ಸಚಿವ ಸೋಮಶೇಖರ್ 
ರಾಜ್ಯ

ರೈತರು ಕರೆ ನೀಡಿರುವ ಬಂದ್ ರಾಜಕೀಯ ಪ್ರೇರಿತ: ಸಚಿವ ಸೋಮಶೇಖರ್ ಹೇಳಿಕೆಗೆ ಮೈಸೂರಿನಲ್ಲಿ ಪ್ರತಿಭಟನೆ

ರೈತ ಮುಖಂಡರು ಕರೆ ನೀಡಿರುವ ಕರ್ನಾಟಕ ಬಂದ್ ರಾಜಕೀಯ ಪ್ರೇರಿತ ಎಂಬ ಸಚಿವ ಸೋಮಶೇಖರ್ ಅವರ ಹೇಳಿಕೆಗೆ ರೈತ ಮುಖಂಡರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮೈಸೂರು: ರೈತ ಮುಖಂಡರು ಕರೆ ನೀಡಿರುವ ಕರ್ನಾಟಕ ಬಂದ್ ರಾಜಕೀಯ ಪ್ರೇರಿತ ಎಂಬ ಸಚಿವ ಸೋಮಶೇಖರ್ ಅವರ ಹೇಳಿಕೆಗೆ ರೈತ ಮುಖಂಡರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕರ್ನಾಟಕ ಬಂದ್'ಗೆ ರೈತರು ಕರೆ ಕೊಟ್ಟಿಲ್ಲ. ಕೆಲವು ಸಂಘಟನೆಗಳು ಬಂದ್'ಗೆ ಕರೆ ಕೊಟ್ಟಿವೆ. ಇದಕ್ಕೆ ರೈತರ ಬೆಂಬಲ ಇಲ್ಲ. ಆದರೆ, ರೈತರ ಹೆಸರಿನಲ್ಲಿ ಕೆಲ ಸಂಘಟನೆಗಳು ರಾಜಕೀಯ ಮಾಡುತ್ತಿವೆ ಎಂದು ಸಚಿವ ಎಸ್'ಟಿ ಸೋಮಶೇಖರ್ ಅವರು ಹೇಳಿಕೆ ನೀಡಿತ್ತು. 

ಸಿದ್ಧಾರ್ಥನಗರದಲ್ಲಿರುವ ಹೊಸ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸಚಿವರ ಅಧ್ಯಕ್ಷತೆಯಲ್ಲಿ ದಸರಾ ಕುರಿತು ಪೂರ್ವ ಸಿದ್ಧತಾ ಸಭೆ ನಿಗದಿಯಾಗಿತ್ತು. ಈ ವಿಚಾರ ತಿಳಿದ ರೈತ, ದಲಿತ, ಕಾರ್ಮಿಕ ಐಕ್ಯ ಹೋರಾಟ ಸಮಿತಿಯವರು ಅಲ್ಲಿಗೆ ಧಾವಿಸಿ ದಿಢೀರ್ ಪ್ರತಿಭಟನೆ ನಡೆಸಿ ಘೇರಾವ್ ಹಾಕಲು ಯತ್ನಿಸಿದರು. 

ಈ ವೇಳೆ ರೈತ ಮುಖಂಡರು, ಪೊಲೀಸರ ನಡುವೆ ಮಾತಿನ ಚಕಮಕಿ ನಡೆದಿದ್ದು, ಕೆಲವರನ್ನು ಪೊಲೀಸರು ಬಂಧನಕ್ಕೊಳಪಡಿಸಿದ್ದಾರೆಂದು ತಿಳಿದುಬಂದಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

SCROLL FOR NEXT