ಪ್ರತಿಭಟನಾ ಸ್ಥಲದಲ್ಲಿ ಪೊಲೀಸರು 
ರಾಜ್ಯ

ಕೃಷಿ ಮಸೂದೆ: ಸಿಎಂ ಮಾತಿಗೆ ಸಮಾಧಾನಗೊಳ್ಳದ ರೈತರು, ಪ್ರತಿಭಟನೆ ಮುಂದುವರೆಸಲು ನಿರ್ಧಾರ

ರೈತರಿಗೆ ಮಾರಕವಾಗಿರುವ ಮಸೂದೆಗಳನ್ನು ಕೈಬಿಡುವಂತೆ ಆಗ್ರಹಿಸಿ ಸೆ.28ಕ್ಕೆ ರಾಜ್ಯ ಬಂದ್'ಗೆ ಕರೆ ನೀಡಿರುವ ರೈತ, ಕಾರ್ಮಿಕ ಮತ್ತು ದಲಿತ ಸಂಘಟನೆಗಳ ಐಕ್ಯ ಹೋರಾಟ ಸಮಿತಿಯ ಸದಸ್ಯರೊಂದಿಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಶುಕ್ರವಾರ ನಡೆಸಿದ ಸಂಧಾನ ಸಭೆ ವಿಫಲವಾಗಿದ್ದು, ಸೋಮವಾರ ಬಂದ್ ನಡೆಸುವುದು ನಿಶ್ಚಿತವಾಗಿದೆ. 

ಬೆಂಗಳೂರು: ರೈತರಿಗೆ ಮಾರಕವಾಗಿರುವ ಮಸೂದೆಗಳನ್ನು ಕೈಬಿಡುವಂತೆ ಆಗ್ರಹಿಸಿ ಸೆ.28ಕ್ಕೆ ರಾಜ್ಯ ಬಂದ್'ಗೆ ಕರೆ ನೀಡಿರುವ ರೈತ, ಕಾರ್ಮಿಕ ಮತ್ತು ದಲಿತ ಸಂಘಟನೆಗಳ ಐಕ್ಯ ಹೋರಾಟ ಸಮಿತಿಯ ಸದಸ್ಯರೊಂದಿಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಶುಕ್ರವಾರ ನಡೆಸಿದ ಸಂಧಾನ ಸಭೆ ವಿಫಲವಾಗಿದ್ದು, ಸೋಮವಾರ ಬಂದ್ ನಡೆಸುವುದು ನಿಶ್ಚಿತವಾಗಿದೆ. 

ರಾಜ್ಯದಲ್ಲಿ ರೈತರ ಪ್ರತಿಭಟನೆಗಳು ತೀವ್ರಗೊಂಡ ಹಿನ್ನೆಲೆಯಲ್ಲಿ ನಿನ್ನೆ ರೈತರ ಮುಖಂಡರೊಂದಿಗೆ ಸಿಎಂ ಯಡಿಯೂರಪ್ಪ ಅವರು ಸಭೆ ನಡೆಸಿ ಮಾತುಕತೆ ನಡೆಸಿದರು. ಸಭೆಯಲ್ಲಿ ರೈತರ ಆಗ್ರಹಗಳನ್ನು ಆಲಿಸಿದ ಮುಖ್ಯಮಂತ್ರಿಗಳು, ಭೂ ಸುಧಾರಣಾ ತಿದ್ದುಪಡಿ ಹಾಗೂ ಎಪಿಎಂಸಿ ಮಸೂದೆಗಳನ್ನು ಕೈಬಿಡಬೇಕು ಎಂಬ ಕೋರಿಕೆ ಒಪ್ಪಲು ನಿರಾಕರಿಸಿದ್ದರು, ಅಲ್ಲದೆ, ಕೇಂದ್ರ ಸರ್ಕಾರದ ನಿರ್ದೇಶನದಂತೆ ಇವುಗಳನ್ನು ಜಾರಿಗೆ ತರಲಾಗುತ್ತದೆ ಎಂದು ತಿಳಿಸಿದ್ದಾರೆ. 

ಇದಕ್ಕೆ ಬೇಸರಗೊಂಡಿರುವ ರೈತ ಮುಖಂಡರು ಪ್ರತಿಭಟನೆ ಕೈಬಿಡಲು ಸಾಧ್ಯವಿಲ್ಲ. ಸೆ.23 ರಂದು ಕರೆ ನೀಡಿರುವ ರಾಜ್ಯ ಬಂದ್ ನಡೆಸುವುದು ನಿಶ್ಚಿತ ಎಂದು ತಿಳಿಸಿದ್ದಾರೆ. 

ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇಖರ್​ ಮಾತನಾಡಿ, ಕೇಂದ್ರ ಸರ್ಕಾರ ಜಾರಿಗೆ ತರಲು ಹೊರಟಿರುವ ಮಸೂದೆಗಳು ರೈತವಿರೋಧಿಯಾಗಿದೆ. ಇವುಗಳನ್ನು ಹಿಂಪಡೆಯಬೇಕು ಎಂದು ಆಗ್ರಹಿಸಿ ಮುಂಗಾರು ಅಧಿವೇಶನ ಪ್ರಾರಂಭವಾದಾಗಿನಿಂದ ನಗರದ ಫ್ರೀಡಂ ಪಾರ್ಕ್'ನಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ. ಇಂದು ರಾಜ್ಯದಾದ್ಯಂತ ನಡೆದ ಸಾಂಕೇತಿಕ ಪ್ರತಿಭಟನೆ ತೀವ್ರವಾಗಿದೆ ಈ ಹಿನ್ನೆಲೆಯಲ್ಲಿ ರೈತ ಸಂಘಟನೆ ಮುಖಂಡರ ಜೊತೆಗೆ ಮುಖ್ಯಮಂತ್ರಿಗಳು ಮಾತುಕತೆ ನಡೆಸಿದರು. ಮಾಸೂದೆಗಳನ್ನು ಹಿಂಪಡೆಯಲು ಸಾಧ್ಯವಿಲ್ಲ ಎಂದು ತಿಳಿಸಿದ್ದಾರೆ. 

ಕಾಯ್ದೆಯಲ್ಲಿ ಯಾವುದೇ ಬದಲಾವಣೆ ಸಾಧ್ಯವಿಲ್ಲ. ಬದಲಾದಲ್ಲಿ ಜಮೀನು ಹೊಂದುವ ಮಿತಿ ಕಡಿಮೆ ಮಾಡುವ ಬಗ್ಗೆ ಭರವಸೆ ನೀಡಿದ್ದಾರೆ. ಆದರೆ, ಇದಕ್ಕೆ ನಮ್ಮ ಒಪ್ಪಿಗೆ ಇಲ್ಲ. ಈ ಹಿನ್ನೆಲೆಯಲ್ಲಿ ಬಂದ್ ಮಾಡುತ್ತೇವೆಂದು ಸ್ಪಷ್ಟಪಡಿಸಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಬಂಗಾಳದಲ್ಲಿ ಬದಲಾವಣೆಯ ಪರ್ವ: ಗಡಿ ಸುರಕ್ಷತೆಗೆ ಆದ್ಯತೆ: BSFಗೆ ಭೂಮಿ ಹಸ್ತಾಂತರಿಸಲು ಸುವೇಂದು ಸರ್ಕಾರ ಅಸ್ತು, ಮೊದಲ ಸಂಪುಟ ಸಭೆಯಲ್ಲೇ ಮಹತ್ವದ ನಿರ್ಧಾರ..!

'ಇನ್ನೊಂದ್ ವರ್ಷ ಖರೀದಿ ಮಾಡ್ಬೇಡಿ..'.: ಪ್ರಧಾನಿ ಮೋದಿ ಕರೆ ಬೆನ್ನಲ್ಲೇ ಪಾತಾಳಕ್ಕೆ ಕುಸಿದ ಚಿನ್ನಾಭರಣ ಷೇರು

ಎರಡು ವರ್ಷದವೆರೆಗಿನ 'ಸಮ್ಮತಿಯ ಲೈಂಗಿಕ ಸಂಬಂಧ' ಅತ್ಯಾಚಾರವೇ? ಕೋರ್ಟ್ ಹೇಳಿದ್ದೇನು!

IPL 2026: ಮುಂಬೈ ಇಂಡಿಯನ್ಸ್ ವಿರುದ್ಧ ಗೆಲುವು ಸಾಧಿಸುತ್ತಲೇ ಅಸಭ್ಯ ವರ್ತನೆ ತೋರಿದ ಸ್ಟಾರ್ ಬ್ಯಾಟರ್ Tim David, ಬಿಸಿಸಿಐ ಕೆಂಗಣ್ಣು!

West Asia war ಎಫೆಕ್ಟ್: ಭಾರತೀಯ ಷೇರು ಮಾರುಕಟ್ಟೆಯಲ್ಲಿ ರಕ್ತಪಾತ; ಸೆನ್ಸೆಕ್ಸ್ 1,000 ಅಂಕ ಕುಸಿತ, ಹೂಡಿಕೆದಾರರಲ್ಲಿ ಹೆಚ್ಚಿದ ಆತಂಕ

SCROLL FOR NEXT