್ತಿರುವ ಸಂಘಟನೆಗಳು ರೈತ ಸಂಘಟನೆಗಳಲ್ಲ. ರೈತರು ಮಸೂದೆಗೆ ಬೆಂಬಲ ನೀಡುವಂತೆ ಮೂಲಕ ಮನವಿ ಮಾಡಿಕೊಳ್ಳುತ್ತಿದ್ದೇನೆಂದು ತಿಳಿಸಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಗ್ರಾಹಕರೇ ಎಚ್ಚರ...: Gas crisis ಸೈಬರ್ ವಂಚಕರಿಗೆ ಬಂಡವಾಳ; ಈ ಬಗ್ಗೆ ತಿಳಿದಿರಬೇಕಾದ ಮಾಹಿತಿ ಇದು...

ಅಮೆರಿಕ-ಇರಾನ್ ಯುದ್ಧದ ಬೆನ್ನಲ್ಲೇ ಕದನಕ್ಕೆ ಉತ್ತರ ಕೊರಿಯಾ ಎಂಟ್ರಿ; ಕಿಮ್ ಮಾಡ್ತಿರೋದೇನು? ಜಗತ್ತಿಗೆ ಹೊಸ Tension?

ದೇಶದಲ್ಲಿ ವಾಣಿಜ್ಯ LPG ಸಿಲಿಂಡರ್ ಕೊರತೆ: ಬಿಜೆಪಿ ಸೃಷ್ಟಿಸಿದ ಬಿಕ್ಕಟ್ಟು- ಪ್ರಿಯಾಂಕ್ ಖರ್ಗೆ ಕಿಡಿ!

ಇರಾನ್‌ನ 'ಮುಕುಟ'ದಂತಿದ್ದ ಖಾರ್ಗ್ ಮೇಲೆ ಬಾಂಬ್ ದಾಳಿ: ದ್ವೀಪ ಸಂಪೂರ್ಣ ಧ್ವಂಸ; ಮಾಹಿತಿ ಹಂಚಿಕೊಂಡ ಟ್ರಂಪ್

ಟ್ರಂಪ್ ಎಚ್ಚರಿಕೆಗೆ ತಲೆಬಾಗದ ಇರಾನ್​: ಸೌದಿ ನೆಲೆಯಲ್ಲಿ ಕ್ಷಿಪಣಿ ದಾಳಿ; ಅಮೆರಿಕಾದ 5 ಟ್ಯಾಂಕರ್ ವಿಮಾನಗಳಿಗೆ ಹಾನಿ..!

SCROLL FOR NEXT