ರಾಜ್ಯ

ಶಿವಮೊಗ್ಗ: ಕೊವಿಡ್-19ಗೆ ಎಎಸ್ಐ ಬಲಿ

Srinivasamurthy VN

ಶಿವಮೊಗ್ಗ: ಮಾರಕ ಕೊರೊನಾ ಸೋಂಕಿಗೆ ರಾಜ್ಯದ ಮತ್ತೋರ್ವ ಪೊಲೀಸ್ ಆಧಿಕಾರಿ ಬಲಿಯಾಗಿದ್ದಾರೆ.

ಶಿವಮೊಗ್ಗ  ಜಿಲ್ಲೆಯ ಪೊಲೀಸ್ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಎಎಸ್‌ಐ ಮಂಜುನಾಥ್ (58) ಅವರು ಕೊರೋನ ಸೋಂಕಿಗೆ ತುತ್ತಾಗಿ, ಚಿಕಿತ್ಸೆ ಫಲಕಾರಿಯಾಗದೆ ಶನಿವಾರ ಮೃತಪಟ್ಟಿದ್ದಾರೆ.

ಮೃತ ಮಂಜುನಾಥ್ ಶಿವಮೊಗ್ಗದ ಸಿಇಎನ್ ಪೊಲೀಸ್ ಠಾಣೆಯಲ್ಲಿ ಎಎಸ್‌ಐ ಆಗಿ ಕಾರ್ಯ ನಿರ್ವಹಿಸುತ್ತಿದ್ದರು. ಜಿಲ್ಲೆಯ ಅಪರಾಧ ವಿಭಾಗದಲ್ಲಿ ಹಲವಾರು ವರ್ಷಗಳಿಂದ ಉತ್ತಮ ಸೇವೆ ಸಲ್ಲಿಸಿದ್ದ ಇವರು, ಕೊರೋನ ಸೋಂಕಿಗೆ ಒಳಗಾಗಿ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆ ಫಲಕಾರಿಯಾಗದ ಪರಿಣಾಮ ಶನಿವಾರ ಕೊನೆಯುಸಿರೆಳೆದಿದ್ದಾರೆ. ಇಲಾಖೆಗೆ ಉತ್ತಮ ಸೇವೆ ನೀಡಿದ್ದ ಮಂಜುನಾಥ್ ಅಗಲಿಕೆಗೆ ಜಿಲ್ಲಾ ಪೊಲೀಸ್ ಇಲಾಖೆ ಕಂಬನಿ ಮಿಡಿದಿದೆ.

SCROLL FOR NEXT