ಸಂಗ್ರಹ ಚಿತ್ರ 
ರಾಜ್ಯ

ಜಾಹೀರಾತು ಫಲಕ ಅನುಮತಿ ದುರ್ಬಳಕೆ: ಆರೋಗ್ಯ ಇಲಾಖೆ ನಿರ್ದೇಶಕರ ವಿರುದ್ಧ ಹೈಕೋರ್ಟ್ ಗರಂ, ತನಿಖೆಗೆ ಆದೇಶ

ಜಾಹೀರಾತು ಫಲಕ ಕುರಿತು ನ್ಯಾಯಾಲಯ ನೀಡಿದ್ದ ಅನುಮತಿಯನ್ನು ಆರೋಗ್ಯ ಇಲಾಖೆಯ ನಿರ್ದೇಶಕರು ದುರ್ಬಳಕೆ ಮಾಡಿಕೊಂಡಿದ್ದಾರೆಂದು ಹೈಕೋರ್ಟ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ. 

ಬೆಂಗಳೂರು: ಜಾಹೀರಾತು ಫಲಕ ಕುರಿತು ನ್ಯಾಯಾಲಯ ನೀಡಿದ್ದ ಅನುಮತಿಯನ್ನು ಆರೋಗ್ಯ ಇಲಾಖೆಯ ನಿರ್ದೇಶಕರು ದುರ್ಬಳಕೆ ಮಾಡಿಕೊಂಡಿದ್ದಾರೆಂದು ಹೈಕೋರ್ಟ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ. 

ಸಾರ್ವಜನಿಕರ ಹಿತ ದೃಷ್ಟಿಯಿಂದ ಫಲಕ ಅಳವಡಿಸಿಕೊಳ್ಳಲು 2020ರ ಜುಲೈ 15ರಂದು ಅನುಮತಿ ನೀಡಲಾಗಿತ್ತು. ಆದರೆ, ಖಾಸಗಿ ಕಂಪನಿಗಳ ಲಾಂಛನಗಳನ್ನು ಬಳಸಿ ಉತ್ಪನ್ನಗಳ ಜಾಹೀರಾತಿಗೆ ಅವಕಾಶ ನೀಡಲಾಗಿದೆ. ಸರ್ಕಾರ ನ್ಯಾಯಾಲಯದ ಆದೇಶವನ್ನು ದುರ್ಬಳಕೆ ಮಾಡಿಕೊಳ್ಳಲಾಗಿದೆ ಎಂದು ಮುಖ್ಯ ನ್ಯಾಯಮೂರ್ತಿ ಎಸ್ಎಸ್ ಓಕಾ ನೇತೃತ್ವದ ವಿಭಾಗೀಯ ಪೀಠ ಅಸಮಾಧಾನ ವ್ಯಕ್ತಪಡಿಸಿತು. 

ಅಲ್ಲದೆ, ಅನುಮತಿಯನ್ನು ಹಿಂಪಡೆದಿರುವ ನ್ಯಾಯಪೀಠ, ಈಗಾಗಲೇ ಅಳವಡಿಸಿರುವ ಫಲಕಗಳನ್ನು ಎರಡು ವಾರದಲ್ಲಿ ತೆರವುಗೊಳಿಸಬೇಕು. ಜಾಹೀರಾತು ಪ್ರದರ್ಶಿಸಿದ ಖಾಸಗಿ ಕಂಪನಿಗಳಿಂದ ತೆರಿಗೆ ವಸೂಲಿ ಮಾಡುವಂತೆ ರಾಜ್ಯ ಸರ್ಕಾರಕ್ಕೆ ಪತ್ರ ಬರೆಯಲು ಬಿಬಿಎಂಪಿಗೆ ಪೀಠ ನಿರ್ದೇಶನ ನೀಡಿದೆ. 

ಖಾಸಗಿ ಕಂಪನಿಗಳ ಜಾಹೀರಾತು ಪ್ರದರ್ಶನಕ್ಕೆ ಅವಕಾಶ ನೀಡಿದ ಆರೋಗ್ಯ ಇಲಾಖೆ ನಿರ್ದೇಶಕರ ವಿರುದ್ಧ ತನಿಖೆಗೆ ಉನ್ನತ ಅಧಿಕಾರಿಯನ್ನು ಸರ್ಕಾರ ನೇಮಿಸಬೇಕು. 6 ವಾರಗಳಲ್ಲಿ ತನಿಖಾ ವರದಿ ಸಲ್ಲಿಸಬೇಕು. ಜಾಹೀರಾತು ಪ್ರದರ್ಶಿಸಿದ ಖಾಸಗಿ ಸಂಸ್ಥೆಗಳಿಂದ ಹಣ ಸ್ವೀಕರಿಸಲಾಗಿದೆಯೇ ಎಂಬುದನ್ನೂ ವಿವರಿಸಬೇಕು’ ಎಂದು ಪೀಠ ತಿಳಿಸಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಾದ್ಯಂತ ಭಾರೀ ಮಳೆ: ಪ್ರವಾಹ, ಭೂಕುಸಿತದಿಂದ ಐವರು ಸಾವು; ಕೊಚ್ಚಿ ಹೋದ ಸೇತುವೆ; Video

Indian Navy ಗೆ ಮತ್ತಷ್ಟು ಬಲ: INS Udaygiri, INS Himgiri ಯುದ್ಧನೌಕೆಗಳು ಸೇರ್ಪಡೆ! Video

'ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ'.. 'ಅಧಿಕಾರದಲ್ಲಿ ಉಳಿಯಲು DK Shivakumar ಕ್ಷಮೆಯಾಚನೆ': BJP-JDS ಟೀಕಾ ಪ್ರಹಾರ!

Indre Nemdiyag Irbek: ಯೂ ಟ್ಯೂಬ್ ನಲ್ಲಿ ಧೂಳೆಬ್ಬಿಸುತ್ತಿರುವಂತೆ ವಿವಾದಕ್ಕೆ ಗುರಿಯಾದ Devil ಸಾಂಗ್! ಟ್ಯೂನ್ ಕದ್ದ ಆರೋಪ!

ಬಿಹಾರ: ಇನ್ನು 40-50 ವರ್ಷ ಅಧಿಕಾರದಲ್ಲಿ ಇರ್ತೀವಿ ಅಂತಾ ಅಮಿತ್ ಶಾ ಗೆ ಹೇಗೆ ಗೊತ್ತು? ರಾಹುಲ್ ಗಾಂಧಿ

SCROLL FOR NEXT